ತಮಿಳುನಾಡು | ‘ಬಿಜೆಪಿ ಜೊತೆಗಿನ ಮೈತ್ರಿ ಮುರಿದಿದ್ದೇವೆ’ ಎಂದು ಘೋಷಿಸಿದ ಎಐಎಡಿಎಂಕೆ

Date:

  • ಪಕ್ಷದ ಹಿರಿಯರ ಬಗ್ಗೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿಕೆಯ ವಿರುದ್ಧ ವ್ಯಾಪಕ ಆಕ್ರೋಶ
  • ದಕ್ಷಿಣದ ರಾಜ್ಯಗಳಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಬಲಪಡಿಸುವ ಬಿಜೆಪಿ ಪ್ರಯತ್ನಕ್ಕೆ ಹಿನ್ನಡೆ

ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ರಚನೆಯಾಗುತ್ತಿದ್ದಂತೆಯೇ ಎನ್‌ಡಿಎ ಮೈತ್ರಿಕೂಟವನ್ನು ಬಲಪಡಿಸಲು ಹೊರಟಿದ್ದ ಬಿಜೆಪಿ ಪ್ರಯತ್ನಕ್ಕೆ ತಮಿಳುನಾಡಿನಲ್ಲಿ ತೀವ್ರ ಹಿನ್ನಡೆಯಾಗಿದ್ದು, ‘ಬಿಜೆಪಿ ಜೊತೆಗಿನ ಮೈತ್ರಿ ಮುರಿದಿದ್ದೇವೆ’ ಎಂದು ಎಐಎಡಿಎಂಕೆ ಮುಖಂಡ ಡಿ ಜಯಕುಮಾರ್ ಮಾಧ್ಯಮಗಳ ಮುಂದೆ ಘೋಷಿಸಿದ್ದಾರೆ.

ದಕ್ಷಿಣದ ರಾಜ್ಯಗಳಲ್ಲಿ ಈವರೆಗೆ ಬಿಜೆಪಿಯು ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡೇ ರಾಜಕೀಯವಾಗಿ ಬೆಳೆಯುತ್ತಿರುವ ಮಧ್ಯೆಯೇ ಈ ಬೆಳವಣಿಗೆ ಲೋಕಸಭಾ ಚುನಾವಣೆಗೂ ಮುನ್ನವೇ ಬಹಳಷ್ಟು ಹಿನ್ನಡೆಯಾಗಿದೆ.

ತಮಿಳುನಾಡಿನಲ್ಲಿಂದು ಮಾಧ್ಯಮಗಳ ಮುಂದೆ ಮಾತನಾಡಿದ ಎಐಎಡಿಎಂಕೆ ಮುಖಂಡ ಡಿ ಜಯಕುಮಾರ್, ಎಐಎಡಿಎಂಕೆ- ಬಿಜೆಪಿ ನಡುವೆ ಯಾವುದೇ ಮೈತ್ರಿ ಇಲ್ಲ. ಎಐಎಡಿಎಂಕೆ ಸಂಸ್ಥಾಪಕ ಎಂಜಿಆರ್ ಅವರ ಗುರು ಸಿಎನ್ ಅಣ್ಣಾದೊರೈ ಕುರಿತಾದ ಬಿಜೆಪಿಯ ತಮಿಳುನಾಡಿನ ಅಧ್ಯಕ್ಷ ಕೆ ಅಣ್ಣಾಮಲೈ ಹೇಳಿಕೆಯನ್ನು ಸಹಿಸಲು ಆಗಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದ್ಯ ಬಿಜೆಪಿಯ ಜೊತೆಗೆ ನಮ್ಮ ಮೈತ್ರಿ ಇಲ್ಲ. ಇನ್ನು ಮುಂದಿನ ಮೈತ್ರಿಯ ಬಗ್ಗೆ ಚುನಾವಣೆಗೂ ಮುನ್ನ ನಿರ್ಧಾರ ತೆಗೆದುಕೊಳ್ಳುತ್ತೇವೆ. ಅಣ್ಣಾಮಲೈ ಅವರು ಬಿಜೆಪಿ ರಾಜ್ಯ ಅಧ್ಯಕ್ಷರಾಗಿರಲು ಯೋಗ್ಯರಲ್ಲ. ತಮ್ಮನ್ನು ತಾವು ಬಿಂಬಿಸಿಕೊಳ್ಳುವ ಸಲುವಾಗಿಯಷ್ಟೇ ಅವರು ದಿವಂಗತ ನಾಯಕರ ಕುರಿತು ಕೆಟ್ಟದಾಗಿ ಮಾತನಾಡುತ್ತಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಅಣ್ಣಾಮಲೈ
Annamalai

ಮಾಜಿ ಸಿಎಂ, ದಿವಂಗತ ಜೆ ಜಯಲಲಿತಾ ಸೇರಿದಂತೆ ಎಐಎಡಿಎಂಕೆಯ ಕೆಲವು ನಾಯಕರ ಕುರಿತು ಕೆ ಅಣ್ಣಾಮಲೈ ಟೀಕಾತ್ಮಕ ಹೇಳಿಕೆಗಳನ್ನು ನೀಡಿದ್ದರಿಂದ ಈ ರೀತಿಯ ಬೆಳವಣಿಗೆ ನಡೆದಿದೆ.

ಎಐಎಡಿಎಂಕೆಯ ಹಿರಿಯ ನಾಯಕರಿಗೆ ಮಾಡುವ ಯಾವುದೇ ಅವಮಾನವನ್ನು ಪಕ್ಷದ ಕಾರ್ಯಕರ್ತರು ಸಹಿಸುವುದಿಲ್ಲ ಎಂದು ಜಯಕುಮಾರ್ ಇದೇ ವೇಳೆ ಎಚ್ಚರಿಕೆಯೂ ನೀಡಿದ್ದಾರೆ.

“ಬಿಜೆಪಿ ಕಾರ್ಯಕರ್ತರು ಬಯಸಿದ್ದರೂ, ಎಐಎಡಿಎಂಕೆ ಜತೆ ಮೈತ್ರಿ ಹೊಂದುವ ಬಯಕೆ ಅಣ್ಣಾಮಲೈ ಅವರಿಗಿಲ್ಲ. ನಮ್ಮ ನಾಯಕರ ಕುರಿತಾದ ಈ ಎಲ್ಲ ಟೀಕೆಗಳನ್ನು ನಾವು ಸಹಿಸಿಕೊಳ್ಳಬೇಕೇ? ನಿಮ್ಮನ್ನು ನಮ್ಮ ಜತೆ ಏಕೆ ಕರೆದೊಯ್ಯಬೇಕು? ಬಿಜೆಪಿಗೆ ಇಲ್ಲಿ ಹೆಜ್ಜೆ ಇರಿಸುವುದು ಸಾಧ್ಯವಿಲ್ಲ. ನಿಮ್ಮ ಮತ ಬ್ಯಾಂಕ್ ಯಾವುದು ಎನ್ನುವುದು ಗೊತ್ತಿದೆ. ನೀವು ನಮ್ಮ ಕಾರಣದಿಂದಾಗಿ ಇಲ್ಲಿ ಪರಿಚಿತರಾಗಿದ್ದೀರಿ” ಎಂದು ಜಯಕುಮಾರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...