ನರೇಂದ್ರ ಮೋದಿಯನ್ನು ಕಿತ್ತೊಗೆಯುವುದೇ ನಮ್ಮೆಲ್ಲರ ಗುರಿ: ಬಿ ಕೆ ಹರಿಪ್ರಸಾದ್‌

Date:

“ಇಂಡಿಯಾ ಒಕ್ಕೂಟವನ್ನು ಒಡೆಯಲು ಕೇಂದ್ರ ಸರ್ಕಾರ ಸಾಕಷ್ಟು ಪ್ರಯತ್ನ ಪಟ್ಟಿದ್ದು, ಇ.ಡಿ, ಸಿಬಿಐ ಹಾಗೂ ಐಟಿ ಮೂಲಕ ಬೆದರಿಸಿದೆ. ಆದರೂ ನಾವೆಲ್ಲ ಒಗ್ಗಟ್ಟಾಗಿದ್ದೇವೆ. ನರೇಂದ್ರ ಮೋದಿಯನ್ನು ಕಿತ್ತೊಗೆಯುವುದೇ ನಮ್ಮೆಲ್ಲರ ಗುರಿ” ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಹೇಳಿದರು.

ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಚುನಾವಣೆ ಬಾಂಡ್‌ ಮೂಲಕ ಏಳು ಸಾವಿರ ಕೋಟಿ ಭ್ರಷ್ಟಾಚಾರವನ್ನು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾಡಿದೆ. ಜನ ಇದನ್ನೆಲ್ಲ ನೋಡಿದ್ದಾರೆ. ಮೋದಿ ಅವರಿಗೆ ಈ ಬಾರಿ ತಕ್ಕ ಪಾಠ ಕಲಿಸಲಿದ್ದಾರೆ” ಎಂದರು.

“ಇಂಡಿಯಾ ಒಕ್ಕೂಟದಲ್ಲಿ ಇರುವವರು ಬಿಜೆಪಿಯನ್ನು ಮನೆಗೆ ಕಳುಹಿಸಬೇಕು ಎಂದು ಒಗ್ಗಟ್ಟಾಗಿದ್ದಾರೆ. ಚುನಾವಣಾ ಫಲಿತಾಂಶ ಎಲ್ಲದಕ್ಕೂ ಉತ್ತರ ಕೊಡಲಿದೆ. ಈ ಬಾರಿ 200 ಸೀಟುಗಳಿಗಿಂತ ಕೆಳಗಡೆ ಬಿಜೆಪಿ ಇಳಿಯುತ್ತದೆ. ಬಿಜೆಪಿಯನ್ನು ನಾವೆಲ್ಲ ಒಗ್ಗಟ್ಟಾಗಿ ಸೋಲಿಸುತ್ತೇವೆ. ಇದು ನಮ್ಮ ಗ್ಯಾರಂಟಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಸ್ಲಿಂ ಲೀಗ್‌ ಮೇಲೆ ಬಿಜೆಪಿಯವರಿಗೆ ಬಹಳ ಪ್ರೀತಿ. ಸಂವಿಧಾನ ವಿರುದ್ಧ ಬಿಜೆಪಿಯವರು ಏಕೆ ಮಾತನಾಡುತ್ತಾರೆ? ಅವರಿಗೆ ಸಮನತೆ ಬೇಕಾಗಿಲ್ಲ. ಉದ್ದೇಶಪೂರ್ವಕವಾಗಿ ಮುಸ್ಲಿಮರನ್ನು ಮುಂದಿಟ್ಟು ಸಮಾನತೆ ಆಶಯವನ್ನು ಹಾಳು ಮಾಡುತ್ತಿದ್ದಾರೆ. ಯತ್ನಾಳ್‌ ಅಂತವರು ಸಮಾಜ ದ್ರೋಹಿಗಳು” ಎಂದು ಕಿಡಿಕಾರಿದರು.

“ಜನಸಾಮಾನ್ಯರಿಗೆ ಮೋದಿ ಮೋಸ ಅರ್ಥವಾಗಿದೆ. ಬಿಜೆಪಿ ಭ್ರಷ್ಟಾಚಾರದಲ್ಲಿ ಸಂಪೂರ್ಣವಾಗಿ ಮುಳುಗಿದೆ. ಬಿಜೆಪಿಯವರು ಯಾವಾಗಲು ತಿರುಕನ ಕನಸು ಕಾಣುತ್ತಾರೆ. ದೇಶದ ಜನತೆ ಮೋದಿ ಆಡಳಿತದಿಂದ ರೋಸಿ ಹೋಗಿದ್ದಾರೆ. ಫಲಿತಾಂಶ ನೀವೇ ನೋಡಿ” ಎಂದು ಹೇಳಿದರು.

“ಇದು ದೇಶದ ರಾಜಕರಾಣ. ನಮ್ಮಲ್ಲಿನ ಭಿನ್ನಾಭಿಪ್ರಾಯ ಮರೆತು ನಾವು ಹೋರಾಡುತ್ತಿದ್ದೇವೆ. ರಾಜ್ಯ ರಾಜಕಾರಣ ಬಗ್ಗೆ ಮಾತನಾಡುವುದಿಲ್ಲ. ಲೋಕಸಭೆ ಚುನಾವಣೆ ಮುಗಿದ ಮೇಲೆ ಮಾತನಾಡುವೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...