ಸಂಘಪರಿವಾರದ ವಿರೋಧಕ್ಕೆ ಸಿಲುಕಿದ್ದ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನ ಮಾನ್ಯತೆ ರದ್ದು!

Date:

ದಿಢೀರ್ ತಪಾಸಣೆ ನಡೆಸಿದ ರಾಷ್ಟ್ರೀಯ ವೈದ್ಯಕೀಯ ಆಯೋಗವು (NMC) ಜಮ್ಮುವಿನಲ್ಲಿ ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನ ಮಾನ್ಯತೆಯನ್ನು ರದ್ದುಗೊಳಿಸಿದೆ. ಶಿಕ್ಷಣ ಸಂಸ್ಥೆಯು ನೀಟ್ ರ‍್ಯಾಂಕಿಂಗ್‌ ಆಧಾರದಲ್ಲಿ ಬಿಡುಗಡೆ ಮಾಡಿದ ವಿದ್ಯಾರ್ಥಿಗಳ ಪ್ರವೇಶ ಪಟ್ಟಿಯಲ್ಲಿ ಶೇ.90ರಷ್ಟು ಮುಸ್ಲಿಮರೇ ಇದ್ದಾರೆ ಎಂದು ಆರ್‌ಎಸ್‌ಎಸ್‌ಗೆ ಸೇರಿದ ಸಂಘಟನೆಗಳು ತಗಾದೆ ತೆಗೆದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ವೈದ್ಯಕೀಯ ಸಂಸ್ಥೆ ಕನಿಷ್ಠ ಮಾನದಂಡವನ್ನೂ ಪೂರೈಸುತ್ತಿಲ್ಲ ಎಂದು ಹೇಳಿ ಈಗ ದಿಢೀರ್ ಆಗಿ ಮಾನ್ಯತೆಯನ್ನೇ ರದ್ದು ಮಾಡಲಾಗಿದೆ.

ಈ ಸಂಬಂಧ ಜನವರಿ 6ರಂದು ಆದೇಶ ಹೊರಡಿಸಲಾಗಿದೆ. ಮೂಲಸೌಕರ್ಯ, ಅಧ್ಯಾಪಕ ಕೊರತೆ ಮತ್ತು ಕ್ಲಿನಿಕಲ್ ಸೌಲಭ್ಯಗಳಲ್ಲಿ ಗಂಭೀರ ನ್ಯೂನತೆಯಿದೆ ಎಂದು ಹೇಳಿ ಸಂಸ್ಥೆಯು MBBS ಕೋರ್ಸ್ ಮುಂದುವರಿಸುವುದಕ್ಕೆ ಅನುಮತಿಯನ್ನು ನಿರಾಕರಿಸಿದೆ.

ಇದನ್ನು ಓದಿದ್ದೀರಾ? ವೈಷ್ಣೋದೇವಿ ವೈದ್ಯಕೀಯ ಕಾಲೇಜು | ಶೇ.90 ಮುಸ್ಲಿಂ ದಾಖಲಾತಿ; ‘ನೀಟ್’ ಪಟ್ಟಿ ರದ್ದು ಮಾಡಲು ಆರೆಸ್ಸೆಸ್ ಪರಿವಾರ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ, 2025–26ರ ಬ್ಯಾಚ್‌ನಲ್ಲಿ ಪ್ರವೇಶ ಪಡೆದ ಎಲ್ಲಾ 50 MBBS ವಿದ್ಯಾರ್ಥಿಗಳನ್ನು ಜಮ್ಮು ಮತ್ತು ಕಾಶ್ಮೀರದ ಇತರ ಮಾನ್ಯತೆ ಪಡೆದ ವೈದ್ಯಕೀಯ ಕಾಲೇಜುಗಳ ಹೆಚ್ಚುವರಿ ಸೀಟುಗಳಾಗಿ ಸ್ಥಳಾಂತರಿಸಬೇಕೆಂದು ಎನ್‌ಎಂಸಿ ನಿರ್ದೇಶಿಸಿದೆ. ಯಾವುದೇ ವಿದ್ಯಾರ್ಥಿಗೆ ತೊಂದರೆ ಆಗದಂತೆ ಸುಗಮ ವರ್ಗಾವಣೆ ನಡೆಸಲು ಕೇಂದ್ರಾಡಳಿತ ಪ್ರದೇಶದ ಕೌನ್ಸೆಲಿಂಗ್ ಮತ್ತು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇದೇ ಕಾಲೇಜಿನ ವಿರುದ್ಧವಾಗಿ ಇತ್ತೀಚೆಗೆ ಸಂಘಪರಿವಾರ ಪ್ರತಿಭಟನೆ ನಡೆಸಿತ್ತು. ನೀಟ್ ರ‍್ಯಾಂಕಿಂಗ್‌ ಆಧಾರದಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಶೇ.90ರಷ್ಟು ಕಾಶ್ಮೀರದ ಮುಸ್ಲಿಮರು ಇರುವುದನ್ನು ವಿರೋಧಿಸಿತ್ತು. ನೀಟ್ ಪಟ್ಟಿ ಬದಿಗೊತ್ತಿ, ಹಿಂದೂಗಳಿಗೆ ದಾಖಲಾತಿ ನೀಡಬೇಕು ಎಂದು ಕೋಮು ರಾಜಕಾರಣಕ್ಕೆ ಇಳಿದಿತ್ತು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳ ನಡೆಸಿದ ಪ್ರತಿಭಟನೆಯನ್ನು ಬೆಂಬಲಿಸಿದ ಉಧಂಪುರದ ಬಿಜೆಪಿ ಶಾಸಕ ಆರ್‌ಎಸ್‌ ಪಠಾನಿಯಾ, “ವೈಷ್ಣೋದೇವಿ ದೇಗುಲಕ್ಕೆ ನೀಡುವ ದೇಣಿಗೆಗಳಿಂದ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಆದರೆ ಇಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳ ಪ್ರಾಬಲ್ಯವಿದೆ. ಹಿಂದೂಗಳಿಗೆ ಇಲ್ಲಿ ಮೀಸಲಾತಿ ನೀಡಬೇಕು” ಎಂದು ವಾದಿಸಿದ್ದರು. ಆದರೆ ವಾಸ್ತವದಲ್ಲಿ ಈ ವೈದ್ಯಕೀಯ ಕಾಲೇಜನ್ನು ಅಲ್ಪಸಂಖ್ಯಾತ ಸಂಸ್ಥೆ ಎಂದು ವರ್ಗೀಕರಿಸಿಯೇ ಇಲ್ಲ! ಅಲ್ಪಸಂಖ್ಯಾತ ಸಂಸ್ಥೆ ಎಂದು ವರ್ಗೀಕರಿಸಿದ್ದರೆ ಮಾತ್ರ ನಿರ್ದಿಷ್ಟ ಸಮುದಾಯಕ್ಕೆ ಮೀಸಲಾತಿ ನೀಡುವ ಅವಕಾಶವಿರುತ್ತದೆ.

ಬಿಜೆಪಿ, ಆರ್‌ಎಸ್‌ಎಸ್‌ನ ಕೋಮು ರಾಜಕೀಯ ನಡೆಸಿದ ಬೆನ್ನಲ್ಲೇ ಇದೀಗ ರಾಷ್ಟ್ರೀಯ ವೈದ್ಯಕೀಯ ಆಯೋಗವು ಅದೇ ಕಾಲೇಜಿಗೆ ದಿಢೀರ್ ಆಗಿ ಭೇಟಿ ನೀಡಿ ತಪಾಸಣೆ ನಡೆಸಿ ಮಾನ್ಯತೆ ರದ್ದುಗೊಳಿಸಿರುವುದು ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...