ಚುನಾವಣಾ ಸಮಯದಲ್ಲಿ ಮನರೇಗಾ ವೇತನ ಹೆಚ್ಚಿಸಲು ಕೇಂದ್ರಕ್ಕೆ ಅನುಮತಿ; ಚುನಾವಣಾ ಆಯೋಗಕ್ಕೆ ನಿವೃತ್ತ ಅಧಿಕಾರಿ ಪತ್ರ

Date:

ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಮನರೇಗಾ) ವೇತನವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿದೆ. ಚುನಾವಣಾ ಸಮಯದಲ್ಲಿ ನೀಡಲಾಗಿರುವ ಈ ಅನುಮತಿಯನ್ನು ಖಂಡಿಸಿ ಆಯೋಗಕ್ಕೆ ನಿವೃತ್ತ ಅಧಿಕಾರಿ ಶರ್ಮಾ ಅವರು ಪತ್ರ ಬರೆದಿದ್ದಾರೆ. ವೇತನ ಹೆಚ್ಚಳವು ಪ್ರಚಾರಕ್ಕೆ ಬಳಸಿಕೊಳ್ಳುವ ಪ್ರಯತ್ನವಾಗಿದೆ. ಸರ್ಕಾರದ ಮೇಲೆ ಆಯೋಗವು ನಿರ್ಬಂಧ ಹೇರಬೇಕು ಎಂದು ಒತ್ತಾಯಿಸಿದ್ದಾರೆ.

ಮನರೇಗಾ ಕಾಯ್ದೆಯಡಿ ಪರಿಷ್ಕೃತ ವೇತನವನ್ನು ಏಪ್ರಿಲ್ 1ರಿಂದ ಜಾರಿಗೆ ತರಲು ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಮಾರ್ಚ್‌ 21 (ಗುರುವಾರ) ಚುನಾವಣಾ ಆಯೋಗವು ಅನುಮತಿ ನೀಡಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿಯಾಗಿದೆ.

ಈ ಹಿಂದೆ, 2019ರ ಮಾರ್ಚ್‌ 28ರಂದು ಕೇಂದ್ರ ಸರ್ಕಾರದಲ್ಲಿ ಕಾರ್ಯದರ್ಶಿಯಾಗಿದ್ದ ಶರ್ಮಾ ಅವರು ಇದೇ ರೀತಿಯ ಅನುಮತಿ ನೀಡಿದ್ದರು. ಆಗ ಚುನಾವಣಾ ಆಯೋಗವು ಕೆಲವು ಷರತ್ತು ವಿಧಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“(i) ಮಾಧ್ಯಮಗಳ ಮೂಲಕ ಸರ್ಕಾರವು ಯಾವುದೇ ಪ್ರಚಾರ ಮಾಡಬಾರದು.
(ii) ಯಾವುದೇ ರಾಜಕೀಯ ಕಾರ್ಯಕರ್ತರು ಪ್ರಚಾರದ ವೇಳೆ ಇದನ್ನು ಉಲ್ಲೇಖಿಸಬಾರದು, ಮತ್ತು
(iii) ನಿರ್ಬಂಧಗಳು ಕೇಂದ್ರ ಮತ್ತು ರಾಜ್ಯಗಳೆರಡಕ್ಕೂ ಅನ್ವಯಿಸುತ್ತವೆ” ಎಂದು ಹೇಳಿತ್ತು.

“ಆಯೋಗದ ಇತ್ತೀಚಿನ ಅನುಮತಿ ಕೂಡ ಇದೇ ರೀತಿಯ ಷರತ್ತುಗಳನ್ನು ನಿಗದಿಪಡಿಸಿದೆ ಎಂದು ನನಗೆ ಖಾತ್ರಿಯಿದೆ. ಇಲ್ಲದಿದ್ದರೆ, ಆಯೋಗವು ಅಂತಹ ನಿರ್ಬಂಧಗಳನ್ನು ವಿಧಿಸುವುದು ಅವಶ್ಯಕ” ಎಂದು ಶರ್ಮಾ ಹೇಳಿದ್ದಾರೆ.

ಅದಾಗ್ಯೂ, “ಇತ್ತೀಚೆಗೆ ಮನರೇಗಾ ವೇತನ ಪರಿಷ್ಕರಣೆ ವಿಚಾರವು ಸುದ್ದಿಯಲ್ಲಿದೆ ಮತ್ತು ಚರ್ಚೆಯಾಗುತ್ತಿದೆ ಎಂಬುದನ್ನು ಸುದ್ದಿ ವರದಿಗಳು ಸಾಕ್ಷಿಯಾಗಿವೆ. ಸ್ಪಷ್ಟವಾಗಿ, ಸಂಬಂಧಿತ ಸಚಿವಾಲಯವು ಉದ್ದೇಶಪೂರ್ವಕವಾಗಿ ಪರಿಷ್ಕರಣೆ ಕುರಿತು ವಿವರನ್ನು ಮಾಧ್ಯಮಗಳಿಗೆ ನೀಡಿದೆ. ಈ ಬಗ್ಗೆ ತುರ್ತಾಗಿ ತನಿಖೆ ಮಾಡಬೇಕು. ಅಗತ್ಯವಿದ್ದರೆ, ಕ್ರಮಗಳನ್ನೂ ತೆಗೆದುಕೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ತಮ್ಮ ಪತ್ರವನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರಿಗೆ ಕಳುಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...