ಪ್ರದೀಪ್ ಈಶ್ವರ್‌ಗೆ ಸಚಿವ ಸ್ಥಾನ ನೀಡುವಂತೆ ಅಹಿಂದ ಸಮುದಾಯಗಳ ಒತ್ತಾಯ

Date:

ಬಲಿಜ ಸಮುದಾಯದ ಏಕೈಕ ಶಾಸಕ ಪ್ರದೀಪ್ ಈಶ್ವರ್‌ಗೆ ಸಚಿವ ಸಂಪುಟ ಪುನರ್ ರಚನೆ ಸಮಯದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಬಲಿಜ ಹಾಗೂ ಅಹಿಂದ ಸಮುದಾಯಗಳ ಮುಖಂಡರು ಆಗ್ರಹಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಸು.ಧಾ. ವೆಂಕಟೇಶ್, “ಕಾಂಗ್ರೆಸ್ ಈಗಾಗಲೇ ಅಹಿಂದ ವರ್ಗಗಳ ಮುಖಂಡರಿಗೆ ಸಚಿವ ಸ್ಥಾನ ನೀಡಿದೆ. ಆದರೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಹಿಂದ ವರ್ಗದ ಶಾಸಕರಿಗೆ ಸಚಿವ ಸ್ಥಾನ ದೊರೆತಿಲ್ಲ. ಅಲ್ಲದೆ, ಬಲಿಜ ಸಮುದಾಯಕ್ಕೆ ಸೇರಿದ ಏಕೈಕ ಶಾಸಕ ಪ್ರದೀಪ್ ಈಶ್ವರ್ ಅವರನ್ನು ಸಚಿವರನ್ನಾಗಿ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಕಾಂಗ್ರೆಸ್ ಸಾಮಾಜಿಕ ನ್ಯಾಯವನ್ನು ಎಲ್ಲ ವರ್ಗಗಳಿಗೂ ನೀಡುತ್ತಿದೆ. ಈ ದಿಕ್ಕಿನಲ್ಲಿ ಜಿಲ್ಲೆಯ ಅಹಿಂದ ವರ್ಗಗಳಿಗೂ ನ್ಯಾಯ ಕೊಡಬೇಕು. ಪ್ರದೀಪ್ ಈಶ್ವರ್ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಅವರ ಅವಧಿಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಉತ್ತಮ ಕಾರ್ಯಗಳು ಆಗುತ್ತಿವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2024 06 24 at 7.28.39 PM

ಜಿಲ್ಲಾ ಹಿಂದುಳಿದ ಜಾತಿ ಮತ್ತು ವರ್ಗಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ಮುನೇಗೌಡ ಮಾತನಾಡಿ, “ಕಾಂಗ್ರೆಸ್‌ ಸಾಮಾಜಿಕ ನ್ಯಾಯ ಎತ್ತಿಹಿಡಿಯುತ್ತಿದೆ. ಈಗ ಯಾವ ಸಮುದಾಯಗಳಿಗೆ ಸ್ಥಾನ ನೀಡಿಲ್ಲವೊ ಆ ಸಮುದಾಯಗಳಿಗೆ ಸಚಿವ ಸಂಪುಟ ಪುನರ್ ರಚನೆ ಸಮಯದಲ್ಲಿ ಅವಕಾಶ ಮಾಡಿಕೊಡಬೇಕು” ಎಂದು ಕೋರಿದರು.

“ಅಹಿಂದ ವರ್ಗಗಳಿಗೆ ಅವಕಾಶ ನೀಡಿದರೆ ಅಭಿವೃದ್ಧಿ ಸಾಧ್ಯ. ಹಿಂದುಳಿದ ವರ್ಗಗಳಿಗೆ ಸಿಗುವ ಸೌಲಭ್ಯಗಳು ಈ ಹಿಂದಿನ ಸರ್ಕಾರಗಳಲ್ಲಿ ವಾಪಸ್ ಹೋಗಿವೆ. ಈ ಸಮುದಾಯಗಳನ್ನು ತಲುಪಿಲ್ಲ. ಆದ್ದರಿಂದ ಆ ಸಮುದಾಯಗಳವರೇ ಸಚಿವರಾದರೆ ಅಭಿವೃದ್ಧಿಗೆ ಅನುಕೂಲವಾಗಲಿದೆ” ಎಂದಿದ್ದಾರೆ.

“ಲೋಕಸಭಾ ಚುನಾವಣೆ ಸಮಯದಲ್ಲಿ ಯಾವ ರೀತಿಯಲ್ಲಿ ಅಹಿಂದ ಸಮುದಾಯಗಳಿಗೆ ವಂಚನೆ ಆಗಿದೆ ಎನ್ನುವುದು ಗೊತ್ತು. ಅಹಿಂದ ಸಮುದಾಯಗಳನ್ನು ಬೆಳೆಸುವ ವ್ಯಕ್ತಿಗೆ ಅವಕಾಶ ಮಾಡಿಕೊಡಬೇಕು ಎಂದು ಕಾಂಗ್ರೆಸ್‌ನ ರಾಜ್ಯ ಮುಖಂಡರಲ್ಲಿ ಮನವಿ ಮಾಡುತ್ತೇವೆ” ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕುರುಬರ ಸಂಘದ ಮುಖಂಡ ನರೇಂದ್ರ ಬಾಬು, ಬಿ.ಎಲ್.ಶ್ರೀನಿವಾಸ್, ಕ್ರೈಸ್ತ ಸಮುದಾಯದ ಮುಖಂಡ ಹೆನ್ರಿ ಪ್ರಸನ್ನ ಕುಮಾರ್, ಬಲಿಜ ಸಮುದಾಯದ ನಾಯಕನಹಳ್ಳಿ ನಾರಾಯಣ ಸ್ವಾಮಿ, ಎಸ್.ಪಿ.ಶ್ರೀನಿವಾಸ್, ಕುಪೇಂದ್ರ, ಎಸ್.ಎಂ.ರಫೀಕ್ ಮತ್ತಿತರರು ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...