ಮತ್ತೆ ಹೊಸ ವಿವಾದದಲ್ಲಿ ಸಿಲುಕಿದ ಸಂಸದ ಪ್ರತಾಪ್ ಸಿಂಹ: ಸಹೋದರನ ವಿರುದ್ಧ ಮರಗಳ್ಳತನ ಆರೋಪ

Date:

ಸಂಸತ್‌ನ ಭದ್ರತಾ ಲೋಪ ಪ್ರಕರಣದಲ್ಲಿ ಆರೋಪಿಗಳಿಗೆ ಲೋಕಸಭೆಯ ಒಳಗಡೆ ಪ್ರವೇಶಿಸಲು ಪಾಸ್ ನೀಡಿ ವಿವಾದಕ್ಕೆ ಸಿಲುಕಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಈಗ ಮತ್ತೊಂದು ಹೊಸ ವಿವಾದದಲ್ಲಿ ಸಿಲುಕಿದ್ದಾರೆ.

ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಅನುಮತಿ ಇಲ್ಲದೆಯೇ ಅಕ್ರಮವಾಗಿ ಕಡಿದು, ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಶೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ.

ಇನ್ನು ಈ ಹಗರಣದಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಲಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಕಾಂಗ್ರೆಸ್​ ತನ್ನ ‘ಎಕ್ಸ್’​​ ಖಾತೆಯಲ್ಲಿ ಸುಮಾರು 02 ನಿಮಿಷ 11 ಸೆಕೆಂಡ್‌ಗಳ ವಿಡಿಯೋ ಸಾಕ್ಷ್ಯ ಬಿಡುಗಡೆಗೊಳಿಸಿದೆ. ವಿಡಿಯೋ ಸಮೇತ ಆರೋಪ ಮಾಡಿದ್ದಲ್ಲದೇ, ಪ್ರತಾಪ್​ ಸಿಂಹರನ್ನು ಕೂಡ ಟೀಕೆ ಮಾಡಿದೆ.

“ಅಣ್ಣ ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ, ತಮ್ಮ ವಿಕ್ರಮ್ ಸಿಂಹ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾನೆ” ಎಂದು ಗಂಭೀರ ಆರೋಪ ಮಾಡುವ ಮೂಲಕ ಕಿಡಿಕಾರಿದೆ.

ಟ್ವೀಟ್‌ನಲ್ಲಿ, “ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಶೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ. ಇದರಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದು ಈ ಬಗ್ಗೆ ಸಚಿವ ಖಂಡ್ರೆ ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅದೇಶಿಸಲಿದ್ದಾರೆ. ನಿಮ್ಮ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ?” ಎಂದು ಬಿಜೆಪಿಯ ನಾಯಕರಲ್ಲಿ ಪ್ರಶ್ನಿಸಿದೆ.

ಆಗಿರೋದೇನು?

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದನಗೂಡು ಎಂಬ ಹಳ್ಳಿಯಲ್ಲಿರುವ ಸರ್ವೆ ನಂಬರ್ 16ರಲ್ಲಿ ನೂರಾರು ಮರಗಳನ್ನು ಕಡಿಯಲಾಗಿದೆ. ಅರಣ್ಯ ಇಲಾಖೆಯ ಶೆಡ್ಯೂಲ್ಡ್ ಪಟ್ಟಿಯಲ್ಲಿರುವ ಪ್ರಮುಖ ಮರಗಳನ್ನು ಕಡಿಯಲಾಗಿದೆ. ಅಂದರೆ ಈ ಮರಗಳನ್ನು ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಕಡಿಯಲು ಹಾಗೂ ಸಾಗಾಟ ಮಾಡಲು ಅವಕಾಶವಿಲ್ಲ. ಅಂಥದ್ದರಲ್ಲಿ ಸುಮಾರು 12 ಎಕರೆ ಪ್ರದೇಶದಲ್ಲಿ ಕಡಿದು ಹಾಕಿದ್ದು, ಸಾಗಾಟಕ್ಕೆ ರಾಶಿ ಹಾಕಲಾಗಿದೆ.

vikram simha
ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ

ಈ ಬಗ್ಗೆ ಮಾಹಿತಿ ಅರಿತ ದಕ್ಷ ಅಧಿಕಾರಿಯಾದ ಬೇಲೂರು ತಹಶೀಲ್ದಾರ್ ಮಮತಾ ಅವರು ಸ್ಥಳಕ್ಕೆ ಡಿ.16ರಂದು ಭೇಟಿ ನೀಡಿ ಪರಿಶೀಲಿಸಿದಾಗ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಕರಣ ಕೂಡ ದಾಖಲಿಸಿದ್ದಾರೆ.

ಈಗ ಬೆಳಕಿಗೆ ಬಂದಿರುವ ಪ್ರಕರಣ ಏನೆಂದರೆ, ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ, ಶುಂಠಿ ಬೆಳೆಯುವ ಉದ್ದೇಶಕ್ಕೆ ಜಯಮ್ಮ ಎಂಬುವವರೊಂದಿಗೆ ನಾಲ್ಕು ಎಕರೆಗಳ ಪ್ರದೇಶಕ್ಕೆ ಡಿ.11ರಂದು ಒಪ್ಪಂದ ಮಾಡಿಕೊಂಡಿದ್ದಾರೆ. ಡಿ.14ರಂದು ಒಪ್ಪಂದ ಮಾಡಿಕೊಂಡಿದ್ದ ಪ್ರದೇಶದಲ್ಲಿ, ಅರಣ್ಯ ಇಲಾಖೆಯ ಅನುಮತಿ ಇಲ್ಲದೆಯೇ ಅಕ್ರಮವಾಗಿ ಮರಗಳನ್ನು ಕಡಿದು ಹಾಕಲಾಗಿದೆ. ನಂಬಿ, ಹೊನ್ನೆ, ಹಲಸು ಸೇರಿದಂತೆ ನೂರಾರು ಅಮೂಲ್ಯವಾದ ಮರಗಳನ್ನು ಕಡಿದು ಹಾಕಲಾಗಿದ್ದು, ಸಾಗಾಟಕ್ಕೆ ಯತ್ನಿಸಲಾಗಿದೆ.

MARA
ಅಕ್ರಮವಾಗಿ ಕಡಿದು ಹಾಕಿ, ಸಾಗಾಟಕ್ಕೆ ರಾಶಿ ಹಾಕಲಾದ ಮರಗಳು

ಈ ಆರೋಪ ಒಂದು ಕಡೆಯಾದರೆ, ಇನ್ನೊಂದು ಗಂಭೀರ ಆರೋಪ ಕೂಡ ಇದರಲ್ಲಿ ಕೇಳಿಬಂದಿದೆ. ಒಟ್ಟು 12 ಎಕರೆ ಪ್ರದೇಶದಲ್ಲಿ ಮರಗಳನ್ನು ಕಡಿಯಲಾಗಿದೆ. ಇದರಲ್ಲಿ ನಾಲ್ಕೂವರೆ ಎಕರೆ ಪ್ರದೇಶವು ಸರ್ಕಾರಿ ಗೋಮಾಳ ಕೂಡ ಒಳಗೊಂಡಿದ್ದು, ಅದರಲ್ಲಿ ಇದ್ದಂತಹಾ ಮರಗಳನ್ನು ಕೂಡ ಕಡಿದು ಹಾಕಲಾಗಿದೆ ಎಂಬ ಅಂಶ ಈ ಘಟನೆಯಿಂದ ಬೆಳಕಿಗೆ ಬಂದಿದೆ.

ಈ ನಡುವೆ ಅರಣ್ಯ ಇಲಾಖೆಯವರು ಕೆಲವೊಂದು ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದಾರೆ. ಆದರೆ ಶುಂಠಿ ಬೆಳೆಯುವ ಉದ್ದೇಶಕ್ಕೆ ಒಪ್ಪಂದ ಮಾಡಿಕೊಂಡಿದ್ದ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಅವರ ಹೆಸರನ್ನು ಉಲ್ಲೇಖಿಸಿಲ್ಲ ಎಂಬ ಗಂಭೀರ ಆರೋಪ ಸ್ಥಳೀಯ ಅರಣ್ಯಾಧಿಕಾರಿಗಳ ಮೇಲೆ ಕೇಳಿಬಂದಿದೆ. ಈ ಹಗರಣದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಪಾತ್ರವೂ ಕೇಳಿ ಬಂದಿರುವುದರಿಂದ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಏನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...