ಮಣಿಪುರದ ಹಿಂಸಾಚಾರಕ್ಕೆ ಹಿಂದೆ ಆಳಿದ ಪಕ್ಷಗಳೇ ಕಾರಣ: ಶೋಭಾ ಕರಂದ್ಲಾಜೆ ಆರೋಪ

Date:

ಮಣಿಪುರದ ಘಟನೆ ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಕೆಟ್ಟದಾಗಿ ಬಿಂಬಿಸುವ ಕೆಲಸ ನಡೆಯುತ್ತಿದೆ. ಆದರೆ, ಮಣಿಪುರದ ಈಗಿನ ಹಿಂಸಾಚಾರಕ್ಕೆ ಹಿಂದೆ ಆಳಿದ ಪಕ್ಷಗಳೇ ಕಾರಣ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಮಣಿಪುರದಲ್ಲಿ ಜಾತಿ, ಧರ್ಮ ಸಂಘರ್ಷ ನಡಿಯುತ್ತಿದೆ. ಹಿಂದಿನ ಸರ್ಕಾರಗಳ ತಪ್ಪುಗಳ ಕಾರಣದಿಂದ ಇದೆಲ್ಲ ನಡೆಯುತ್ತಿದೆ” ಎಂದು ದೂರಿದರು.

ಬೇರೆ ದೇಶದ ನುಸುಳುಕೋರರು ದೊಡ್ಡ ಪ್ರಮಾಣದಲ್ಲಿ ಈಶಾನ್ಯ ಭಾಗದಲ್ಲಿ ಜಮಾ ಆಗಿದ್ದಾರೆ. ನುಸುಳುಕೋರರನ್ನು ಹೊರ ಹಾಕುವ ಕೆಲಸವನ್ನು ಕೇಂದ್ರ ಸರ್ಕಾರ ನಿರಂತರವಾಗಿ ಮಾಡುತ್ತಿದೆ. ಈಶಾನ್ಯದ ಎಲ್ಲ ರಾಜ್ಯಗಳನ್ನು ಹಿಂದಿನ ಯುಪಿಎ ಸರ್ಕಾರ ಮತ್ತು ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡಿತ್ತು. ಈಶಾನ್ಯ ರಾಜ್ಯಗಳ ಜನರು ತಾವು ಭಾರತೀಯರು ಎಂದು ಒಪ್ಪಿಕೊಳ್ಳುತ್ತಿರಲಿಲ್ಲ. ಆದರೆ, ಈಗ ಇಡೀ ಈಶಾನ್ಯದ ಎಲ್ಲ ರಾಜ್ಯಗಳಲ್ಲಿ ನಮ್ಮ ಭಾರತ ಎನ್ನುತ್ತಾರೆ. ಅಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಸಹ ನಡೆಯುತ್ತಿವೆ. ಮೊದಲ ಬಾರಿಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಅವರು ನೋಡುತ್ತಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೀಗಾಗಿ ವಿದ್ರೋಹಿ ಚಟುವಟಿಕೆ ನಡೆಸಲು ಅಲ್ಲಿಗೆ ಬರುತ್ತಾರೆ. ಈಶಾನ್ಯ ರಾಜ್ಯಗಳಲ್ಲಿ ಶಾಂತಿ ನೆಲೆಸಬೇಕು. ಭಾರತದ ಒಂದು ಭಾಗ ಆಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೌಲಭ್ಯ ಅವರಿಗೆ ಸಿಗಬೇಕು.

ಪಾರ್ಲಿಮೆಂಟ್ ನಲ್ಲಿ ಚರ್ಚೆ ಮಾಡೋದು ಬಿಟ್ಟು ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು ಹೊರಗೆ ಚರ್ಚೆ ಮಾಡುತ್ತಿವೆ. ಯಾವುದೇ ಉತ್ತರಕ್ಕೂ ಭಾರತ ಸರ್ಕಾರ ಸಿದ್ಧವಿದೆ. ಪಶ್ಚಿಮ ಬಂಗಾಳದ ಮಾಲ್ಡದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿದ ಪ್ರಕರಣ ಹೊರ ಬರುತ್ತಿದೆ. ರಾಜಕಾರಣ ಎಲ್ಲರೂ ಮಾಡ್ತಾರೆ. ಕೊಲ್ಲುವ ರಾಜಕಾರಣ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿದೆ. ಕೇಂದ್ರ ಸರ್ಕಾರವನ್ನು ಕೆಟ್ಟದಾಗಿ ಬಿಂಬಿಸುವ ಕೆಲಸ ನಡೆಯುತ್ತಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಹಾಲು, ಮದ್ಯದಿಂದ ಅನ್ನಭಾಗ್ಯ ಹಣ ವಸೂಲಿಗೆ ಇಳಿದಿರುವ ಕಾಂಗ್ರೆಸ್‌ ವಿತ್ತನೀತಿಗೆ ಧಿಕ್ಕಾರ: ಎಚ್‌ಡಿಕೆ

ಶೀಘ್ರವೇ ವಿಪಕ್ಷ ನಾಯಕನ ಆಯ್ಕೆ

ರಾಜ್ಯ ವಿರೋಧ ಪಕ್ಷದ ನಾಯಕನ ಆಯ್ಕೆ ಆದಷ್ಟು ಬೇಗ ನಡೆಯಲಿದೆ. ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ. ನಮ್ಮ ಸ್ಟ್ರಾಟರ್ಜಿಯಲ್ಲಿ ಮುಂದಿನ ದಿನಗಳಲ್ಲಿ ನಾವು ನಾಯಕನನ್ನು ಆಯ್ಕೆ ಮಾಡುತ್ತೇವೆ ಎಂದು ಹೇಳಿದರು.

ಆದರೆ, ಕಾಂಗ್ರೆಸ್ ಯಾವ ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆಯೋ ಆ ಭರವಸೆಗಳು ಈಗ ಈಡೇರುತ್ತಿಲ್ಲ. ರಾಜ್ಯದ ಹಣಕಾಸಿನ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಅವರು ಕೊಟ್ಟ 5 ಗ್ಯಾರಂಟಿಗಳನ್ನು ಮೊದಲ ಕ್ಯಾಬಿನೆಟ್ ನಲ್ಲಿ ಜಾರಿ ಮಾಡ್ತೇವೆ ಎಂದಿದ್ದರು. ಸಿದ್ಧರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರಿಗೆ ಕೇಳುತ್ತೇನೆ ನಿಮ್ಮ ಮೊದಲ ಕ್ಯಾಬಿನೆಟ್ ಯಾವಾಗ? ಮೊದಲ ಕ್ಯಾಬಿನೆಟ್ ನಲ್ಲಿ ನೀವು ಕೊಡೋದು ಯಾವಾಗ ಎಂದು ಪ್ರಶ್ನಿಸಿದರು.

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಸರಿಯಾದ ಯೋಜನೆ ಅಲ್ಲ. ಸಾರಿಗೆ ಸಂಸ್ಥೆ ನಷ್ಟದಲ್ಲಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಅವರಿಗೆ ಸಂಬಳ ನೀಡಲು ಕಷ್ಟ ಆಗಲಿದೆ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...