ಬಿಜೆಪಿ ಜೊತೆಗಿನ ಮೈತ್ರಿ ಕೊನೆಗೊಳಿಸಿದ ಎಐಎಡಿಎಂಕೆ: ಪಟಾಕಿ ಹಚ್ಚಿ ಸಂಭ್ರಮಿಸಿದ ಕಾರ್ಯಕರ್ತರು

Date:

ಬಿಜೆಪಿ ಜೊತೆಗಿನ ಮೈತ್ರಿಯ ಸಂಬಂಧವನ್ನು ಎಐಎಡಿಎಂಕೆ ಕೊನೆಗೊಳಿಸಿದ್ದು, ಮುಂದಿನ ಚುನಾವಣೆಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ತಿಳಿಸಿದೆ.

ತಮಿಳುನಾಡಿನಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯ ನಂತರ ಸೋಮವಾರ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಜೊತೆ ಎಐಎಡಿಎಂಕೆ ತನ್ನ ಸಂಬಂಧವನ್ನು ಮುರಿದುಕೊಂಡಿತು. ಕೇಸರಿ ಪಕ್ಷದ ನಾಯಕರು ಎಐಎಡಿಎಂಕೆಯ ಮಾಜಿ ನಾಯಕರ ಬಗ್ಗೆ ಅನಗತ್ಯ ಟೀಕೆಗಳನ್ನು ಮಾಡುತ್ತಿರುವುದು ಮೈತ್ರಿ ಕೊನೆಗೊಳ್ಳಲು ಪ್ರಮುಖ ಕಾರಣವಾಗಿದೆ.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ 2024 ರ ಲೋಕಸಭೆ ಚುನಾವಣೆಗೆ ಪ್ರತ್ಯೇಕ ರಂಗದೊಂದಿಗೆ ಮುನ್ನಡೆಸಲಿದೆ ಎಂದು ಪಕ್ಷವು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರು ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ದ್ರಾವಿಡ ನೇತಾರ ಸಿ ಎನ್ ಅಣ್ಣಾದೊರೈ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆಗಳ ನಂತರ ಇದು ಸಂಭವಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯಾರು ಹಸಿದಿದ್ದರು, ಯಾವುದು ಹಳಸಿತ್ತು?

“ಎಐಎಡಿಎಂಕೆ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದೆ. ಪಕ್ಷವು ಇಂದಿನಿಂದ ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟದೊಂದಿಗಿನ ಎಲ್ಲ ಸಂಬಂಧಗಳನ್ನು ಮುರಿದುಕೊಳ್ಳುತ್ತದೆ. ಬಿಜೆಪಿಯ ರಾಜ್ಯ ನಾಯಕತ್ವವು ನಮ್ಮ ಮಾಜಿ ನಾಯಕರು, ನಮ್ಮ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ನಮ್ಮ ಕಾರ್ಯಕರ್ತರ ಬಗ್ಗೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಅನಗತ್ಯ ಟೀಕೆಗಳನ್ನು ಮಾಡುತ್ತಿದ್ದಾರೆ” ಎಂದು ಎಐಎಡಿಎಂಕೆಯ ನಾಯಕ ಕೆ ಪಿ ಮುನಿಸಾಮಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಕೇಳಿದ ನಂತರ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಎಐಎಡಿಎಂಕೆ ವಕ್ತಾರೆ ಶಶಿರೇಖಾ, “ಪಕ್ಷದ ಸದಸ್ಯರ ಅಭಿಪ್ರಾಯದ ಆಧಾರದ ಮೇಲೆ ನಾವು ಈ ನಿರ್ಣಯವನ್ನು ತೆಗೆದುಕೊಳ್ಳುತ್ತಿದ್ದೇವೆ. ಇದು ನಮಗೆ ಅತ್ಯಂತ ಸಂತೋಷದ ಕ್ಷಣವಾಗಿದೆ. ನಾವು ತುಂಬಾ ಸಂತೋಷ ಪಡುತ್ತೇವೆ. ಮುಂಬರುವ ಚುನಾವಣೆಗಳನ್ನು ಸ್ವಂತವಾಗಿ ಎದುರಿಸುತ್ತೇವೆ” ಎಂದು ಹೇಳಿದರು.

ಬಿಜೆಪಿ ನಾಯಕ ಅವರು ಇತ್ತೀಚಿಗೆ ನೀಡಿದ ಹೇಳಿಕೆಯು ವಿವಾದವನ್ನು ಹುಟ್ಟುಹಾಕಿತ್ತು. 1956 ರಲ್ಲಿ ಮಧುರೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಣ್ಣಾದೊರೈ ಅವರು ಹಿಂದೂ ಧರ್ಮವನ್ನು ಅವಮಾನಿಸಿದ್ದಾರೆ ಎಂದು ಅಣ್ಣಾಮಲೈ ಆರೋಪಿಸಿದ್ದರು.

ಕಾರ್ಯಕ್ರಮ ಮುಗಿದ ನಂತರ ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಲು ಅಣ್ಣಾಮಲೈ ನಿರಾಕರಿಸಿದರು ಮತ್ತು ತಮ್ಮ ಪಕ್ಷ ಮತ್ತು ಎಐಎಡಿಎಂಕೆ ನಡುವೆ ಯಾವುದೇ ಸಮಸ್ಯೆ ಇಲ್ಲ ಎಂದು ಸಮರ್ಥಿಸಿಕೊಂಡರು.

ಅಣ್ಣಾದೊರೈ ಅವರು ಹೇಳಿಕೆ ನೀಡಿದ ನಂತರ ಪಕ್ಷದ ಕಾರ್ಯಕರ್ತರು ಅಣ್ಣಾಮಲೈ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವಿಕೋಪಕ್ಕೆ ಹೋದ ಕಾರಣ ಮಧುರೈನಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಅಡಗಿಕೊಳ್ಳಬೇಕಾಯಿತು. ಕ್ಷಮೆಯಾಚಿಸಿದ ನಂತರ ಮಾತ್ರ ಮುಂದಕ್ಕೆ ಪ್ರಯಾಣಿಸಲು ಸಾಧ್ಯವಾಯಿತು.

ಎಐಎಡಿಎಂಕೆ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿರುವ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅಣ್ಣಾಮಲೈ, “ನಾನು ನಿಮ್ಮೊಂದಿಗೆ ನಂತರ ಮಾತನಾಡುತ್ತೇನೆ, ನಾನು ಯಾತ್ರೆಯ ಸಮಯದಲ್ಲಿ ಮಾತನಾಡುವುದಿಲ್ಲ. ನಾನು ನಂತರ ಮಾತನಾಡುತ್ತೇನೆ” ಎಂದು ಹೇಳಿದ್ದಾರೆ.

ಪಕ್ಷವು 2019 ರ ಲೋಕಸಭಾ ಚುನಾವಣೆ ಮತ್ತು 2021 ರ ವಿಧಾನಸಭಾ ಚುನಾವಣೆಗಳಲ್ಲಿ ಮಿತ್ರಪಕ್ಷಗಳಾಗಿ ಬಿಜೆಪಿಯೊಂದಿಗೆ ಮೈತ್ರಿ ಹೊಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...