ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರೂ ಸತೀಶ್ ಸೈಲ್ ಹಾದಿ ಹಿಂಬಾಲಿಸುವ ಸ್ಥಿತಿ ಬರುತ್ತೆ: ವಿಜಯೇಂದ್ರ

Date:

ಅಕ್ರಮ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ ₹200 ಕೋಟಿಗೂ ಹೆಚ್ಚಿನ ನಷ್ಟ ಉಂಟು ಮಾಡಿದ ಆರು ಕ್ರಿಮಿನಲ್ ಆರೋಪಗಳಲ್ಲಿ ದೋಷಿಯಾಗಿ ಜೈಲು ಸೇರಿರುವ ಕಾರವಾರ ಶಾಸಕ ಸತೀಶ್ ಸೈಲ್ ಅವರ ವಿರುದ್ಧ ಬಂದಿರುವ ತೀರ್ಪು ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಆರೋಪಿತರಾಗಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರೂ ಸತೀಶ್ ಸೈಲ್ ಅವರ ಹಾದಿಯನ್ನು ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥರೆಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಈ ನೆಲದ ಕಾನೂನು ಅದೆಷ್ಟು ಗಟ್ಟಿಯಾಗಿದೆ ಎನ್ನುವುದನ್ನು ನಿರೂಪಿಸಿದೆ” ಎಂದಿದ್ದಾರೆ.

“ಈ ತೀರ್ಪು ಮುಡಾ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳಂತಹ ಲೂಟಿಕೋರತನ ಹಾಗೂ ಭ್ರಷ್ಟತೆಯ ಆರೋಪ ಎದುರಿಸುತ್ತಿರುವವರ ಮುಖಕ್ಕೆ ಹಿಡಿದ ಕನ್ನಡಿಯಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಡಾ ಹಗರಣದ ಕುರಿತು ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಎತ್ತಿ ಹಿಡಿದಿರುವ ಉಚ್ಛ ನ್ಯಾಯಾಲಯದ ಸುದೀರ್ಘ ತೀರ್ಪಿನಲ್ಲಿ ಹಗರಣದ ಕುರಿತಾದ ಉಲ್ಲೇಖಗಳು ಸ್ಪಷ್ಟವಾಗಿ ನಮೂದಾಗಿವೆ. ಈ ನಿಟ್ಟಿನಲ್ಲಿ ಇ.ಡಿ ಹಾಗೂ ಲೋಕಾಯುಕ್ತದಲ್ಲಿ ತನಿಖೆಯೂ ಸಾಗಿದೆ, ಹೀಗಾಗಿಯೂ ಭಂಡತನ ಮೆರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕ ಸತೀಶ್ ಸೈಲ್ ವಿರುದ್ಧದ ತೀರ್ಪಿನಿಂದಾದರೂ ಎಚ್ಚೆತ್ತುಕೊಂಡು ನೈತಿಕತೆ ಮೆರೆದರೆ ಭವಿಷ್ಯತ್ತಿನಲ್ಲಿ ಅವರು ಕಿಂಚಿತ್ತಾದರೂ ಗೌರವ ಉಳಿಸಿಕೊಳ್ಳಬಹುದು” ಎಂದಿದ್ದಾರೆ.

“ಸಿದ್ದರಾಮಯ್ಯ ಅವರು ಪಾಠ ಕಲಿಯದಿದ್ದರೆ ನ್ಯಾಯಾಲಯವೇ ಅವರಿಗೆ ಹಾದಿ ತೋರುವ ಪರಿಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬುದು ಸತೀಶ್ ಸೈಲ್ ಪ್ರಕರಣದ ತೀರ್ಪು ತಿಳಿಸಿಕೊಟ್ಟಿದೆ” ಎಂದು ಹೇಳಿದ್ದಾರೆ.

ಆರ್‌ ಅಶೋಕ್‌ ಹೇಳಿದ್ದೇನು?

“ಮತ್ತೊಬ್ಬ ಕಾಂಗ್ರೆಸ್ ಶಾಸಕ ಜೈಲು ಪಾಲು! ವಾಲ್ಮೀಕಿ ಅಭಿವೃದ್ಧಿ ನಿಗಮದ ಎ1 ಆರೋಪಿ ಮಾಜಿ ಸಚಿವ ನಾಗೇಂದ್ರ ಅವರ ನಂತರ ಈಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ಜೈಲು ಪಾಲಾಗುವ ಸರದಿ ಬಂದಿದೆ. ಬೇಲೆಕೇರಿ ಬಂದರಿನಲ್ಲಿ ಅಕ್ರಮವಾಗಿ ಅದಿರು ಸಾಗರ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿದೆ. ಈ ಕಡು ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ಇಡೀ ಸಚಿವ ಸಂಪುಟ ಮತ್ತು ಶಾಸಕರು ಮಾಡಿರುವ ಸರಣಿ ಹಗರಣಗಳ ಮೇಲೆ ‘ಅಲಿ ಬಾಬಾ ಮತ್ತು 135 ಕಳ್ಳರು’ ಎಂದು ಸಿನಿಮಾ ಅಥವಾ ವೆಬ್ ಸೀರೀಸ್ ತೆಗೆಯಬಹುದು” ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...