ಪಶ್ಚಿಮ ಬಂಗಾಳ | ಪ್ರಧಾನಿ ಚುನಾವಣಾ ರ್‍ಯಾಲಿ ಬಳಿಕ ಟಿಎಂಸಿಯಿಂದ ಮೋದಿ ಹೇಳಿಕೆಗಳ ಫ್ಯಾಕ್ಟ್‌ಚೆಕ್!

Date:

ಪಶ್ಚಿಮ ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿಯಾಗಿ ರ್‍ಯಾಲಿ ನಡೆಸಿ ಚುನಾವಣಾ ಪ್ರಚಾರ ಮಾಡಿದ ಕೆಲವೇ ಗಂಟೆಗಳಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಧಾನಿಯ ಹೇಳಿಕೆಗಳನ್ನು ಪಟ್ಟಿ ಮಾಡಿ ಅದರ ಫ್ಯಾಕ್ಟ್‌ಚೆಕ್ ಮಾಡಿದೆ.

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ, ಆಡಳಿತಾರೂಢ ಟಿಎಂಸಿ ಮತ್ತು ರಾಜ್ಯದಲ್ಲಿನ ಈ ಹಿಂದಿನ ಎಡರಂಗ ಸರ್ಕಾರವು ಅಭಿವೃದ್ಧಿಗೆ ಬ್ರೇಕ್ ಹಾಕಿದೆ. ಈ ಎರಡೂ ಪಕ್ಷಗಳು ತಮ್ಮ ಆಡಳಿತದಲ್ಲಿ ಬಂಗಾಳದ ಹಿರಿಮೆ, ಜಾಗತಿಕ ಇಮೇಜ್ ಮತ್ತು ಘನತೆಯನ್ನು ಹಾಳುಮಾಡಿದೆ ಎಂದು ಆರೋಪಿಸಿದ್ದರು.

ಕೋಲ್ಕತ್ತಾ ಹೈಕೋರ್ಟ್ ಇತ್ತೀಚೆಗೆ ರಾಜ್ಯದಲ್ಲಿ 25,000 ಕ್ಕೂ ಹೆಚ್ಚು ನೇಮಕಾತಿಗಳನ್ನು ರದ್ದುಗೊಳಿಸಿದೆ. ಇದರಿಂದಾಗಿ ಬೋಧಕ ಹುದ್ದೆಗಳ ನೇಮಕಾತಿಗಳಲ್ಲಿನ ಅಕ್ರಮ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಪಕ್ಷವು ಮತ್ತೆ ಮುನ್ನೆಲೆಗೆ ಬಂದಿದೆ ಎಂದೂ ಪ್ರಧಾನಿ ದೂರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಕೋರ್ಟ್ ತೀರ್ಪುಗಳ ಮೇಲೆ ಬಿಜೆಪಿ ನಾಯಕರ ಪ್ರಭಾವ: ಮಮತಾ ಬ್ಯಾನರ್ಜಿ ಆಕ್ರೋಶ

“ಪಶ್ಚಿಮ ಬಂಗಾಳವು ದೇಶದ ಅಭಿವೃದ್ಧಿ ಮತ್ತು ಪ್ರಗತಿಯ ಎಂಜಿನ್ ಆಗಿದ್ದ ಸಮಯವಿತ್ತು. ಬಂಗಾಳ ಸಾಮಾಜಿಕ ಸುಧಾರಣೆಗಳು, ವೈಜ್ಞಾನಿಕ ಪ್ರಗತಿಗಳು, ಹಾಗೆಯೇ ತಾತ್ವಿಕ ಮತ್ತು ಆಧ್ಯಾತ್ಮಿಕ ಚಿಂತನೆ ಮತ್ತು ಜಾಗೃತಿಗೆ ದಾರಿ ತೋರಿತ್ತು” ಎಂದು ಪಿಎಂ ಬಹುಪಾಲು ಮುಸ್ಲಿಂ ಮತದಾರರಿರುವ ಮಾಲ್ಡಾ ಜಿಲ್ಲೆಯಲ್ಲಿ ಪ್ರಚಾರದ ವೇಳೆ ಹೇಳಿದ್ದರು.

“ಆದರೆ ಎಡರಂಗ ಮತ್ತು ಪ್ರಸ್ತುತ ಟಿಎಂಸಿ ಆಡಳಿತವು ಜಾಗತಿಕ ಮಟ್ಟದಲ್ಲಿ ಬಂಗಾಳದ ಹಿರಿಮೆಯನ್ನು ಕಸಿದುಕೊಂಡಿದೆ. ಪ್ರಪಂಚದ ದೃಷ್ಟಿಯಲ್ಲಿ ಅದರ ಘನತೆ ಮತ್ತು ಪ್ರತಿಷ್ಠೆಯನ್ನು ಕಡಿಮೆ ಮಾಡಿದೆ. ಟಿಎಂಸಿ ಆಡಳಿತದಲ್ಲಿ ಬಂಗಾಳದಲ್ಲಿ ಕೇವಲ ಸಾವಿರಾರು ಕೋಟಿಗಳ ಹಗರಣಗಳು ಮಾತ್ರ ಕಾಣಿಸುತ್ತಿದೆ” ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು.

ಇದನ್ನು ಓದಿದ್ದೀರಾ?  ಪಶ್ಚಿಮ ಬಂಗಾಳ ರಾಜ್ಯಪಾಲದ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

“ಬಂಗಾಳದಲ್ಲಿ ಹಣ ನೀಡದೆ ಒಂದು ಇಟ್ಟಿಗೆ ಕೂಡಾ ಇಡಲ್ಲ. ಅಷ್ಟೊಂದು ಮಟ್ಟಿಗೆ ರಾಜ್ಯದಲ್ಲಿ ಭ್ರಷ್ಟಾಚಾರವಿದೆ. ಟಿಎಂಸಿ ರೈತರನ್ನೂ ಸಹ ಬಿಡಲಿಲ್ಲ. ಟಿಎಂಸಿ ರಾಜ್ಯದ ಯುವಕರ ಭವಿಷ್ಯದ ಜೊತೆ ಆಟವಾಡಿದೆ. ಈಗ 26,000 ಕುಟುಂಬಗಳಿಗೆ ಉದ್ಯೋಗವಿಲ್ಲದಂತಾಗಿದೆ. ಈ ಉದ್ಯೋಗಗಳಿಗೆ ಬದಲಾಗಿ ಅವರು ಟಿಎಂಸಿಗೆ ಲಂಚ ನೀಡಲು ಪಡೆದ ಸಾಲದ ಹೊರೆಯನ್ನು ಎದುರಿಸುತ್ತಿದ್ದಾರೆ,” ಎಂದು ಹೇಳಿದರು.

ಟಿಎಂಸಿಯ ಫ್ಯಾಕ್ಟ್‌ಚೆಕ್ ಏನು ಹೇಳುತ್ತದೆ?

ಬಿಜೆಪಿ ಸರ್ಕಾರವು ಬಂಗಾಳಕ್ಕೆ ವಿವಿಧ ಯೋಜನೆಗಳ ಅಡಿಯಲ್ಲಿ ಬರೋಬ್ಬರಿ 1.6 ಲಕ್ಷ ಕೋಟಿ ರೂಪಾಯಿ ಹಣವನ್ನು ತಡೆಹಿಡಿದಿದೆ ಎಂದು ತೃಣಮೂಲ ಹೇಳಿದೆ. ಬಿಜೆಪಿ ಮಾತ್ರ ಬಂಗಾಳದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆಗೆ ಈ ಮೂಲಕ ಟಿಎಂಸಿ ಪ್ರತಿಕ್ರಿಯೆ ನೀಡಿದೆ

ಕೌಶಲ್ ವಿಕಾಸ್ ಯೋಜನೆ ಮತ್ತು ಸ್ಟಾರ್ಟ್ ಅಪ್ ಇಂಡಿಯಾ ಕಾರ್ಯಕ್ರಮವು ಯುವಕರನ್ನು ಸಶಕ್ತಗೊಳಿಸಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆಯ ಫ್ಯಾಕ್ಟ್‌ಚೆಕ್ ಮಾಡಿರುವ ಟಿಎಂಸಿ, ಕೌಶಲ್ ವಿಕಾಸ್ ಯೋಜನೆ 2.0 ಗಾಗಿ ಉದ್ಯೋಗ ದರವು ಶೇಕಡ 23 ರಷ್ಟಿದ್ದರೆ, ಪಿಎಂಕೆವಿವೈ 3.0ಗೆ ಉದ್ಯೋಗ ದರವು 8 ಕ್ಕೆ ಇಳಿಕೆಯಾಗಿದೆ ಎಂದು ಹೇಳಿದೆ.

ಬಂಗಾಳದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಲು ಟಿಎಂಸಿ ಕೇಂದ್ರಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಟಿಎಂಸಿ ಈ ಯೋಜನೆಯಡಿಯಲ್ಲಿ ಶೇಕಡ 40ರಷ್ಟು ಹಣವು ರಾಜ್ಯವೇ ನೀಡಬೇಕಾಗುತ್ತದೆ ಎಂದಿದೆ.

“ಬಂಗಾಳವು ಉತ್ತಮ ಆರೋಗ್ಯ ವಿಮಾ ಯೋಜನೆಯನ್ನು ಹೊಂದಿದ್ದು ಅದುವೇ ಸ್ವಾಸ್ಥ್ಯ ಸತಿ ಆಗಿದೆ. ಈ ಯೋಜನೆಯಡಿ 5 ಲಕ್ಷ ರೂಪಾಯಿ ಕವರೇಜ್ ಇದೆ. ಸಂಪೂರ್ಣ ಮೊತ್ತವನ್ನು ರಾಜ್ಯವು ಭರಿಸುತ್ತದೆ. ಸಂಪೂರ್ಣವಾಗಿ ಕಾಗದರಹಿತ, ನಗದು ರಹಿತ, ಇಬ್ಬರೂ ಸಂಗಾತಿಗಳ ಪೋಷಕರಿಗೂ ಇದು ಕವರ್ ಆಗುತ್ತದೆ. ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲರಿಗೂ ಉಚಿತ ಚಿಕಿತ್ಸೆಯಿದೆ” ಎಂದು ಟಿಎಂಸಿ ಹೇಳಿದೆ.

ಸಂದೇಶ್ ಖಾಲಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳ ಬಗ್ಗೆ ಪ್ರಧಾನಿ ಮೋದಿ ಮಮತಾ ಬ್ಯಾನರ್ಜಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಟಿಎಂಸಿ “ಬಂಗಾಳ ಪೊಲೀಸರು ಸಂದೇಶ್ ಖಾಲಿ ಆರೋಪಿಯನ್ನು 72 ಗಂಟೆಗಳಲ್ಲಿ ಬಂಧಿಸಿದೆ” ಎಂದು ಹೇಳಿದೆ. “ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬಿಜೆಪಿ ಸಂಸದರ ವಿರುದ್ಧ ಬಿಜೆಪಿ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಟಿಎಂಸಿ ಪ್ರಶ್ನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...