ನಾನು ಡಿಕೆಶಿಗೆ ಸರಿಸಾಟಿ ಇದೀನಾ? ಇಲ್ಲವಾ? ಎಂಬುದು ಜನ ತೀರ್ಮಾನಿಸುತ್ತಾರೆ: ಕುಮಾರಸ್ವಾಮಿ

Date:

ನಾನು ಅವರಿಗೆ ಲೆಕ್ಕಕ್ಕೆ ಇದೀನಾ? ಸರಿಸಾಟಿ ಇದೀನಾ, ಇಲ್ಲವಾ? ಎಂಬುದನ್ನು ಜನರು ಚುನಾವಣೆಯಲ್ಲಿ ತೀರ್ಮಾನ ಮಾಡುತ್ತಾರೆ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ರಾಮನಾಥಪುರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮಗಳ ಜತೆ ಮಾತನಾಡಿ, “ಹೊಸ್ತೊಡಕು ದಿನ ನಮ್ಮ ತೋಟದಲ್ಲಿ ಏನು ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನಗೆ ಅಷ್ಟು ಜ್ಞಾನ ಇಲ್ಲವೇ? ಆದರೆ ಊಟವನ್ನೇ ದೊಡ್ಡ ವಿವಾದ ಮಾಡುತ್ತಿರುವ ಕಾಂಗ್ರೆಸ್ ನವರು ಅದೆಷ್ಟು ಹತಾಶರಾಗಿದ್ದಾರೆ ಎನ್ನುವುದು ಇದರಿಂದ ಅರ್ಥವಾಗುತ್ತದೆ” ಎಂದರು.

“ನಾನು ಜಾತಿ ಆಧಾರದಲ್ಲಿ ರಾಜಕಾರಣ ಮಾಡಿದವನಲ್ಲ. ಪಾಪ ನನ್ನ ಸ್ನೇಹಿತರಿಗೆ ಹಣದ ಮದ ನೆತ್ತಿಗೇರಿದೆ. ಕುಮಾರಸ್ವಾಮಿ ನನಗೆ ಡೋಂಟ್ ಕೇರ್ ಅಂದಿದ್ದಾರೆ, ನಾನೇನು ಲೆಕ್ಕಕ್ಕೆ ಇಟ್ಟುಕೊ ಎಂದು ಹೇಳಿದ್ದೀನಾ? ರಾಜ್ಯದ ಜನ ತೀರ್ಮಾನ ಮಾಡುತ್ತಾರೆ. ಇವರ ಹಣ, ಅಧಿಕಾರ ಯಾವುದನ್ನೂ ತೀರ್ಮಾನ ಮಾಡಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೊತ್ವಾಲ್ ರಾಮಚಂದ್ರನ ಗರಡಿಯಲ್ಲಿ ಬಂದಿರುವವರು ನೀವು, ಸ್ಟ್ರೈಟ್ ಫೈಟರ್ ಆಗಿದ್ದರೆ ವಿಧಾನಸೌಧದಲ್ಲಿ ಫೈಟ್ ಮಾಡ್ತೀರಾ? ನೀವು ಬಂದಿರುವ ಹಿನ್ನೆಲೆ ಅಂತದ್ದೇ ಅಲ್ಲವೇ? ನಿಮ್ಮ‌ ಮದ ಇಳಿಸುವ ಕಾಲ ಸನಿಹಕ್ಕೆ ಬಂದಿದೆ” ಎಂದು ಕಿಡಿಕಾರಿದರು.

ಫೋನ್ ಟ್ಯಾಪಿಂಗ್

ಆದಿಚುಂಚನಗಿರಿ ಶ್ರೀಗಳ ಫೋನ್ ಟ್ಯಾಪಿಂಗ್ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಮಾಡಿರುವ ಆರೋಪದ ಬಗ್ಗೆ ಉತ್ತರಿಸಿ, “ನಾನು ಫೋನ್ ಟ್ಯಾಪಿಂಗ್ ಮಾಡಿಕೊಳ್ಳುತ್ತಿದ್ದರೆ ನನ್ನ ಸರಕಾರವನ್ನು ಯಾಕೆ ಬೀಳಿಸಿಕೊಳ್ಳುತ್ತಿದ್ದೆ? ಅವರು ತನಿಖೆ ಮಾಡಿಕೊಳ್ಳಲಿ, ಈವರೆಗೆ ತನಿಖೆ ಮಾಡಿದರಲ್ಲ, ಅದು ಏನಾಯಿತು?” ಎಂದು ತರಾಟೆಗೆ ತೆಗೆದುಕೊಂಡರು.

ಆದಿಚುಂಚನಗಿರಿ ಮಠಕ್ಕೆ ಪರ್ಯಾಯವಾಗಿ ಮಠ ಮಾಡಿದರು ಎನ್ನುವ ಬಗ್ಗೆ ಉತ್ತರಿಸಿ, “ಬೇರೆ ಸಮುದಾಯಗಳಲ್ಲೂ ಎಷ್ಟು ಮಠಗಳಿಲ್ಲ? ನಮ್ಮ ಸಮುದಾಯದಲ್ಲೂ ಅಂಥ ಬೆಳವಣಿಗೆ ಆಗಲಿ ಎಂದು ಇನ್ನೊಬ್ಬರಿಗೂ ಸಹಾಯ ಮಾಡಿದ್ದೇವೆ. ಅದರಲ್ಲಿ ಏನಿದೆ? ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳಬೇಕಾ” ಎಂದು ಪ್ರಶ್ನಿಸಿದರು.

“ಜೆಡಿಎಸ್ ಎಲ್ಲಿದೆ ಎನ್ನುವ ದುರಹಾಂಕರ ಮಾತುಗಳನ್ನು ಇವರು ಆಡುತ್ತಿದ್ದಾರೆ. ಅವರ ಸಹವಾಸ ಮಾಡಿದಕ್ಕೆ ಈಗ ಜೆಡಿಎಸ್ ಈ ಹಂತಕ್ಕೆ ಬಂದಿದೆ. ಐದು ವರ್ಷ ಅಧಿಕಾರ ಮಾಡಿ ಅಂತ ಕೊಟ್ಟು ಬುಡ ಸಮೇತ ತೆಗೆಯೋಕೆ ಹೊರಟರಲ್ಲ, ಅದಕ್ಕೆ‌ ಮರು ಜೀವ ಕೊಡುವುದಕ್ಕೆ ಪ್ರಯತ್ನ ಮಾಡುತ್ತಿದ್ದೇನೆ. ಪಕ್ಕದಲ್ಲಿಯೇ ಕೂತು ಹಳ್ಳ ತೋಡಿದ್ರಲ್ಲ, ಎಲ್ಲಾ ನೆನಪಿದೆ ನನಗೆ” ಎಂದು ಆಕ್ರೋಶ ಹೊರಹಾಕಿದರು.

ಧರ್ಮಸ್ಥಳದಲ್ಲಿ ಸರಕಾರ ತೆಗೆಯಲು ಷಡ್ಯಂತ್ರ

“ಧರ್ಮಸ್ಥಳ ಆಯುರ್ವೇದ ಆಸ್ಪತ್ರೆಯಲ್ಲಿ ಮೈತ್ರಿ ಸರಕಾರ ತೆಗೆಯಲು ಗುಳಿಗೆ ಅರೆದಿದ್ದನ್ನು ನೀವೇ (ಮಾಧ್ಯಮಗಳು) ತೋರಿಸಿದರಲ್ಲ. ಅದಕ್ಕೆ ಹಾಸನಾಂಬೆಯ ಮುಂದೆ ಪ್ರಮಾಣ ಮಾಡಬೇಕಾ? ಧರ್ಮಸ್ಥಳದಲ್ಲಿ ಕುತಂತ್ರ ಮಾಡಿ ಬಂದರಲ್ಲ, ಈ ಸರಕಾರ ಒಂದೇ ವರ್ಷ ಎಂದು ಹೇಳಿದರಲ್ಲ. ಆ ಮೇಲೆ ಏನಾಯಿತು ಎನ್ನುವುದು ನಾಡಿನ ಜನರಿಗೆ ಗೊತ್ತಿದೆಯಲ್ಲ” ಎಂದರು.

ಮಾಜಿ ಶಾಸಕ ಪ್ರೀತಮ್ ಗೌಡ ಅವರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, “ಪದೇ ಪದೆ ಯಾಕೆ ಅವರ ಹೆಸರು ಎಳೆದು ತರುತ್ತೀರಿ? ಅವರು ಎನ್‌ಡಿಎ ಪರ ಮತ ಕೇಳಿದ್ದಾರೆ. ಎನ್‌ಡಿಎ ಅಭ್ಯರ್ಥಿಗೆ ಮತ ಕೊಡಿ ಎಂದು ಹೇಳಿದ್ದಾರೆ. ಯಾವುದೇ ಗೊಂದಲ ಇಲ್ಲ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...