ಡಾ.ಅಂಬರೀಶ್ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Date:

  • ಸಿಎಂರಿಂದ ರೇಸ್ ಕೋರ್ಸ್ ರಸ್ತೆಯ ಅಂಬರೀಶ್ ನಾಮಫಲಕ ಅನಾವರಣ
  • ಅಂಬರೀಶ್ ಸ್ಮಾರಕವನ್ನೂ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಕರ್ನಾಟಕದ ರೆಬಲ್ ಸ್ಟಾರ್, ಎಲ್ಲರ ಮನಸ್ಸನ್ನು ಗೆದ್ದಅಂಬರೀಶ್ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸೋವಾರ ಸಂಜೆ, ಮೌರ್ಯ ಸರ್ಕಲ್‌ನಿಂದ ಬಸವೇಶ್ವರ ವೃತ್ತದ ವರೆಗಿನ ರೇಸ್ ಕೋರ್ಸ್ ರಸ್ತೆಗೆ ರೆಬೆಲ್ ಸ್ಟಾರ್ ಡಾ.ಎಂ.ಹೆಚ್.ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಿ ಅದರ ನಾಮಫಲಕವನ್ನು ಸಿಎಂ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಅವರು, ಅಂಬರೀಶ್ ಅವರ ನೆನಪಿಗಾಗಿ ಇವತ್ತು ರೇಸ್ ಕೋರ್ಸ್ ರಸ್ತೆಗೆ ಅವರ ಹೆಸರನ್ನೇ ನಾಮಕರಣ ಮಾಡಿ, ಅದರ ಫಲಕವನ್ನು ಉದ್ಘಾಟಿಸುತ್ತಿದ್ದೇನೆ. ಇದು ಅವರು ಹೆಚ್ಚು ಓಡಾಡಿದ ಸ್ಥಳ. ಎಲ್ಲ ಅಭಿಮಾನಿಗಳ ಒತ್ತಾಸೆ ಮೇರೆಗೆ ಇವತ್ತು ಇವರ ಹೆಸರನ್ನು ಇಟ್ಟಿದ್ದೇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಬರೀಶ್ ಅವರು ನನ್ನ ಮಿತ್ರರು. ಅವರ ಜೀವನ ತೆರೆದ ಪುಸ್ತಕ. ಹಲವಾರು ಬಾರಿ ಬೇಟಿಯಾಗಬೇಕು ಅಂದಾಗ ಅಲ್ಲೇ ರೇಸ್ ಕೋರ್ಸ್ ನಲ್ಲಿ ಇರುತ್ತೇನೆ ಬಾರಯ್ಯ ಎನ್ನುತ್ತಿದ್ದರು. ಅವರ ಹೆಸರನ್ನು ಬಿಟ್ಟು ಬೇರೆ ಯಾವ ಹೆಸರು ಈ ರಸ್ತೆಗೆ ಸೂಕ್ತವಲ್ಲ ಎಂದು ಬೊಮ್ಮಾಯಿ ಹೇಳಿದರು.cm ambarish

ಈ ಸುದ್ದಿ ಓದಿದ್ದೀರಾ? :ಇಂದು ಬೊಮ್ಮಾಯಿ, ಅಂದು ಯಡಿಯೂರಪ್ಪ; ಆತಂಕ ಮೂಡಿಸಿದ ಹೆಲಿಕಾಪ್ಟರ್…

ರೀಲ್ ಆ್ಯಂಡ್ ರಿಯಲ್ ಲೈಫ್ ಎರಡು ಒಂದೆಯಾಗಿದ್ದು, ನೇರ ವ್ಯಕ್ತಿತ್ವ ಅವರದ್ದಾಗಿತ್ತು.ಕ್ರೀಡೆಯಲ್ಲೂ ಪ್ರತಿಭೆಯನ್ನು ಹೊಂದಿದ್ದ ಅವರು, ಸಾರ್ವಜನಿಕ ಜೀವನಕ್ಕೆ ಬಂದಮೇಲೆ ವಸತಿ ಸಚಿವರಾಗಿ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ.

ಕಾವೇರಿ ವಿಚಾರ ಬಂದಾಗ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟವರು. ಅಧಿಕಾರ ಅವರನ್ನು ಹುಡುಕಿಕೊಂಡು ಬರುತ್ತಿತ್ತು ಎಂದ ಬೊಮ್ಮಾಯಿ ಹೇಳಿದರು. ಬಳಿಕ ಕಂಠೀರವ ಸ್ಟುಡಿಯೋ ಆವರಣದಲ್ಲಿನ ಅಂಬರೀಶ್ ಅವರ ಸ್ಮಾರಕವನ್ನೂ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಅಂಬರೀಶ್ ಪತ್ನಿ, ಸಂಸದೆ ಸುಮಲತಾ, ಪುತ್ರ ಅಭಿಷೇಕ್ ಅಂಬರೀಶ್, ನಟ ರಾಘವೇಂದ್ರ ರಾಜ್ ಕುಮಾರ್, ಫಿಲಂ ಚೇಂಬರ್ ಅಧ್ಯಕ್ಷ ಭಾ.ಮ ಹರೀಶ್ , ರಾಕ್ ಲೈನ್ ವೆಂಕಟೇಶ್, ಚಿನ್ನೆಗೌಡರು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...