ಕೇರಳ | ಶಬರಿಮಲೆ ಬೆನ್ನಲ್ಲೇ ಮತ್ತೊಂದು ಪ್ರಸಿದ್ಧ ದೇವಾಲಯದಲ್ಲಿ ಚಿನ್ನ, ವಿವಿಧ ಸ್ವತ್ತುಗಳು ನಾಪತ್ತೆ

Date:

ಕೇರಳದ ಶಬರಿಮಲೆ ದೇವಾಲಯದಲ್ಲಿ ಚಿನ್ನ ಕಳವು ಪ್ರಕರಣ ಬಹಿರಂಗವಾದ ಬೆನ್ನಲ್ಲೇ ಮತ್ತೊಂದು ಪ್ರಸಿದ್ಧ ದೇವಾಲಯ ಗುರುವಾಯೂರಿನಲ್ಲಿ ವಿವಿಧ ವಸ್ತುಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. 2019ರ ಲೆಕ್ಕಪರಿಶೋಧನೆಯ ವರದಿಯು ಬಿಡುಗಡೆಯಾಗಿದ್ದು, ಚಿನ್ನ ಮತ್ತು ದಂತ ಸೇರಿದಂತೆ ವಿವಿಧ ಸ್ವತ್ತುಗಳು ನಾಪತ್ತೆಯಾಗಿವೆ ಎಂದು ವರದಿಯಾಗಿದೆ.

ಸರಿಯಾಗಿ ನಿಯಮಗಳನ್ನು ಪಾಲಿಸದೆ ಚಿನ್ನ, ದಂತ ಮೊದಲಾದವುಗಳ ನಿರ್ವಹಣೆ ಮಾಡಲಾಗಿದೆ. ಹಾಗೆಯೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ನಡೆಸುತ್ತಿರುವ ಚಿನ್ನದ ಯೋಜನೆಯಲ್ಲಿ ಠೇವಣಿ ಮಾಡಿದ್ದರಿಂದ 79 ಲಕ್ಷ ರೂ. ನಷ್ಟ ಉಂಟಾಗಿರುವುದನ್ನು ಲೆಕ್ಕಪರಿಶೋಧನೆ ವೇಳೆ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಶಬರಿಮಲೆ ಗರ್ಭಗುಡಿ ದ್ವಾರದ ಚಿನ್ನ ನಾಪತ್ತೆ: ಕದ್ದವರು ಯಾರು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಎಣಿಕೆ ವೇಳೆ ಮಂಜಟ್ಟಿ ಕಾಯಿಗಳು (ಕೆಂಪು ಗುಲಗಂಜಿ) ಕಾಣೆಯಾಗಿವೆ. ಕೇಸರಿ ಹೂವುಗಳನ್ನು ದಾಖಲೆಗಳಲ್ಲಿ ಸೇರಿಸಲಾಗಿಲ್ಲ. ಇದಲ್ಲದೆ, 15 ಲಕ್ಷ ರೂ. ಮೌಲ್ಯದ 2,000 ಕೆಜಿ ಸಾಂಪ್ರದಾಯಿಕವಾಗಿ ಬಳಸಲಾಗುವ ಪಾತ್ರೆಗಳು ಮತ್ತು ತಾಮ್ರ, ಹಿತ್ತಾಳೆ, ಕಂಚಿನಿಂದ ಪಾತ್ರೆಗಳನ್ನು(ಉರುಳಿ) ಲೆಕ್ಕಾಚಾರದಲ್ಲಿ ಸೇರಿಸಲಾಗಿಲ್ಲ. ಇನ್ನು ಪುನ್ನತ್ತೂರು ಆನೆ ಕೋಟೆಯಿಂದ 530 ಕೆಜಿಗೂ ಹೆಚ್ಚು ತೂಕದ ದಂತ ಕಾಣೆಯಾಗಿದೆ ಎಂದು ವರದಿಯಾಗಿದೆ.

ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿರುವ ಗುರುವಾಯೂರು ದೇವಸ್ವಂ ಮಂಡಳಿ ಎಲ್ಲಾ ನ್ಯೂನತೆಗಳನ್ನು ಪರಿಹರಿಸಲಾಗಿದೆ. ಈ ಬಗ್ಗೆ ವಿವರವಾದ ಅಫಿಡವಿಟ್‌ ಅನ್ನು ಕೇರಳ ಹೈಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ಹೇಳಿದೆ. ರಾಜ್ಯ ಸರ್ಕಾರವು ಎಲ್ಲಾ ಗೊಂದಲಗಳನ್ನು ಪರಿಹರಿಸಲಾಗಿದೆ. ಈ ಬಗ್ಗೆ ಅಂತಿಮ ವರದಿಯನ್ನೂ ಶೀಘ್ರವೇ ನೀಡಲಾಗುವುದು ಎಂದು ಹೇಳಿದೆ.

ಆದರೆ ವಿರೋಧ ಪಕ್ಷ ಬಿಜೆಪಿ ಕೇರಳ ಸರ್ಕಾರದ ವಿರುದ್ಧ ವಾಗ್ದಾಳಿ ಆರಂಭಿಸಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯ ಪ್ರದೀಪ್ ಭಂಡಾರಿ, “ಇದು ಎಡ ಸರ್ಕಾರವು ಹಿಂದೂ ಭಕ್ತರಿಗೆ ಮಾಡಿದ ದೊಡ್ಡ ಅವಮಾನ. ಶಬರಿಮಲೆ ಬಳಿಕ ಈಗ ಗುರುವಾಯೂರು ದೇವಾಲಯದ ಖಜಾನೆಯಿಂದ ಚಿನ್ನ ಕಾಣೆಯಾಗಿದೆ ಎಂದು ಲೆಕ್ಕಪರಿಶೋಧನೆಯು ಬಹಿರಂಗಪಡಿಸಿದೆ. ಕೇರಳ ಸರ್ಕಾರ ಪೂಜ್ಯ ದೇವಾಲಯಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ಮತ್ತು ದುರುಪಯೋಗ ಮಾಡುತ್ತಿರುವುದು ಆಘಾತಕಾರಿ” ಎಂದು ಬರೆದುಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...