ಪಾಪ್‌ಕಾರ್ನ್ ಬಳಿಕ ಈಗ ಡೋನಟ್‌ಗೆ ‘ಜಿಎಸ್‌ಟಿಗರ’ ಕಾಟ ಶುರುವಾಗಿದೆ: ಕಾಂಗ್ರೆಸ್

Date:

ಈ ಹಿಂದೆ ಪಾಪ್‌ಕಾರ್ನ್ ಮೇಲೆ ವಿವಿಧ ರೀತಿಯ ಜಿಎಸ್‌ಟಿ ವಿಧಿಸಿದ ಕೇಂದ್ರ ಸರ್ಕಾರ ಇದೀಗ ಡೋನಟ್‌ಗೆ ಬೇರೆ ಬೇರೆ ರೀತಿಯ ಜಿಎಸ್‌ಟಿ ವಿಧಿಸಲು ಮುಂದಾಗಿದೆ. ಈ ವಿಭಿನ್ನ ಜಿಎಸ್‌ಟಿ ದರಗಳನ್ನು ಜಾರಿಗೆ ತಂದ ಕೇಂದ್ರ ಸರ್ಕಾರವನ್ನು ಶನಿವಾರ ಕಾಂಗ್ರೆಸ್ ಟೀಕಿಸಿದೆ. “ಪಾಪ್‌ಕಾರ್ನ್ ಬಳಿಕ ಈಗ ಡೋನಟ್‌ಗೆ ‘ಜಿಎಸ್‌ಟಿಗರ’ ಕಾಟ ಶುರುವಾಗಿದೆ” ಎಂದು ಹೇಳಿದೆ.

ಈ ಬಗ್ಗೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜಿಎಸ್‌ಟಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಈಗ ಡೋನಟ್ ಜಿಎಸ್‌ಟಿಗರಿಂದಾಗಿ ಬಳಲುತ್ತಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಪಾಪ್‌ಕಾರ್ನ್‌ ಮೇಲೆ ಮೂರು ರೀತಿಯ ಜಿಎಸ್‌ಟಿ; ಟ್ರೋಲ್ ಆದ ನಿರ್ಮಲಾ ಸೀತಾರಾಮನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮ್ಯಾಡ್ ಓವರ್ ಡೋನಟ್ಸ್ (ಬೇಕರಿ) ತನ್ನ ಬೇಕರಿ ವಸ್ತುಗಳ ಮೇಲೆ 18% ತೆರಿಗೆ ಇದೆ. ಆದರೆ ಡೋನಟ್‌ಗಳ ಮೇಲೆ ಶೇಕಡ 5ರಷ್ಟು ತೆರಿಗೆ ಪಾವತಿಸಿದ್ದಾರೆ. ಅದಕ್ಕಾಗಿ ಈಗ 100 ಕೋಟಿ ರೂ. ತೆರಿಗೆ ನೋಟಿಸ್ ಎದುರಿಸುವಂತಾಗಿದೆ. ಸದ್ಯ ಈ ವಿಚಾರವು ಬಾಂಬೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಹಾಗೆಯೇ, “ವ್ಯಾಪಾರ ನಡೆಸುವುದು ಈ ಜಿಎಸ್‌ಟಿಯಿಂದಾಗಿ ಸುಲಭ” ಎಂದು ಜೈರಾಮ್ ರಮೇಶ್ ವ್ಯಂಗ್ಯವಾಡಿದ್ದಾರೆ. “ಇದಕ್ಕಾಗಿಯೇ ಜಿಎಸ್‌ಟಿ 2.0 ಅತೀ ತುರ್ತಾದ ನಿರ್ಧಾರ ಎಂದು ಹೇಳುವುದು” ಎಂದಿದ್ದಾರೆ.

ಪಾಪ್‌ಕಾರ್ನ್‌ಗೆ ಹೋಲಿಸಿದರೆ ದೇಶದಲ್ಲಿ ಡೋನಟ್‌ಗಳನ್ನು ಸೇವಿಸುವವರ ಸಂಖ್ಯೆ ಕಡಿಮೆ ಎನ್ನಬಹುದು. ಇಂದಿಗೂ ಡೋನಟ್‌ಗಳು ಶ್ರೀಮಂತರು ಮತ್ತು ಮಧ್ಯಮ ವರ್ಗದ ಕೆಲ ಜನರ ನಡುವೆ ಮಾತ್ರ ಪರಿಚಿತವಾಗಿದೆ.

ಸದ್ಯ ಡೋನಟ್‌ ಅನ್ನು ರೆಸ್ಟೋರೆಂಟ್‌ನಲ್ಲಿ ಮಾರಾಟ ಮಾಡುವ ಸಿಹಿ ತಿನಿಸು ಎಂದು ಪರಿಗಣಿಸಿ ಶೇಕಡ 5ರಷ್ಟು ಜಿಎಸ್‌ಟಿ ವಿಧಿಸುವುದೇ ಅಥವಾ ಬೇಕರಿ ತಿಂಡಿ ಎಂದು ಪರಿಗಣಿಸಿ ಶೇಕಡ 18ರಷ್ಟು ಜಿಎಸ್‌ಟಿ ವಿಧಿಸುವುದೇ ಎಂಬ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿದೆ. ಸದ್ಯ ಇದಕ್ಕೆ ಸಂಬಂಧಿಸಿದ ಅರ್ಜಿಯನ್ನು ಬಾಂಬ್ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಪಾಪ್‌ಕಾರ್ನ್‌ಗೂ ಮೂರು ರೀತಿಯ ಜಿಎಸ್‌ಟಿ ವಿಧಿಸಿರುವ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಟ್ರೋಲ್‌ಗೆ ಒಳಗಾಗಿದ್ದರು. ಜಿಎಸ್‌ಟಿ ಕೌನ್ಸಿಲ್ ಈ ಬಗ್ಗೆ ಸ್ಪಷ್ಟನೆ ನೀಡಿರುವುದನ್ನು ಕೂಡಾ ನೆಟ್ಟಿಗರು ಟ್ರೋಲ್ ಮಾಡಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕೂಡಾ ಕೇಂದ್ರ ಸರ್ಕಾರದ ಜಿಎಸ್‌ಟಿ ನೀತಿಯನ್ನು ವಿರೋಧಿಸಿತ್ತು.

‘ಸಕ್ಕರೆ ಮಿಠಾಯಿ’ ಎಂದು ವರ್ಗೀಕರಿಸಲಾದ ಕಾರಣ ಕ್ಯಾರಮೆಲೈಸ್ಡ್ ಪಾಪ್‌ಕಾರ್ನ್ ಮೇಲೆ ಸಾಲ್ಟೆಡ್ (ಉಪ್ಪು ಮಿಶ್ರಿತ) ಮತ್ತು ಸಾದಾ ಪಾಪ್‌ಕಾರ್ನ್‌ಗಿಂತ ವಿಭಿನ್ನವಾಗಿ ತೆರಿಗೆ ವಿಧಿಸಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದ್ದರು. ಇದರಿಂದಾಗಿ ಭಾರೀ ಟ್ರೋಲ್ ಆಗಿದ್ದರು. ಇದೀಗ ಡೋನಟ್ ಮೇಲಿನ ಜಿಎಸ್‌ಟಿ ವಿಚಾರವನ್ನು ಮುನ್ನಲೆಗೆ ತರುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...