ಆಳಂದ ಮತಗಳವು | ಕಲಬುರಗಿಯಲ್ಲಿ ಬೃಹತ್ ರ್‍ಯಾಲಿ ನಡೆಸಲು ರಾಹುಲ್‌ ಗಾಂಧಿಗೆ ಶಾಸಕ ಬಿ.ಆರ್ ಪಾಟೀಲ್ ಆಹ್ವಾನ

Date:

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಆಳಂದ ಕ್ಷೇತ್ರದಲ್ಲಿ ಸುಮಾರು 6,000 ಮತಗಳನ್ನು ಅಳಿಸಿ ಹಾಕುವ ಯತ್ನ ನಡೆದಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಆರೋಪಕ್ಕೆ ಸಂಬಂಧಿಸಿದ ಪುರಾವೆಗಳು ಮತ್ತು ದಾಖಲೆಗಳನ್ನು ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದಾರೆ. ಇದೀಗ, ಕಲಬುರಗಿಯಲ್ಲಿ ‘ಮತಗಳವು’ (ವೋಟ್‌ ಚೋರಿ) ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ಮುಂದಾಗಿದೆ.  ರ್‍ಯಾಲಿಗೆ ಆಹ್ವಾನಿಸಿ ರಾಹುಲ್‌ ಗಾಂಧಿಗೆ ಆಳಂದ ಶಾಸಕ, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಉಪಾಧ್ಯಕ್ಷ ಬಿ.ಆರ್‍‌ ಪಾಟೀಲ್ ಪತ್ರ ಬರೆದಿದ್ದಾರೆ.

ಸೆಪ್ಟೆಂಬರ್ 18ರಂದು ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್‌ ಗಾಂಧಿ, “ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 5,994 ಮತಗಳನ್ನು ಅಳಿಸಿ ಹಾಕಲು ಯತ್ನಗಳು ನಡೆದಿವೆ. ಮತದಾರ ಪಟ್ಟಿಯಲ್ಲಿರುವ ಯಾರದ್ದೋ ಹೆಸರನ್ನು ಅಳಿಸಿ ಹಾಕುವಂತೆ ಇನ್ಯಾರದ್ದೋ ಹೆಸರಿನಲ್ಲಿ ಮತ್ಯಾರೋ ಅರ್ಜಿ ಸಲ್ಲಿಸಿದ್ದಾರೆ. ಇದೇ ರೀತಿ ಸಾವಿರಾರು ಮತದಾರರ ಹೆಸರುಗಳನ್ನು ಅಳಿಸಿ ಹಾಕುವ ಹುನ್ನಾರ ನಡೆದಿದೆ” ಎಂದು ಆರೋಪಿಸಿದ್ದರು. ಆಳಂದದಲ್ಲಿ ಮತಗಳವು ನಡೆದಿರುವುದನ್ನು ಚುನಾವಣಾ ಆಯೋಗ ಕೂಡ ಒಪ್ಪಿಕೊಂಡಿದೆ. ಪ್ರಕರಣದ ತನಿಖೆ ನಡೆಯುತ್ತಿದೆ.

ಆಳಂದದಲ್ಲಿ ನಡೆದಿರುವ ಮತಗಳವು ವಿರುದ್ಧ ಕಲಬುರಗಿಯಲ್ಲಿ ನವೆಂಬರ್‍ ಅಥವಾ ಡಿಸೆಂಬರ್‍‌ನಲ್ಲಿ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಲು ಕಾಂಗ್ರೆಸ್‌ ನಿರ್‍ಧರಿಸಿದೆ. ಅದಕ್ಕಾಗಿ, ಕಾಂಗ್ರೆಸ್‌ ನಾಯಕರ ಸಮಯ ಕೇಳಿ ಬಿ.ಆರ್ ಪಾಟೀಲ್ ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್‌ ಗಾಂಧಿಗೆ ಪತ್ರದಲ್ಲಿ; “ಮತಗಳವು ಕುರಿತು ರಾಷ್ಟ್ರದ ಮುಂದೆ ಇರಿಸಲಾದ ಐತಿಹಾಸಿಕ ಪವರ್ ಪಾಯಿಂಟ್ ಪ್ರಸ್ತುತಿಗಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಇದು ಇಡೀ ದೇಶದ ಗಮನ ಸೆಳೆದಿದೆ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯ ಬಗ್ಗೆ ಉತ್ತಮ ಚರ್ಚೆಗೆ ನಾಂದಿ ಹಾಡಿದೆ. ನೀವು ಎತ್ತಿದ ತಾರ್ಕಿಕ ಪ್ರಶ್ನೆಗಳಿಗೆ ಉತ್ತರಿಸಲು ಆಯೋಗಕ್ಕೆ ಸಾಧ್ಯವಾಗಿಲ್ಲ. ಅದು ಯಾವುದೇ ಮನವರಿಕೆಯಾಗುವ ಉತ್ತರ ನೀಡಲಾಗದೆ ನೆಲಕಚ್ಚಿದೆ. ಮತಗಳವು ಕುರಿತ ನಿಮ್ಮ ಟೀಕೆಯನ್ನು ಪತ್ರಿಕೆಗಳು ಗಂಭೀರವಾಗಿ ಪರಿಗಣಿಸಿವೆ. ಚುನಾವಣಾ ಆಯೋಗವನ್ನು ಪ್ರಶ್ನಿಸಿವೆ. ಚುನಾವಣಾ ಆಯೋಗವು ಬೆನ್ನುಮೂಳೆಯಿಲ್ಲದ ಸಾಂವಿಧಾನಿಕ ಸಂಸ್ಥೆಯಾಗಿ ಮಾರ್‍ಪಟ್ಟಿದ್ದು, ಕೇಂದ್ರ ಗೃಹ ಸಚಿವರ ಸೇವಕನೆಂತೆ ಕೆಲಸ ಮಾಡುತ್ತಿದೆ” ಎಂದು ಪಾಟೀಲ್ ಹೇಳಿದ್ದಾರೆ.

“ಬಿಜೆಪಿಗೆ ಮುಕ್ತ ಮತ್ತು ನ್ಯಾಯಯುತ ರೀತಿಯಲ್ಲಿ ಚುನಾವಣೆಗಳನ್ನು ಗೆಲ್ಲಲು ಸಾಧ್ಯವಿಲ್ಲ. ಆ ಕಾರಣಕ್ಕಾಗಿ, ಮತದಾರರ ಪಟ್ಟಿಯಿಂದ ನಿಜವಾದ ಮತದಾರರನ್ನು ತೆಗೆದುಹಾಕುವ ದುಷ್ಕೃತ್ಯಗಳಲ್ಲಿ ತೊಡಗಿದೆ. ಆಳಂದ ಮತಗಳವು ಪ್ರಕರಣ ಸಂಬಂಧ ಕರ್ನಾಟಕದ ಜನರು, ವಿಶೇಷವಾಗಿ ನನ್ನ ಆಳಂದ ಕ್ಷೇತ್ರ ಮತ್ತು ಕಲಬುರಗಿ ಜಿಲ್ಲೆಯ ನಾಗರಿಕರು ಚುನಾವಣಾ ಆಯೋಗ ಮತ್ತು ಬಿಜೆಪಿಯ ಧೋರಣೆಗಳನ್ನು ಬಯಲು ಮಾಡಲು ಬೃಹತ್ ರ್‍ಯಾಲಿ ನಡೆಸಲು ಸಿದ್ದರಾಗಿದ್ದಾರೆ. ನವೆಂಬರ್ ಅಥವಾ ಡಿಸೆಂಬರ್‍‌ನಲ್ಲಿ ನಿಮ್ಮ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್‍ಜುನ ಖರ್‍ಗೆ ಅವರ ಅನುಕೂಲಕರ ದಿನಾಂಕವನ್ನು ತಿಳಿಸಿದರೆ, ರ್‍ಯಾಲಿಗೆ ಸಿದ್ದತೆಗಳು ನಡೆಯಲಿವೆ” ಎಂದು ಕೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಮತಗಳವು | ಪ್ರತಿಕ್ರಿಯಿಸುವ ಭರದಲ್ಲಿ ಬೆತ್ತಲಾದ ಚುನಾವಣಾ ಆಯುಕ್ತ

2023ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಆಳಂದ ಕ್ಷೇತ್ರದಲ್ಲಿ 5,994 ಮತದಾರರನ್ನು ಹೆಸರನ್ನು ಅಳಿಸಿ ಹಾಕಲು ಯತ್ನಗಳು ನಡೆದಿದ್ದವು. ಆ ಪೈಕಿ, ಆಳಂದದ ಒಂದು ಬೂತ್‌ನ ಬೂತ್‌ ಮಟ್ಟದ ಅಧಿಕಾರಿ (ಬಿಎಲ್‌ಒ) ಸಹೋದರನ ಹೆಸರನ್ನೇ ಮತಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆದಿತ್ತು. ಆದ್ದರಿಂದಲೇ, ಮತ ಕಳ್ಳತನ ಪ್ರಕರಣವು ಆಗಲೇ ಬೆಳಕಿಗೆ ಬಂದಿತ್ತು.

ಆ ಬಿಎಲ್‌ಒ ಸಹೋದರ ಬಿ.ಆರ್ ಪಾಟೀಲ್ ಅವರ ನಿಕಟವರ್ತಿಯಾಗಿದ್ದ ಕಾರಣ, ಮತ ಕಳ್ಳತನದ ವಿಚಾರ ಬಿ.ಆರ್ ಪಾಟೀಲ್ ಅವರಿಗೆ ಗೊತ್ತಾಯಿತು. ಬಳಿಕ, ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದರು. ಅವರ ದೂರು ಆಧರಿಸಿ, ಪರಿಶೀಲನೆ ನಡೆಸುವಂತೆ ಕರ್ನಾಟಕ ಚುನಾವಣಾ ಆಯೋಗವು ಸ್ಥಳೀಯ ಚುನಾವಣಾ ಅಧಿಕಾರಿಗೆ (ಜಿಲ್ಲಾಧಿಕಾರಿ) ಸೂಚಿಸಿತು. ಸ್ಥಳೀಯ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಬರೋಬ್ಬರಿ 5,994 ಮತಗಳನ್ನು ಅಳಿಸಿಹಾಕಲು ನಕಲಿ ಅರ್ಜಿಗಳು ಸಲ್ಲಿಕೆಯಾಗಿರುವುದು ಬೆಳಕಿಗೆ ಬಂದಿತು. ಬಳಿಕ, ಕಲಬುರಗಿ ಸಹಾಯಕ ಆಯುಕ್ತೆ ಮಮತಾ ದೇವಿ ಅವರು 2023ರ ಫೆಬ್ರವರಿ 21ರಂದು ಆಳಂದ ಪೊಲೀಸರಿಗೆ ದೂರು ನೀಡಿದರು. ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌ಅನ್ನೂ ದಾಖಲಿಸಿದರು.

ಈ 5,994 ಮತದಾರರಲ್ಲಿ ಬಹುತೇಕರು ಕಾಂಗ್ರೆಸ್‌ಗೆ ಮತ ಚಲಾಯಿಸುವ ದಲಿತರು, ಬಡವರು, ಅಲ್ಪಸಂಖ್ಯಾತರು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಅಲ್ಲದೆ, ಮತ ಕಳ್ಳತನ ಪ್ರಕರಣವನ್ನು ಕರ್ನಾಟಕ ಸಿಐಡಿ ತನಿಖೆ ನಡೆಸುತ್ತಿದೆ. ಆದರೆ, ಅರ್ಜಿ ಸಲ್ಲಿಸಿದ್ದ ಆರೋಪಿಗಳನ್ನು ಪತ್ತೆ ಮಾಡಲು ಅಗತ್ಯವಿರುವ ‘ಅರ್ಜಿ ಸಲ್ಲಿಸಿದವರ ಐಪಿ ಅಡ್ರೆಸ್‌’ಗಳನ್ನು ನೀಡುವಂತೆ ಕೇಳಿ 18 ತಿಂಗಳಲ್ಲಿ 18 ಬಾರಿ ಚುನಾವಣಾ ಆಯೋಗಕ್ಕೆ ಸಿಐಡಿ ಪತ್ರ ಬರೆದಿದೆ, ಪ್ರಶ್ನಿಸಿದೆ. ಆದರೆ, ಚುನಾವಣಾ ಆಯೋಗವು ಈವರೆಗೆ ಸಿಐಡಿ ಪತ್ರಕ್ಕೆ ಸ್ಪಂದಿಸಿಲ್ಲ. ಅರ್ಜಿ ಸಲ್ಲಿಸಿದವರ ಮಾಹಿತಿಯನ್ನು ಸಿಐಡಿಗೆ ಒದಗಿಸಿಲ್ಲ.

ಈ ಕಾರಣಕ್ಕಾಗಿಯೇ, ಮತ ಕಳ್ಳತನದ ಮೂಲಕ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲು ಯತ್ನಿಸಿದ ಕೊಲೆಗಾರರನ್ನು ಚುನಾವಣಾ ಆಯುಕ್ತರು ರಕ್ಷಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...