ಹತ್ತಿಕ್ಕಬೇಡಿ, ಅವಕಾಶ ನೀಡಿ: ಮೊದಲ ಭಾಷಣದಲ್ಲಿ ಸ್ಪೀಕರ್‌ಗೆ ವಿಪಕ್ಷ ನಾಯಕ ರಾಹುಲ್ ಮನವಿ

Date:

ಲೋಕಸಭೆ ಸ್ಪೀಕರ್ ಆಗಿ ಮತ್ತೆ ಆಯ್ಕೆಯಾದ ಓಂ ಬಿರ್ಲಾ ಅವರಿಗೆ ಅಭಿನಂದಿಸಿದ ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ “ಜನರ ಧ್ವನಿಯನ್ನು ಪ್ರತಿನಿಧಿಸಲು, ಮಾತನಾಡಲು ನಮಗೂ ಅವಕಾಶ ಕೊಡಿ” ಎಂದು ಮನವಿ ಮಾಡಿದ್ದಾರೆ.

ರಾಹುಲ್ ಗಾಂಧಿ ವಿಪಕ್ಷ ನಾಯಕರಾದ ಬಳಿಕ ಲೋಕಸಭೆಯಲ್ಲಿ ಮೊದಲ ಭಾಷಣವನ್ನು ಮಾಡಿದ್ದು ಇಂಡಿಯಾ ಒಕ್ಕೂಟದ ಪರವಾಗಿ ನೂತನವಾಗಿ ಆಯ್ಕೆಯಾದ ಸ್ಪೀಕರ್‌ಗೆ ಅಭಿನಂದಿಸಿದರು. ಜೊತೆಗೆ ಲೋಕಸಭೆಯು ಯಾವ ರೀತಿ ನಡೆಯಬೇಕು ಎಂದು ವಿವರಿಸಿದರು.

“ಕೆಳಮನೆ (ಲೋಕಸಭೆ) ಭಾರತದ ಜನರ ಧ್ವನಿಯನ್ನು ಪ್ರತಿನಿಧಿಸುತ್ತದೆ. ಈ ಧ್ವನಿಯ ಅಂತಿಮ ತೀರ್ಪುಗಾರರು ನೀವು. ಖಂಡಿತವಾಗಿಯೂ ಸರ್ಕಾರಕ್ಕೆ ರಾಜಕೀಯ ಬಲವಿದೆ. ಆದರೆ ವಿಪಕ್ಷಗಳು ಕೂಡಾ ಭಾರತದ ಜನರ ಧ್ವನಿಯನ್ನು ಪ್ರತಿನಿಧಿಸುತ್ತವೆ. ಕಳೆದ ಬಾರಿಗಿಂತ ಈ ಬಾರಿ ವಿಪಕ್ಷಗಳು ಗಮನಾರ್ಹವಾಗಿ ಅಧಿಕ ಜನರ ಧ್ವನಿಯನ್ನು ಪ್ರತಿನಿಧಿಸುತ್ತವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

“ನೀವು ಮಾಡುವ ಕೆಲಸಕ್ಕೆ ಬೆಂಬಲ ನೀಡುತ್ತೇವೆ. ಹಾಗೆಯೇ ಕೆಳಮನೆಯು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ನಾವು ಬಯಸುತ್ತೇವೆ. ಇದು ಅತೀ ಮುಖ್ಯ. ನಂಬಿಕೆಯ ಆಧಾರದಲ್ಲಿ ಸಹಕಾರ ಬೆಳೆಯುತ್ತದೆ. ಆದ್ದರಿಂದ ವಿಪಕ್ಷಗಳ ದನಿ ಅತೀ ಮುಖ್ಯವಾಗುತ್ತದೆ. ಈ ಮನೆಯಲ್ಲಿ ವಿಪಕ್ಷಗಳ ಪ್ರಾತಿನಿಧ್ಯಕ್ಕೆ ಅವಕಾಶ ಸಿಗಬೇಕು” ಎಂದು ಹೇಳಿದರು.

“ಜನರನ್ನು ಪ್ರತಿನಿಧಿಸಲು, ಮಾತನಾಡಲು, ದೇಶದ ಜನರ ದನಿಯನ್ನು ಪ್ರತಿನಿಧಿಸಲು ನಮಗೆ ನೀವು ಅವಕಾಶ ಮಾಡಿಕೊಡುತ್ತೀರಿ ಎಂಬ ವಿಶ್ವಾಸವಿದೆ. ಎಷ್ಟು ಪರಿಣಾಮಕಾರಿ ಸದನವು ನಡೆಯಲಿದೆ ಎಂಬುವುದು ಪ್ರಶ್ನೆಯಲ್ಲ. ಭಾರತದ ಎಷ್ಟು ಜನರ ಪ್ರತಿನಿಧಿಗಳಿಗೆ ಭಾಗಿಯಾಗಲು ಅವಕಾಶ ನೀಡಲಾಗುತ್ತದೆ ಎಂಬುವುದು ಪ್ರಶ್ನೆಯಾಗಿದೆ” ಎಂದು ಅಭಿಪ್ರಾಯಿಸಿದರು.

“ವಿಪಕ್ಷ ನಾಯಕರುಗಳ ಧ್ವನಿಯನ್ನು ಮೌನಗೊಳಿಸುವ ಮೂಲಕ ನೀವು ಲೋಕಸಭೆಯನ್ನು ಪರಿಣಾಮಕಾರಿಯಾಗಿ ನಡೆಸಬಹುದು ಎಂಬ ಕಲ್ಪನೆಯು ಪ್ರಜಾಸತ್ತಾತ್ಮಕವಲ್ಲದ ಕಲ್ಪನೆಯಾಗಿದೆ” ಎಂದರು.

ಇನ್ನು “ವಿಪಕ್ಷಗಳು ಈ ದೇಶದ ಸಂವಿಧಾನವನ್ನು ರಕ್ಷಿಸಬೇಕೆಂದು ಜನರು ಬಯಸುತ್ತಾರೆ ಎಂಬುವುದು ಈ ಚುನಾವಣೆಯಲ್ಲಿ ತಿಳಿದುಬಂದಿದೆ. ವಿಪಕ್ಷಗಳಿಗೆ ಮಾತನಾಡಲು ಅವಕಾಶ ನೀಡುವ ಮೂಲಕ, ಭಾರತದ ಜನರನ್ನು ಪ್ರತಿನಿಧಿಸಲು ನಮಗೆ ಅವಕಾಶ ನೀಡುವ ಮೂಲಕ ಭಾರತದ ಸಂವಿಧಾನವನ್ನು ರಕ್ಷಿಸುವ ನಿಮ್ಮ ಕರ್ತವ್ಯವನ್ನು ನೀವು ಮಾಡುತ್ತೀರಿ ಎಂಬ ವಿಶ್ವಾಸ ನಮಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...