ಮೃತ ಅಗ್ನಿವೀರರಿಗೆ ಪರಿಹಾರ | ಮೋದಿ ಸರ್ಕಾರ ಹೇಳುತ್ತಿರುವುದರಲ್ಲಿ ನಿಜವೆಷ್ಟು – ಸುಳ್ಳೆಷ್ಟು?

Date:

ಮೋದಿ ಪರ ವಾದಿಸುವವರು ಕೇಳಬೇಕಿರುವ ಪ್ರಶ್ನೆ: ತಮ್ಮ ತುಂಬು ಯೌವ್ವನ(17-22 ವರ್ಷ)ವನ್ನು ದೇಶದ ರಕ್ಷಣಾ ಸೇವೆಗೆ ಅರ್ಪಿಸಿದರೂ ಅಗ್ನಿವೀರ್ ರನ್ನು ಇತರ ಸೈನಿಕರಂತೆ ಪರಿಗಣಿಸದೆ, ಗುತ್ತಿಗೆ ಕೆಲಸಗಾರರಂತೆ, ಎರಡನೇ ದರ್ಜೆ ಸೈನಿಕರಂತೆ, ಅವರ ಸಾವನ್ನು ಕೂಡ ಎರಡನೇ ದರ್ಜೆ ಸಾವಿನಂತೆ ಪರಿಗಣಿಸುವುದು ಅನ್ಯಾಯವಲ್ಲವೇ?

ಲೋಕಸಭೆಯಲ್ಲಿ ಅಗ್ನಿವೀರರ ಬಗ್ಗೆ ನಡೆದ ಚರ್ಚೆಯಲ್ಲಿ ಮಧ್ಯಪ್ರವೇಶ ಮಾಡಿದ ರಕ್ಷಣಾ ಮಂತ್ರಿ ರಾಜನಾಥ ಸಿಂಗ್ ಅವರು ಮೃತರಾದ ಅಗ್ನಿವೀರರಿಗೆ ಒಂದು ಕೋಟಿ ಪರಿಹಾರ ಕೊಡಲಾಗುತ್ತಿದೆ ಎಂದು ಸದನವನ್ನು ತಪ್ಪುದಾರಿಗೆ ಎಳೆಯಬಾರದೆಂದು ಹೇಳಿದರು.

ಆನಂತರ ಮೃತರಾದ ಕೆಲವು ಅಗ್ನಿವೀರರ ಕುಟುಂಬಗಳ ಸದಸ್ಯರು ತಮಗೆ ರಾಜ್ಯ ಸರ್ಕಾರಗಳಿಂದ ಅಲ್ಪಸ್ವಲ್ಪ ಪರಿಹಾರ ಸಿಕ್ಕಿದೆಯೇ ವಿನಾ ಕೇಂದ್ರದಿಂದ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ನೀಡಿರುವ ವಿಡಿಯೋ ಹೇಳಿಕೆಯನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಕಟಿಸಿದರು.

ಅದಕ್ಕೆ ಉತ್ತರವಾಗಿ ಸೇನೆಯು ಒಂದು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿ ರಾಹುಲ್ ಗಾಂಧಿಯವರು ಪ್ರಸ್ತಾಪಿಸಿದ ಅಜಯ್ ಸಿಂಗ್ ಎಂಬ ನಿರ್ದಿಷ್ಟ ಮೃತ ಅಗ್ನಿವೀರರ ಪ್ರಕರಣದಲ್ಲಿ ಈಗಾಗಲೇ 98 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಆ ಕುಟುಂಬ ಅದನ್ನು ನಿರಾಕರಿಸಿದೆ. ಹಾಗಿದ್ದಲ್ಲಿ ಮೃತ ಅಗ್ನಿವೀರರಿಗೆ ಕೇಂದ್ರ ಸರ್ಕಾರ ಕೊಡುವ ಪರಿಹಾರವೆಷ್ಟು?

ಇದರ ಬಗ್ಗೆ ಮತ್ತು ಅಗ್ನಿಪಥ ಯೋಜನೆಯ ವಿವರಗಳ ಬಗ್ಗೆ ಎರಡು ವರ್ಷಗಳ ಹಿಂದೆ ಮೋದಿ ಸರ್ಕಾರ  ಹೊರಡಿಸಿರುವ ಅಧಿಕೃತ ಪ್ರಕಟಣೆ ಈ ವೆಬ್ ವಿಳಾಸದಲ್ಲಿ ಸಿಗುತ್ತದೆ: https://loksabhadocs.nic.in/Refinput/New_Reference_Notes/English/15072022_141146_102120411.pdf

ಇದರ ಪ್ರಕಾರ- ಮೊದಲನೆಯದಾಗಿ ಎಲ್ಲಾ ಅಗ್ನಿವೀರರಿಗೂ ನಾಲ್ಕು ವರ್ಷದ ಸೇವಾವಧಿಗೆ ಸೀಮಿತವಾಗಿ 48 ಲಕ್ಷ ರೂ. ಜೀವವಿಮೆಯನ್ನು ಮಾಡಿಸಲಾಗುತ್ತದೆ. ಅಗ್ನಿವೀರರು ಮೃತರಾದಾಗ ಅಷ್ಟು ಮೊತ್ತದ ಹಣ ಜೀವವಿಮಾ ನಿಗಮದಿಂದ ಸಿಗುತ್ತದೆ. ಕೇಂದ್ರ ಸರ್ಕಾರದಿಂದಲ್ಲ. ಎರಡನೆಯದಾಗಿ ಸೇವಾವಧಿಯಲ್ಲಿ ಮೃತರಾಗುವ ಅಗ್ನಿವೀರರ ಸಾವುಗಳನ್ನು ಮೋದಿ ಸರ್ಕಾರ ಮೂರು ಬಗೆಯಲ್ಲಿ ವಿಂಗಡಿಸುತ್ತದೆ.

1) ಸೇವಾವಧಿಯಲ್ಲಿದ್ದರೂ ಅಧಿಕೃತ ಸೇನಾ ಕರ್ತವ್ಯದಲ್ಲಿ ಇಲ್ಲದಾಗ ಸಂಭವಿಸುವ ಸಾವನ್ನು X ವರ್ಗದ ಸಾವು ಎಂದು ಪರಿಗಣಿಸುತ್ತದೆ.

2) ಕರ್ತವ್ಯ ನಿರ್ವಹಣೆ ಮಾಡುವಾಗ ಅಪಘಾತ ಹಾಗೂ ಅವಘಡಗಳಿಂದ ಸಂಭವಿಸುವ ಸಾವನ್ನು Y ವರ್ಗದ ಸಾವು ಎಂದು ಪರಿಗಣಿಸುತ್ತದೆ.

3) ಕರ್ತವ್ಯ ನಿರ್ವಹಣೆ ಮಾಡುವಾಗ ಶತ್ರುವಿನ ದಾಳಿಯಿಂದ ಆಗುವ ಸಾವನ್ನು Z ವರ್ಗದ ಸಾವು ಎಂದು ವಿಂಗಡಿಸುತ್ತದೆ.

ಇದನ್ನು ಓದಿದ್ದೀರಾ?: ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟಿಂಗ್‌: ಕೆಆರ್‌ಎಸ್‌ಗೆ ಗಣಿ ಇಲಾಖೆಯಿಂದಲೇ ಸಂಚಕಾರ?

ಮೋದಿ ಸರ್ಕಾರ Y ಮತ್ತು Z ವರ್ಗದ ಸಾವುಗಳಿಗೆ ಮಾತ್ರ ವಿಮಾ ಹಣದ ಜೊತೆಗೆ 44 ಲಕ್ಷ ರೂ. ಪರಿಹಾರವನ್ನು ಕೊಡುತ್ತದೆ. X ವರ್ಗದ ಸಾವುಗಳಿಗೆ ಕೇಂದ್ರ ಸರ್ಕಾರ ಯಾವ ಪರಿಹಾರವನ್ನೂ ಕೊಡುವುದಿಲ್ಲ. ಅವರಿಗೆ ಸಿಗುವುದು 48 ಲಕ್ಷ ರೂ ಜೀವ ವಿಮೆ ಮಾತ್ರ.

ಇದಲ್ಲದೆ, ಅಗ್ನಿಪಥ ಯೋಜನೆಯಲ್ಲಿ ಸೇರಿಕೊಂಡು ನಾಲ್ಕು ವರ್ಷಗಳಲ್ಲಿ ಕಡ್ಡಾಯವಾಗಿ ನಿವೃತ್ತರಾಗುವ ಅಗ್ನಿವೀರರಿಗೆ ನಂತರದಲ್ಲಿ ಪೆನ್ಶನ್ ಸೌಲಭ್ಯವಿಲ್ಲ. ಅವರಿಗೆ ಡಿಫೆನ್ಸ್ ಕ್ಯಾಂಟೀನ್ ಸೌಲಭ್ಯವಾಗಲೀ, ನಿವೃತ್ತ ಸೈನಿಕ ಎಂಬ ಅವಕಾಶವಾಗಲೀ ಇರುವುದಿಲ್ಲ.

ಹೀಗಾಗಿ ಪತ್ರಕರ್ತರು, ಮೋದಿ ಪರ ವಾದಿಸುವವರು ಕೇಳಬೇಕಿರುವ ಪ್ರಶ್ನೆ: ತಮ್ಮ ತುಂಬು ಯೌವ್ವನ(17-22 ವರ್ಷ)ವನ್ನು ದೇಶದ ರಕ್ಷಣಾ ಸೇವೆಗೆ ಅರ್ಪಿಸಿದರೂ ಅವರನ್ನು ಇತರ ಸೈನಿಕರಂತೆ ಪರಿಗಣಿಸದೆ, ಗುತ್ತಿಗೆ ಕೆಲಸಗಾರರಂತೆ, ಎರಡನೇ ದರ್ಜೆ ಸೈನಿಕರಂತೆ, ಅವರ ಸಾವನ್ನು ಕೂಡ ಎರಡನೇ ದರ್ಜೆ ಸಾವಿನಂತೆ ಪರಿಗಣಿಸುವುದು ಅನ್ಯಾಯವಲ್ಲವೇ?

ಆದ್ದರಿಂದಲೇ ಈ ಅಗ್ನಿವೀರ ಯೋಜನೆಯನ್ನು ರದ್ದುಗೊಳಿಸಲು ಆಗ್ರಹಿಸಬೇಕು. ಹಾಗೂ ಅಗ್ನಿವೀರರನ್ನು ಮೊದಲಿನಂತೆ ಪೂರ್ಣಾವಧಿ ಪರಿಪೂರ್ಣ ಸೈನಿಕರನ್ನಾಗಿ ಪರಿಗಣಿಸಬೇಕು. ಅದು ಮಾತ್ರ ನೈಜ ದೇಶಪ್ರೇಮ.

ಅದರ ಬದಲು ಪರಿಹಾರದ ಬಗ್ಗೆಯೂ ಅರ್ಧ ಸುಳ್ಳು ಹೇಳುವುದು, ಸೈನಿಕರ ಸಾವನ್ನೂ ಶ್ರೇಣೀಕರಣ ಮಾಡಿ ಅರ್ಧಕ್ಕರ್ಧ ಪರಿಹಾರ ಕೊಡುವುದು ಹೀನಾತಿಹೀನ ದೇಶದ್ರೋಹ, ಅಲ್ಲವೇ?

-ಶಿವಸುಂದರ್

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

84.56 ಲಕ್ಷ ಕೋಟಿ ರೂ. ನಷ್ಟದ ಅಮೆರಿಕ – ಇರಾನ್ ಸಂಘರ್ಷದಲ್ಲಿ ನಿಜಕ್ಕೂ ಗೆದ್ದವರಾರು?

ಅಮೆರಿಕದ ಬಹುಕೋಟಿ ಡಾಲರ್ ವೆಚ್ಚದ 'ಪೇಟ್ರಿಯಾಟ್' ಮತ್ತು 'ಥಾಡ್' ಕ್ಷಿಪಣಿ ನಿರೋಧಕ...