ಬಿಹಾರ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಿನ್ನೆ ನಡೆದಿದ್ದು, ಫಲಿತಾಂಶ ಹೊರಬಿದ್ದಿದೆ. ಈ ಬೆನ್ನಲ್ಲೇ ಅಸ್ವಸ್ಥರಾಗಿದ್ದ ಜನ ಸುರಾಜ್ ಪಕ್ಷದ ಅಭ್ಯರ್ಥಿ, ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ್ ಸಿಂಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮತ ಎಣಿಕೆ ಪ್ರಕ್ರಿಯೆ ಆರಂಭವಾಗುವುದಕ್ಕೂ ಮುನ್ನವೇ ಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸಿಂಗ್ಗೆ ಹೃದಯಾಘಾತವಾಗಿದ್ದು, ಅವರನ್ನು ಪಟನಾದ ರೂಬನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮಧ್ಯಾಹ್ನದ ಬಳಿಕ ಸ್ಥಿತಿ ಹದಗೆಟ್ಟಿದ್ದು, ಸಂಜೆ 4 ಗಂಟೆಗೆ ಮತ್ತೆ ಹೃದಯಾಘಾತವಾಗಿದೆ, ಸಂಜೆ 7 ಗಂಟೆಗೆ ನಿಧನರಾಗಿದ್ದಾರೆ.
ಇದನ್ನು ಓದಿದ್ದೀರಾ? ಬಿಹಾರ ಚುನಾವಣೆ | ಚಿರಾಗ್ರ ‘ಎಲ್ಜೆಪಿ’ – ಪ್ರಶಾಂತ್ ಕಿಶೋರ್ರ ‘ಜನ ಸುರಾಜ್’ ಮೈತ್ರಿ?
ಅಕ್ಟೋಬರ್ 31ರಂದು ಪ್ರಚಾರದ ವೇಳೆಯೇ ಸಿಂಗ್ ಅವರ ಆರೋಗ್ಯ ಹದಗೆಟ್ಟಿತ್ತು. ಅಂದೂ ರೂಬನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರಿಗೆ ಮೂತ್ರಪಿಂಡ ವೈಫಲ್ಯವಿದೆ ಎಂದು ಹೇಳಿದ್ದರು.
ಈ ಹಿಂದೆ ಶಿಕ್ಷಕರ ಸಂಘದ ಸಕ್ರಿಯ ಸದಸ್ಯರಾಗಿದ್ದ ಸಿಂಗ್ ಅವರು ಬ್ರಹ್ಮರ್ಷಿ ಸಮಾಜದ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಒಕ್ಕೂಟ 202 ಸ್ಥಾನಗಳಲ್ಲಿ ಗೆಲುವು ಕಂಡಿದೆ. ಮಹಾಘಟಬಂಧನ 35 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಜನ ಸುರಾಜ್ ಪಕ್ಷ ಯಾವುದೇ ಕ್ಷೇತ್ರದಲ್ಲಿ ಗೆಲುವು ಕಂಡಿಲ್ಲ.





