ಸರ್ವಪಕ್ಷ ನಿಯೋಗ ಎಂಬುದು ಮೋದಿ ಸರ್ಕಾರದ ‘ಸಾಮೂಹಿಕ ಗೊಂದಲ ಸೃಷ್ಟಿಸುವ ಆಯುಧ’

Date:

ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ತನ್ನ ನಿಲುವು ಮತ್ತು ಭಾರತದ ಪ್ರಜಾಪ್ರಭುತ್ವ ತತ್ವಗಳನ್ನು ಮಿತ್ರ ರಾಷ್ಟ್ರಗಳಿಗೆ ಮನದಟ್ಟು ಮಾಡಿಕೊಡಲು ಕೇಂದ್ರ ಸರ್ಕಾರವು 7 ಸರ್ವಪಕ್ಷ ನಿಯೋಗಗಳನ್ನು ಕಳಿಸುತ್ತಿದೆ. ಈ ರಾಜತಾಂತ್ರಿಕ ನಿಯೋಗಗಳು ಮೋದಿ ಸರ್ಕಾರದ ‘ಸಾಮೂಹಿಕ ಗೊಂದಲದ ಆಯುಧ’ (ಡಬ್ಲ್ಯೂಎಂಡಿ)ದ ಭಾಗವಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಇತ್ತೀಚೆಗೆ, ಪಹಲ್ಗಾಮ್ ದಾಳಿಯಿಂದ ಉಂಟಾದ ಭಾರತ-ಪಾಕ್ ಸಂಘರ್ಷದ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕು, ಕದನ ವಿರಾಮ ಘೋಷಣೆಗೆ ತಮ್ಮದೇ ಪಾತ್ರವೆಂದು ಹೇಳಿಕೊಳ್ಳುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಹೇಳಿಕೆಗಳಿಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಆದರೆ, ಈ ವಿಚಾರಗಳಿಂದ ಜನರ ಚಿತ್ತವನ್ನು ಬೇರೆಡೆಗೆ ತಿರುಗಿಸಲು ಮತ್ತು ಗೊಂದಲ ಸೃಷ್ಟಿಸಿಲು ‘ಸರ್ವಪಕ್ಷ ನಿಯೋಗ’ ಎಂಬುದನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

“ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಕಾರಣರಾದ ಭಯೋತ್ಪಾದಕರು ಈ ಹಿಂದೆಯೂ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದ್ದರು ಎಂಬ ವರದಿಗಳಿವೆ. ಇದು ನಿಜವಾಗಿದ್ದರೆ, ಸರ್ಕಾರವು ಸ್ಪಷ್ಟೀಕರಣ ಕೊಡಬೇಕು. ಏಕೆಂದರೆ, ಭಯೋತ್ಪಾದಕರು ದಾಳಿಗಳಲ್ಲಿ ಭಾಗಿಯಾಗಿಯೂ ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿರುವುದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಸತ್ತಿನ ಅಧಿವೇಶನವನ್ನು ಕರೆಯಲು ಪ್ರಧಾನಿ ಮೋದಿ ನಿರಾಕರಿಸುತ್ತಿದ್ದಾರೆ. ಇದೇ ಸಮಯದಲ್ಲಿ 50 ಸಂಸದರ ನಿಯೋಗವನ್ನು ವಿವಿಧ ದೇಶಗಳಿಗೆ ಕಳುಹಿಸುವುದನ್ನು ಮುಂದುವರಿಸಿದ್ದಾರೆ. ಇದೆಲ್ಲವೂ ದೇಶೀಯ ದೃಷ್ಟಿಕೋನದಲ್ಲಿ ಅರ್ಥಹೀನ” ಎಂದು ರಮೇಶ್ ಹೇಳಿದ್ದಾರೆ.

“ಈ ನಿಯೋಗಗಳು ‘ಅರ್ಥಹೀನ ಆಪ್ಟಿಕಲ್ ಕೆಲಸಗಳು’. ಭಾರತ ಮತ್ತು ಪಾಕಿಸ್ತಾನ – ಎರಡೂ ‘ಡಬ್ಲ್ಯೂಎಂಡಿ’ಗಳನ್ನು ಹೊಂದಿವೆ. ಪಾಕಿಸ್ತಾನ ಹೊಂದಿಲ್ಲದ ಒಂದು ಡಬ್ಲ್ಯೂಎಂಡಿಯನ್ನು ಭಾರತ ಹೊಂದಿದೆ. ಅದು, ಸಾಮೂಹಿಕ ವಿಚಲಿತಗೊಳಿಸುವ ಆಯುಧ. ಮೋದಿ ಮೂರು WMD ಗಳನ್ನು ಬಿಡುಗಡೆ ಮಾಡಿದ್ದಾರೆ – 1. ‘ಸಾಮೂಹಿಕ ಮಾನಹಾನಿ ಆಯುಧ’ವನ್ನು ಬಿಜೆಪಿ ಪ್ರಧಾನ ಕಚೇರಿಯಿಂದ ಬಿಡುಗಡೆ ಮಾಡಲಾಗಿದೆ. 2. ‘ಸಾಮೂಹಿಕ ಗಮನ ಬದಲಿಸುವ ಆಯುಧ’ ಹಾಗೂ 3. ‘ಸಾಮೂಹಿಕ ವಿಚಲಿತಗೊಳಿಸುವ (ಗೊಂದಲ) ಆಯುಧ’. ವಿದೇಶಗಳಿಗೆ ಸಂಸದರ ಸರ್ವಪಕ್ಷ ನಿಯೋಗಗಳನ್ನು ಕಳಿಸಿರುವುದು ‘ಡಬ್ಲ್ಯೂಎಂಡಿ’ಯ ಭಾಗವಾಗಿದೆ” ಎಂದು ಅವರು ವಿವರಿಸಿದ್ದಾರೆ.

““ಟ್ರಂಪ್ 11 ದಿನಗಳಲ್ಲಿ ಎಂಟು ಬಾರಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮದಲ್ಲಿ ತಮ್ಮದೇ ಪಾತ್ರವಿರುವುದಾಗಿ ಹೇಳಿಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ಪ್ರಧಾನಿಗಳನ್ನು ಸಮಾನವಾಗಿ ಹೊಗಳಿದ್ದಾರೆ. ಇಬ್ಬರನ್ನೂ ಎಲ್ಲ ರೀತಿಯಲ್ಲೂ ಸಮಾನವೆಂದು ಹೇಳಿದ್ದಾರೆ. ಎರಡು ದೇಶಗಳು ಕದನ ವಿರಾಮ ಘೋಷಿಸುವಂತೆ ಮಾಡಲು ಅಮೆರಿಕ ಜೊತೆಗಿನ ವ್ಯಾಪಾರ ವಹಿವಾಟನ್ನು ಅಸ್ತ್ರವಾಗಿ ಬಳಸಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ, ಅವರ ಹೇಳಿಕೆಗಳನ್ನು ಮೋದಿ ಒಮ್ಮೆಯೂ ತಿರಸ್ಕರಿಸಿಲ್ಲ. ಗಾಢ ಮೌನಕ್ಕೆ ಜಾರಿದ್ದಾರೆ. ಈ ಮೌನ ಯಾಕೆ” ಎಂದು ಪ್ರಶ್ನಿಸಿದ್ದಾರೆ.

“ಟ್ರಂಪ್ ಹೇಳಿಕೆ ಬಗ್ಗೆ ಪ್ರಧಾನಿ ಮೋದಿ ಮೌನವಾಗಿದ್ದಾರೆ. ಹಿಂದೆ, ‘ಹೌಡಿ ಮೋದಿ’, ‘ನಮಸ್ತೆ ಟ್ರಂಪ್’ ಎಲ್ಲವೂ ನಡೆದಿದೆ. ಆದರೆ, ಈಗ ಮೋದಿ ಮಾತನಾಡುತ್ತಿಲ್ಲ. ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಒಂದು ಹೆಜ್ಜೆ ಮುಂದೆ ಹೋಗಿ, ಎರಡೂ ದೇಶಗಳ ನಡುವಿನ ಮಾತುಕತೆಗಳು ‘ತಟಸ್ಥ ಸ್ಥಳದಲ್ಲಿ’ ನಡೆಯುತ್ತವೆ ಎನ್ನುತ್ತಿದ್ದಾರೆ. ಇದಕ್ಕೂ ಯಾವುದೇ ಪ್ರತಿಕ್ರಿಯೆಗಳಿಲ್ಲ” ಎಂದು ಅವರು ಆರೋಪಿಸಿದ್ದಾರೆ.

“ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಕಾರಣರಾದ ಭಯೋತ್ಪಾದಕರು ಈ ಹಿಂದೆ ಜಮ್ಮು-ಕಾಶ್ಮೀರದಲ್ಲಿ ನಡೆದಿದ್ದ ಮೂರು ಭಯೋತ್ಪಾದಕ ದಾಳಿಗಳಲ್ಲಿಯೂ ಭಾಗಿಯಾಗಿದ್ದಾರೆ ಎಂಬ ಕೆಲವು ಸುದ್ದಿ ವರದಿಗಳಿವೆ. ವರದಿಗಳ ಪ್ರಕಾರ, ಇದೇ ಭಯೋತ್ಪಾದರು 2023ರ ಡಿಸೆಂಬರ್‌ಬಲ್ಲಿ ನಡೆದ ಪೂಂಚ್‌ ಭಯೋತ್ಪಾದಕ ದಾಳಿ, 2024ರ ಅಕ್ಟೋಬರ್‌ನಲ್ಲಿ ನಡೆದ ಗಂಡರ್ಬಾಲ್‌ ದಾಳಿ ಹಾಗೂ ಅದೇ ತಿಂಗಳು ನಡೆದ ಗುಲ್ಮಾರ್ಗ್‌ ದಾಳಿಯಲ್ಲಿ ಭಾಗಿಯಾಗಿದ್ದರು. ಈ ಮೂರು ದಾಳಿಗಳಲ್ಲೂ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರೇ ಭಾಗಿಯಾಗಿದ್ದರು ಎಂಬುದು ನಿಜವಾಗಿದ್ದರೆ, ನಮ್ಮ ಸಂಸದರ ನಿಯೋಗವು ವಿದೇಗಳಲ್ಲಿ ಏನು ಹೇಳುತ್ತದೆ. ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದಾದ್ಯಂತ ಆರಾಮವಾಗಿ ಸುತ್ತಾಡುತ್ತಿದ್ದಾರೆ ಎಂದು ಹೇಳುತ್ತದೆಯೇ” ಎಂದು ಪ್ರಶ್ನಿಸಿದ್ದಾರೆ.

“ಪಹಲ್ಗಾಮ್ ದಾಳಿ ನಡೆದು ಒಂದು ತಿಂಗಳು ಕಳೆದಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಇದ್ದಕ್ಕಿದ್ದಂತೆ ಮತ್ತು ಅನಿರೀಕ್ಷಿತವಾಗಿ ಏಕೆ ನಿಲ್ಲಿಸಲಾಯಿತು ಮತ್ತು ಕಾರ್ಯಾಚರಣೆಯ ಸಂಪೂರ್ಣ ಪರಿಣಾಮಗಳು ಏನು ಎಂಬುದರ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಇದನ್ನು ನಿರ್ಣಯಿಸಲು ಏಕೈಕ ಮಾರ್ಗವೆಂದರೆ, ಕಾರ್ಗಿಲ್ ಸಮಿತಿಯಂತೆ ಈಗಲೂ ಸಮಿತಿ ರಚಿಸಿಬೇಕು. ಪರಿಶೀಲನೆಗಳನ್ನು ನಡೆಸಬೇಕು” ಎಂದು ರಮೇಶ್ ಒತ್ತಾಯಿಸಿದ್ದಾರೆ.

“ಕಾರ್ಗಿಲ್ ಯುದ್ಧ ಮುಗಿದ ಮೂರೇ ದಿನಗಳಲ್ಲಿ (1999ರ ಜುಲೈ 29) ವಾಜಪೇಯಿ ಸರ್ಕಾರ ಕಾರ್ಗಿಲ್ ಪರಿಶೀಲನಾ ಸಮಿತಿಯನ್ನು ರಚಿಸಿತು. ಸಮಿತಿಯು ನೀಡಿದ ವರದಿಯನ್ನು 2000ದ ಫೆಬ್ರವರಿ 23ರಂದು ಸಂಸತ್ತಿನಲ್ಲಿ ಮಂಡಿಸಲಾಯಿತು. 1962ರಲ್ಲಿ ಚೀನಾ ಆಕ್ರಮಣದ ಸಮಯದಲ್ಲಿ ನೆಹರು ಅವರು ವಿಶೇಷ ಅಧಿವೇಶನ ಕರೆದಿದ್ದರು. ಅಂತೆಯೇ, ಈಗಲೂ ಮೋದಿ ಸರ್ಕಾರ ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಪರಿಶೀಲಿಸಲು ಪರಿಶೀಲನಾ ಸಮಿತಿಯನ್ನು ರಚಿಸಬೇಕು ಮತ್ತು ವಿಶೇಷ ಅಧಿವೇಶನವನ್ನು ಕರೆಯಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...