ಪಾಕ್‌ ಪರ ಘೋಷಣೆ ಆರೋಪ | ಎಫ್‍ಎಸ್‍ಎಲ್ ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಐಜಿಪಿಗೆ ಮನವಿ

Date:

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಬಗ್ಗೆ ಎಫ್‍ಎಸ್‍ಎಲ್ ವರದಿ ಬಹಿರಂಗ ಮಾಡುವಂತೆ ಬಿಜೆಪಿ ನಿಯೋಗವು ಐಜಿಪಿಗೆ ಮನವಿ ಸಲ್ಲಿಸಿತು.

ಶಾಸಕರಾದ ಎಲ್ ಎ ರವಿಸುಬ್ರಹ್ಮಣ್ಯ, ಸಿ ಕೆ ರಾಮಮೂರ್ತಿ, ಉದಯ ಬಿ. ಗರುಡಾಚಾರ್ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಸೋಮವಾರ ನೃಪತುಂಗ ರಸ್ತೆಯಲ್ಲಿರುವ ಇನ್‍ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು.

“ಫೆಬ್ರವರಿ 27ರಂದು ವಿಧಾನಸೌಧದ ಕಾರಿಡಾರ್‌ನಲ್ಲಿ ರಾಜ್ಯಸಭಾ ಸಂಸದ ಸೈಯದ್ ನಾಸೀರ್ ಹುಸೇನ್ ಅವರ ಬೆಂಬಲಿಗರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ. ನಂತರ ಗೃಹ ಸಚಿವ ಡಾ. ಪರಮೇಶ್ವರ್ ಅವರು ಎಫ್‍ಎಸ್‍ಎಲ್ ವರದಿಯನ್ನು ಶೀಘ್ರವೇ ಬಹಿರಂಗ ಮಾಡುವ ಭರವಸೆ ನೀಡಿದ್ದರು. ಘಟನೆ ನಡೆದು ಒಂದು ವಾರ ಕಳೆದರೂ ಎಫ್‍ಎಸ್‍ಎಲ್ ವರದಿಯ ಮಾಹಿತಿ ಇಲ್ಲ” ಎಂದು ಮನವಿಯಲ್ಲಿ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳು ಸೃಷ್ಟಿಸಿ, ಬೆಂಕಿ ಹಚ್ಚಿ, ಭಯ ಬಿತ್ತುವವರು ಯಾರು?

ಸತ್ಯ ತಿಳಿಸಲು ವಿಳಂಬವೇಕೆ?

“ವಾಸ್ತವ ಸಂಗತಿ ಮರೆಮಾಚಲು ಮತ್ತು ತನಿಖೆಯ ದಿಕ್ಕನ್ನು ಹಳಿ ತಪ್ಪಿಸಲು ನಿಮ್ಮ ಮೇಲೆ ಯಾವುದಾದರೂ ಒತ್ತಡವಿದೆಯೇ ಎಂದು ಪ್ರಶ್ನಿಸಲಾಗಿದೆ. ಇಂತಹ ವಿಳಂಬದಿಂದ ಮುಂದಿನ ದಿನಗಳಲ್ಲಿ ಈ ರೀತಿ ದೇಶವಿರೋಧಿ ಮತ್ತು ಸಮಾಜಘಾತುಕ ಕೆಲಸ ಮಾಡುವ ಜನರಿಗೆ ಮತ್ತಷ್ಟು ಬಲ ಬಂದಂತಾಗುತ್ತದೆ. ಸತ್ಯ ತಿಳಿಸಲು ವಿಳಂಬವೇಕೆ?” ಎಂದು ಕೇಳಿದ್ದಾರೆ.

“ರಾಜ್ಯದ ಜವಾಬ್ದಾರಿಯುತ ವಿಪಕ್ಷವಾಗಿ, ನಾವು ಈ ಪತ್ರಕ್ಕೆ ನಿಮ್ಮಿಂದ ಪ್ರಾಮಾಣಿಕ ಮತ್ತು ತ್ವರಿತ ಪ್ರತ್ಯುತ್ತರದ ನಿರೀಕ್ಷೆಯಲ್ಲಿದ್ದೇವೆ” ಎಂದು ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...