ನಾನೇನು ಫುಟ್ಬಾಲಾ? ಯಾರೇನು ಹೇಳಿದರೂ ಸ್ಪರ್ಧೆ ಇಲ್ಲ: ಪ್ರಕಾಶ್ ಹುಕ್ಕೇರಿ

Date:

ನಾನು ಏನಾದರೂ ಇವರ ದೃಷ್ಟಿಯಲ್ಲಿ ಫುಟ್ಬಾಲಾ? ಈ ಹಿಂದೆ ನನ್ನನ್ನು ದೆಹಲಿಗೆ ಹೋಗಿ ಎಂದು ಒಗೆದರು. ಈಗ 2ನೇ ಬಾರಿ ಒದೆಯಲು ನಿಂತಿದ್ದಾರೆ. ಮತ್ತೆ ದಿಲ್ಲಿಗೆ ಹೋಗಿ ಬೀಳುವ ಮಾತೇ ಇಲ್ಲ ಎಂದು ಕಾಂಗ್ರೆಸ್ ಎಂಎಲ್​ಸಿ ಪ್ರಕಾಶ್​ ಹುಕ್ಕೇರಿ‌ ಹೇಳಿದರು.

ಚಿಕ್ಕೋಡಿ ಲೋಕಸಭಾ ಚುನಾವಣೆಗೆ ತಮ್ಮ ಹೆಸರು ಪ್ರಸ್ತಾಪವಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅವರು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಮಾತನಾಡಿ, ಸ್ವಪಕ್ಷದ ವಿರುದ್ಧವೇ ಹರಿಹಾಯ್ದರು.

ಹೈಕಮಾಂಡ್ ಹೇಳಿದರೂ ಒಪ್ಪಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಕ್ಷಕರ ಸೇವೆ ಮಾಡಲು ನನ್ನನ್ನು ಆಯ್ಕೆ ಮಾಡಿದ್ದಾರೆಯೇ ವಿನಹ ಚುನಾವಣೆಗೆ ನಿಲ್ಲಲು ನನ್ನನ್ನು ಆಯ್ಕೆ ಮಾಡಿಲ್ಲ. ಯಾವುದೇ ಸಂದರ್ಭದಲ್ಲಿ ಎಷ್ಟೇ ಒತ್ತಡ ಬಂದರೂ ಸಹ ನಾನು ಸ್ಪರ್ಧೆ ಮಾಡಲ್ಲ. ಹೈಕಮಾಂಡ್ ಹೇಳಿದರೂ ನಾನು ಒಪ್ಪಲ್ಲ. ಚಿಕ್ಕೋಡಿ ಕ್ಷೇತ್ರದಿಂದ ಬೇರೆಯವರು ಸ್ಪರ್ಧೆ ಮಾಡಲಿ ಎಂದು ನೀವು ಬೇಕಾದರೆ ಶಿಫಾರಸು ಮಾಡಿ” ಎಂದರು.

” ವರ್ಷ, ಒಂದೂವರೆ ವರ್ಷಕ್ಕೊಮ್ಮೆ ಒದೆಯುತ್ತಾರೆ? ಇದೇನು ಫುಟ್ಬಾಲ್​ ಮ್ಯಾಚಾ? ನನ್ನ ಅವಧಿ ಇನ್ನೂ 5 ವರ್ಷ ಇದೆ, ಸಾಕಷ್ಟು ಕೆಲಸ ಮಾಡಿದ್ದೇನೆ. ಶಿಕ್ಷಕರ ಸಾಕಷ್ಟು ಬೇಡಿಕೆಗಳು ಈಡೇರಿಸಬೇಕಿದೆ. ಅದಕ್ಕಾಗಿ ಇಲ್ಲೇ ಕೆಲಸ ಮಾಡುವೆ” ಎಂದು ಪ್ರಕಾಶ್​ ಹುಕ್ಕೇರಿ ಸ್ಪಷ್ಟಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು-  Scroll.in ಗೆ ಅಭಿನಂದನೆ!

ಸಿಎಂ ಸಿದ್ದರಾಮಯ್ಯಗೆ ಬರೆದುಕೊಟ್ಟಿಲ್ಲ

ಚುನಾವಣೆಗೆ ಸ್ಪರ್ಧಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರಂತೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ, “ನಾನೇನು ಅವರಿಗೆ ಬರೆದಿಕೊಟ್ಟಿದ್ದೇನೆಯೇ? ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನಾನೇನೂ ಸಿಎಂ ಅವರಿಗೆ ಮಾತು ಕೊಟ್ಟಿಲ್ಲ. ಶಿಕ್ಷಕರ ಬೇಡಿಕೆಗಳ ಈಡೇರಿಕೆಗೇ ಕೆಲಸ ಮಾಡುವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...