ಲೋಕಸಭಾ ಚುನಾವಣೆ | ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟ

Date:

ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ 18ನೇ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಸಂಪೂರ್ಣವಾದ ಬೆಂಬಲವನ್ನು ಘೋಷಿಸಿದೆ.

ಕಾಂಗ್ರೆಸ್ ಪಕ್ಷವು ಶ್ರೀಮತಿ ಇಂದಿರಾ ಗಾಂಧಿಯವರು ಪ್ರಧಾನಮಂತ್ರಿ ಆಗಿದ್ದಾಗಿನಿಂದಲೂ ನಮ್ಮ ಸಮುದಾಯಕ್ಕೆ ಆದ್ಯತೆಯನ್ನು ಕೊಟ್ಟಿದೆ. ಹಾಗೆಯೇ ದೇಶದ ಹಲವಾರು ರಾಜ್ಯಗಳಲ್ಲಿ ನಮಗೆ ರಾಜಕೀಯ ಪ್ರಾತಿನಿಧ್ಯತೆಯನ್ನು ಕೊಡುತ್ತಿದೆ. ಮುಖ್ಯವಾಗಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಶ್ರೀಮತಿ ಅಕ್ಕೈ ಪದ್ಮಶಾಲಿಯವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದು, ನಮ್ಮ ಸಮುದಾಯದ ಇತರೆ ವ್ಯಕ್ತಿಗಳನ್ನು ವಿವಿಧ ಉತ್ತಮ ಸ್ಥಾನಗಳಲ್ಲಿ ನೇಮಕ ಮಾಡಿರುವುದರಿಂದ ನಾವು ಸಂಪ್ರೀತರಾಗಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರು ಒಳಗೊಳ್ಳುವಿಕೆ ಮತ್ತು ವೈವಿಧ್ಯತೆಗಳ ಕುರಿತಾಗಿ ಮುಕ್ತವಾಗಿ ಮಾತನಾಡಿರುವುದು ನಮಗೆ ಸಂತೋಷವನ್ನುಂಟು ಮಾಡಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

“ಪಂಚ ಗ್ಯಾರಂಟಿ ಯೋಜನೆಗಳಲ್ಲಿ ನಮ್ಮನ್ನು ಒಳಗೊಂಡಿದ್ದು, ಈಗಾಗಲೇ ಶಕ್ತಿ ಯೋಜನೆಯ ಫಲವನ್ನು ಪಡೆಯುತ್ತಿದ್ದೇವೆ. ಅತಿ ಶೀಘ್ರವಾಗಿ ಗೃಹಲಕ್ಷ್ಮೀ ಯೋಜನೆಯ ಫಲವು ಕೆಲವರಿಗೆ ಸಿಗುತ್ತಿದ್ದು, ಅತಿ ಶೀಘ್ರವಾಗಿ ನಮ್ಮೆಲ್ಲರಿಗೂ ಈ ಯೋಜನೆಯ ಫಲ ಸಿಗುತ್ತದೆ ಎಂಬ ನಂಬಿಕೆ ನಮಗಿದೆ. ನಮ್ಮ ಪಿಂಚಣಿಯನ್ನು ರೂಪಾಯಿ 1200/-ಕ್ಕೆ ಹೆಚ್ಚಿಸಿದ್ದಾರೆ. ಲಿಂಗಾಧಾರಿತವಾದ ತಾರತಮ್ಯವನ್ನು ನಿರ್ಮೂಲನೆ ಮಾಡುವ ಭರವಸೆಯನ್ನು ನೀಡಿದ್ದಾರೆ.LGBTQAI++( ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತರು ) ಸಮುದಾಯದ ವಿವಾಹ ಮತ್ತು ದಾಂಪತ್ಯದ ಕುರಿತಾಗಿಯೂ ಆಶಾದಾಯಕವಾದ ಹೇಳಿಕೆಗಳನ್ನು ಕೊಟ್ಟಿದ್ದಾರೆ” ಎಂದು ಒಕ್ಕೂಟ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯವಾಗಿ ದೇಶವನ್ನು ಧರ್ಮಾಧಾರಿತವಲ್ಲದೆ ಸರ್ವರಿಗೂ ನಾಗರಿಕ ಹಕ್ಕುಗಳನ್ನು ಕೊಡಮಾಡಿರುವ ಸಂವಿಧಾನ ಮತ್ತು ಸಂವಿಧಾನಾತ್ಮಕ ನೈತಿಕತೆಯ ಆಧಾರದ ಮೇಲೆ ಮುನ್ನಡೆಸಿ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಭಾರತವನ್ನು ಪುನರ್ ನಿರ್ಮಾಣ ಮಾಡುತ್ತಾರೆಂಬ ಹೆಗ್ಗನಸು ನಮ್ಮದು. ಹಾಗೆಯೇ ಕಾಂಗ್ರೆಸ್ ಪಕ್ಷದ ನೇತೃತ್ವದ ಕರ್ನಾಟಕ ರಾಜ್ಯದ ಸರ್ಕಾರವು ಶೋಷಿತ ಸಮುದಾಯಗಳ, ಅಲ್ಪಸಂಖ್ಯಾತ ಸಮುದಾಯಗಳ,ಮಹಿಳೆಯರ, ಯುವಕರ, ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಪ್ರಶಂಸಿಸಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟವು ತಿಳಿಸಿದೆ.

ಇದನ್ನು ಓದಿದ್ದೀರಾ? ದ.ಕನ್ನಡ | ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ ಸಹಿಸಲು ಸಾಧ್ಯವೇ? ಬಿಜೆಪಿಗೆ ಮತ ಹಾಕಲು ‘ಬಂಟ ಬ್ರಿಗೇಡ್’ ಹೆಸರಲ್ಲಿ ಕರಪತ್ರ!

ಒಕ್ಕೂಟದ ಮಾಳವಿಕ, ಪ್ರಕಾಶ್ ರಾಜ್, ಭೀಮಯ್ಯ , ಬೀರಲಿಂಗ, ಪೆದ್ದಣ್ಣ, ನಿತ್ಯಾನಂದ,ಸಂಜೀವನಿ, ಮಹಮ್ಮದ್ ಸೈಫುಲ್ಲಾ, ಕೃಷ್ಣಮೂರ್ತಿ, ಆದಿತ್ಯ, ಸಮೀರ್, ನಿವೇದಿತಾ, ಅಬಿದಾ ಬೇಗಮ್, ಪೂಜಿತಾ ಅವರು ತಮ್ಮ ಬೆಂಬಲವು ಕಾಂಗ್ರೆಸ್ ಪಕ್ಷಕ್ಕೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...