ಷೇರುಪೇಟೆ ಕುಸಿತ | ಈ ಆರ್ಥಿಕ ವಂಚನೆ ನಿಲ್ಲಬೇಕು: ಬಿಜೆಪಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

Date:

ಭಾರತೀಯ ಷೇರು ಮಾರುಕಟ್ಟೆ ನಿರಂತರವಾಗಿ ಕುಸಿಯುತ್ತಿದ್ದು ಈ ವಿಚಾರದಲ್ಲಿ ಮಂಗಳವಾರ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ಮಧ್ಯಮ ವರ್ಗದ ಹೂಡಿಕೆಗಳು ನಾಶವಾಗಿವೆ” ಎಂದು ಅಖಿಲೇಶ್ ಹೇಳಿದ್ದಾರೆ. ” ಸರ್ಕಾರವು ದೇಶೀಯ ಹೂಡಿಕೆದಾರರನ್ನು ರಕ್ಷಿಸುವಲ್ಲಿ ವಿಫಲವಾಗಿ ಜನರನ್ನು ದಾರಿ ತಪ್ಪಿಸುತ್ತಿದೆ” ಎಂದು ಕನ್ನೌಜ್ ಸಂಸದ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ವಿಫಲರಾದವರು ಗುರಿಯ ‘ಸಮಯ ಮಿತಿ’ ಬದಲಾಯಿಸುತ್ತಾರೆ: ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅಖಿಲೇಶ್ ಯಾದವ್, “ಭಾರತೀಯ ಷೇರು ಮಾರುಕಟ್ಟೆಗಳಲ್ಲಿ ನಡೆಯುತ್ತಿರುವ ಕುಸಿತವು ಮಧ್ಯಮ ವರ್ಗದ ಹೂಡಿಕೆಗಳನ್ನು ಕಬಳಿಸಿದೆ. ಪ್ರಪಂಚದಾದ್ಯಂತದ ಹೂಡಿಕೆದಾರರನ್ನು ಆಹ್ವಾನಿಸುವ ಸ್ಪರ್ಧೆಯಲ್ಲಿರುವ ‘ಡಬಲ್-ಎಂಜಿನ್’ ಸರ್ಕಾರಗಳು, ಇತರರಿಗೆ ಧೈರ್ಯ ತುಂಬಲು ‘ಮೋಸಗೊಳಿಸುವ ಕಾರ್ಯಕ್ರಮಗಳನ್ನು’ ಆಯೋಜಿಸುವ ಮೊದಲು ತಮ್ಮದೇ ಆದ ಹೂಡಿಕೆದಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು” ಎಂದಿದ್ದಾರೆ.

“ಕಳೆದ ಕೆಲವು ತಿಂಗಳುಗಳಿಂದ ನಿಫ್ಟಿ ನಿರಂತರವಾಗಿ ಕುಸಿಯುತ್ತಿದೆ. ಈ ವರ್ಷದಲ್ಲಿ ಥೈಲ್ಯಾಂಡ್ ಮತ್ತು ಫಿಲಿಪೈನ್ಸ್ ನಂತರ ಭಾರತೀಯ ಷೇರು ಮಾರುಕಟ್ಟೆಯು ಮೂರನೇ ಅತ್ಯಂತ ದುರ್ಬಲ ಮಾರುಕಟ್ಟೆಯಾಗಿದೆ” ಎಂದು ಎಸ್‌ಪಿ ನಾಯಕ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ ಬಜೆಟ್‌ಗೂ ಬಿಜೆಪಿ ಪ್ರಣಾಳಿಕೆಗೂ ಸಂಬಂಧವೇ ಇಲ್ಲ: ಅಖಿಲೇಶ್ ಯಾದವ್

“ಒಂದೆಡೆ 80 ಕೋಟಿ ಜನರು ಸರ್ಕಾರ ನೀಡುವ ಪಡಿತರದ ಆಧಾರದಲ್ಲಿಯೇ ಬದುಕುಳಿಯಬೇಕಾಗಿದೆ. ಇನ್ನೊಂದೆಡೆ ತಮ್ಮ ಉಳಿತಾಯವನ್ನು ಷೇರುಗಳಲ್ಲಿ ಹೂಡಿಕೆ ಮಾಡಿದವರು ದಿವಾಳಿಯಾಗಿದ್ದಾರೆ. ಇಂತಹ ಭೀಕರ ಪರಿಸ್ಥಿತಿಗಳಲ್ಲಿಯೂ ಕೂಡಾ ಬಿಜೆಪಿ ಸರ್ಕಾರ ಸುಳ್ಳು ಹೇಳಿಕೊಂಡು ಜನರ ದಾರಿ ತಪ್ಪಿಸುತ್ತಿದೆ. ಈ ಆರ್ಥಿಕ ವಂಚನೆ ನಿಲ್ಲಬೇಕು” ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಗೆಯೇ ಹೂಡಿಕೆದಾರರು ಇನ್ನು ಬಿಜೆಪಿ ಇಲ್ಲ ಎಂದು ಹೇಳುತ್ತಿರುವುದಾಗಿ ಅಖಿಲೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇತ್ತೀಚೆಗೆ ಭಾರತೀಯ ಷೇರುಪೇಟೆಯು ಭಾರೀ ಕುಸಿತ ಕಾಣುತ್ತಿದೆ. ಮಾರುಕಟ್ಟೆಯ ಕಾರ್ಯಕ್ಷಮತೆಯ ಬಗ್ಗೆ ಕಳವಳ ವ್ಯಕ್ತವಾಗಿದೆ. ಈ ನಡುವೆ ಯಾದವ್ ಈ ಹೇಳಿಕೆಯನ್ನು ನೀಡಿದ್ದಾರೆ.

ಸೆನ್ಸೆಕ್ಸ್ ಸೋಮವಾರ ಶೇ. 1.14 ರಷ್ಟು ಕುಸಿದು 74,454.41 ಕ್ಕೆ ತಲುಪಿದರೆ, ನಿಫ್ಟಿ ಶೇ. 1.06 ರಷ್ಟು ಕುಸಿದು 22,553.35 ಕ್ಕೆ ತಲುಪಿದೆ. ಕಳೆದ ಐದು ವಹಿವಾಟಿನಲ್ಲಿ ಷೇರು ಮಾರುಕಟ್ಟೆ ಕುಸಿತ ಕಂಡಿದೆ. ಆದರೆ ಮಂಗಳವಾರ ಕೊಂಚ ಚೇತರಿಸಿಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...