ಭಾರತದ ಕೆಲ ಪ್ರದೇಶಗಳಿಗೆ ತೆರಳಬೇಡಿ ಎಂದ ಅಮೆರಿಕ; ಮೋದಿ ನೇತೃತ್ವದ ಭಾರತಕ್ಕೆ ಇದೆಂಥಾ ಅಪಮಾನ?

Date:

ಇತ್ತೀಚಿನ ದಿನಗಳಲ್ಲಿ ಜಗತ್ತು ನಾನಾ ರೀತಿಯ ಘಟನೆಗಳು, ಬೆಳವಣಿಗೆಗಳು ಮತ್ತು ವಿದ್ಯಮಾನಗಳಿಗೆ ಸಾಕ್ಷಿಯಾಗಿದೆ. ರಷ್ಯಾ-ಉಕ್ರೇನ್ ಯುದ್ಧ, ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ದಾಳಿ, ಇಸ್ರೇಲ್-ಇರಾನ್ ಯುದ್ಧಗಳು ಹಾಗೂ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿ ಹಿಂಸಾತ್ಮಕ ಹೋರಾಟಗಳು ಜಗತ್ತನ್ನು ಬೆಚ್ಚಿಬೀಳಿಸಿವೆ. ಇದೇ ಹೊತ್ತಿನಲ್ಲಿ ಭಾರತವೂ ಆಂತರಿಕ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ದಾಳಿಗಳು ನಡೆಯುತ್ತಿವೆ. ಈಶಾನ್ಯ ಭಾರತದಲ್ಲಿ ಮಾವೋವಾದಿಗಳು ಮತ್ತು ಪೊಲೀಸ್‌ ಪಡೆಗಳ ನಡುವೆ ತಿಕ್ಕಾಟ ಸಾಮಾನ್ಯವಾಗಿದೆ.

ಮಣಿಪುರ ಹಿಂಸಾಚಾರ, 370 ವಿಧಿ ರದ್ದಾದ ಬಳಿಕ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ, ಪಾಕ್‌ ಗಡಿಯಲ್ಲಿ ದಾಳಿಗಳು, ದೇಶದ ನಾನಾ ಭಾಗಗಳಲ್ಲಿ ಹಿಂಸೆ, ಕೊಲೆ, ಅತ್ಯಾಚಾರಗಳು ನಡೆಯುತ್ತಿದ್ದರೂ ಪ್ರಧಾನಿ ಮೋದಿಯನ್ನೂ ಒಳಗೊಂಡಂತೆ ಕೇಂದ್ರ ಸರ್ಕಾರ ಮೌನವಾಗಿದೆ.

ಇದೇ ಹೊತ್ತಿನಲ್ಲಿ, ಭಾರತದಲ್ಲಿ ಇಂತಹ ಆತಂಕಕಾರಿ ಬೆಳವಣಿಗೆಗಳ ನಡುವೆ, ಅಮೆರಿಕ ಸರ್ಕಾರ ತನ್ನ ಪ್ರಜೆಗಳಿಗೆ ಮಣಿಪುರ, ಜಮ್ಮು-ಕಾಶ್ಮೀರ ಹಾಗೂ ಪೂರ್ವ ಭಾರತದ ಪ್ರದೇಶಗಳಿಗೆ ಪ್ರವಾಸ ಹೋಗದಂತೆ ಸೂಚನೆ ನೀಡಿದೆ. ಆ ಮೂಲಕ ಮನವಿಯನ್ನೂ ಮಾಡಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೆರಿಕವು ಭಾರತದ ಪರಿಷ್ಕೃತ ಪ್ರವಾಸ ಸಲಹೆಗಳನ್ನು ಪ್ರಕಟಿಸಿದ್ದು, ”ಅಪರಾಧ ಮತ್ತು ಭಯೋತ್ಪಾದನಾ ಕೃತ್ಯಗಳಿಂದಾಗಿ ಭಾರತದಲ್ಲಿ ಎಚ್ಚರಿಕೆಯಿಂದ ಇರಬೇಕಾಗಿದೆ. ಜಮ್ಮು ಮತ್ತು ಕಾಶ್ಮೀರ, ಭಾರತ-ಪಾಕ್ ಗಡಿ, ಮಣಿಪುರ, ಮಧ್ಯ ಮತ್ತು ಪೂರ್ವ ಭಾರತದ ಭಾಗಗಳಿಗೆ ಪ್ರಯಾಣಿಸಬೇಡಿ” ಎಂದು ತನ್ನ ಪ್ರಜೆಗಳಿಗೆ ಎಚ್ಚರಿಕೆ ನೀಡಿದೆ.

”ಭಾರತದಲ್ಲಿ ಹೆಚ್ಚುತ್ತಿರುವ ಅಪರಾಧಗಳಲ್ಲಿ ಅತ್ಯಾಚಾರವೂ ಒಂದಾಗಿದೆ ಎಂದು ಭಾರತೀಯ ಅಧಿಕಾರಿಗಳೇ ವರದಿ ಮಾಡಿದ್ದಾರೆ. ಪ್ರವಾಸಿ ತಾಣಗಳು ಮತ್ತು ಇತರ ಸ್ಥಳಗಳಲ್ಲಿ ಲೈಂಗಿಕ ದೌರ್ಜನ್ಯದಂತಹ ಹಿಂಸಾತ್ಮಕ ಅಪರಾಧಗಳು ಹೆಚ್ಚುತ್ತಿವೆ. ಪ್ರವಾಸಿ ಸ್ಥಳಗಳು, ಸಾರಿಗೆ ಕೇಂದ್ರಗಳು, ಮಾರುಕಟ್ಟೆಗಳು/ಶಾಪಿಂಗ್ ಮಾಲ್‌ಗಳನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿವೆ. ಹೀಗಾಗಿ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್‌ಗಢ ಹಾಗೂ ಜಾರ್ಖಂಡ್‌ನ ಗ್ರಾಮೀಣ ಭಾಗಗಳಲ್ಲಿ ದಾಳಿಗಳು ಸಾಂದರ್ಭಿಕವಾಗಿ ನಡೆಯುತ್ತಲೇ ಇವೆ. ಈ ಪ್ರದೇಶಗಳಿಗೆ ಭೇಟಿ ನೀಡದೇ ಇರುವುದು ಉತ್ತಮ” ಎಂದು ಅಮೆರಿಕಾ ಹೇಳಿದೆ.

ವಿಶ್ವಗುರು, ಚೌಕಿದಾರ್, ದೇವರೇ ಕಳಿಸಿದ ವಿಶಿಷ್ಟ ಶಕ್ತಿಯುಳ್ಳ ಮೋದಿ ಅವರು ಭಾರತದ ಪ್ರಧಾನಿಯಾಗಿರುವಾಗ ಅಮೆರಿಕದಂತಹ ವಿಶ್ವದ ದೊಡ್ಡಣ್ಣ, ತನ್ನ ಪ್ರಜೆಗಳು ಭಾರತದ ಬಹುಭಾಗಗಳಿಗೆ ಪ್ರವಾಸ ಹೋಗಬೇಡಿ, ಪ್ರಯಾಣ ಕೈಗೊಳ್ಳಬೇಡಿ ಎಂದು ಹೇಳುವುದು ನಿಜಕ್ಕೂ ಅಪಮಾನಕರ ಸಂಗತಿಯಲ್ಲವೇ?

ಭಯೋತ್ಪಾದನೆಯನ್ನು ಇಲ್ಲವಾಗಿಸುತ್ತೇವೆ, ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆದು ಹೆಣ್ಣುಮಕ್ಕಳನ್ನು ರಕ್ಷಿಸುತ್ತೇವೆ – (ಬೇಟಿ ಬಚಾವೋ –ಬೇಟಿ ಪಡಾವೋ), ಎಲ್ಲರನ್ನು ಒಳಗೊಂಡು ಎಲ್ಲರ ಅಭಿವೃದ್ಧಿಗಾಗಿ (ಸಬ್‌ ಕಾ ಸಾತ್ – ಸಬ್‌ ಕಾ ವಿಕಾಸ್) ದುಡಿಯುತ್ತೇವೆ ಎಂಬ ಘೋಷಣೆಗಳನ್ನು ಮೊಳಗಿಸಿದ್ದ ಮೋದಿ ಅವರ ಕಳೆದ 10 ವರ್ಷಗಳ ಆಡಳಿತದಲ್ಲಿ ಭಾರತವು ನಾನಾ ದುಷ್ಕೃತ್ಯಗಳಿಗೆ ಸಾಕ್ಷಿಯಾಗಿದೆ. ಯಾವುದೇ ಬೇಟಿ ಬಜಾವಾಗಲು ಸಾಧ್ಯವಾಗುತ್ತಿಲ್ಲ. ಯಾರ ವಿಕಾಸವೂ ಕಾಣುತ್ತಿಲ್ಲ. ಬದಲಾಗಿ, ಅತ್ಯಾಚಾರ, ಕೊಲೆ, ಸುಲಿಗೆ, ಭ್ರಷ್ಟಾಚಾರ, ಹಿಂಸೆ, ಹಿಂಸಾಚಾರ, ದ್ವೇಷ, ತಾರತಮ್ಯಗಳು ಹೆಚ್ಚಾಗಿವೆ.

ಬಹುತ್ವ, ಶಾಂತಿ, ಸೌಹಾರ್ದತೆ, ಒಳಗೊಳ್ಳುವಿಕೆ ಮಾಯವಾಗಿದೆ. ಅತ್ಯಾಚಾರಿಗಳನ್ನು ಸಮರ್ಥಿಸಿ, ಅತ್ಯಾಚಾರಿಗಳ ಪರವಾಗಿ ಬಿಜೆಪಿ ಶಾಸಕರು, ಸಂಸದರು ಹಾಗೂ ಕಾರ್ಯಕರ್ತರು ಪ್ರತಿಭಟನೆ, ರ್‍ಯಾಲಿಗಳನ್ನು ನಡೆಸುತ್ತಿದ್ದಾರೆ. ಸ್ವತಃ ಬಿಜೆಪಿಯ ಶಾಸಕ, ಸಂಸದರೂ ಮಹಿಳೆಯರ ಮೇಲಿನ ದೌರ್ಜನ್ಯಗಳಲ್ಲಿ ಅರೋಪಿಗಳಾಗಿದ್ದಾರೆ.

ಈ ವರದಿ ಓದಿದ್ದೀರಾ?: ಕೇಂದ್ರ ಬಜೆಟ್ | ಮೋದಿ ಸರ್ಕಾರ ಭಾರತೀಯ ರೈಲ್ವೆಯನ್ನು ಖಾಸಗೀಕರಣದತ್ತ ದೂಡುತ್ತಿದೆ

ಮಣಿಪುರದಂತಹ ರಾಜ್ಯದಲ್ಲಿ ವರ್ಷಗಳ ಕಾಲ ಹಿಂಸಾಚಾರ ನಡೆದರೂ, ಅದನ್ನು ಪ್ರಬಲವಾಗಿ ತಡೆಯುವ ಧೈರ್ಯವನ್ನು ಬಿಜೆಪಿ ನೇತೃತ್ವದ ಅಲ್ಲಿನ ರಾಜ್ಯ ಸರ್ಕಾರವಾಗಲೀ, ಮೋದಿ ನೇತೃತ್ವದ ಕೇಂದ್ರ ಸರ್ಕಾರವಾಗಲೀ ಮಾಡಲಿಲ್ಲ. ಇದೆಲ್ಲವೂ, ವಿದೇಶಗಳಿಗೆ ಆತಂಕವನ್ನು ಹೆಚ್ಚಿಸಿದೆ. ಹೀಗಾಗಿಯೇ, ಅಮೆರಿಕದಂತಹ ಬೃಹತ್ ರಾಷ್ಟ್ರ ತನ್ನ ಪ್ರಜೆಗಳಿಗೆ ಭಾರತದಲ್ಲಿ ಎಚ್ಚರಿಕೆಯಿಂದ ಪ್ರವಾಸ ಮಾಡುವಂತೆ ಸೂಚಿಸುತ್ತಿದೆ.

ಭಾರತದ ಇತಿಹಾಸದಲ್ಲಿ ಯಾವುದೇ ದೇಶವು ಇಂತಹ ಸೂಚನೆಗಳನ್ನು ತನ್ನ ಪ್ರಜೆಗಳಿಗೆ ಕೊಟ್ಟಿರಲು ಸಾಧ್ಯವಿಲ್ಲ. ಆದರೆ, ಮೋದಿ ಆಡಳಿತದಲ್ಲಿ ಇಂತಹದೊಂದು ಎಚ್ಚರಿಕೆಯ ಸೂಚನೆಗಳು ವ್ಯಕ್ತವಾಗುತ್ತಿವೆ. ಇದು, ಭಾರತದ ಪಾಲಿಗೆ ಅಪಮಾನಕರ ಸಂಗತಿಯೇ ಸರಿ.

ಅಂದಹಾಗೆ, 2002ರಲ್ಲಿ ಗುಜರಾತ್‌ನಲ್ಲಿ ನಡೆದ ಗೋದ್ರಾ ಹತ್ಯಾಕಾಂಡದಿಂದಾಗಿ ಮೋದಿ ಭಾರೀ ಟೀಕೆ, ಆಕ್ರೋಶ, ಪ್ರತಿಭಟನೆಗೆ ಗುರಿಯಾಗಿದ್ದರು. ಅದೇ ಕಾರಣಕ್ಕಾಗಿ, 2005ರಲ್ಲಿ ಅಮೆರಿಕ ಮೋದಿಗೆ ವೀಸಾ ನಿರಾಕರಣೆ ಮಾಡಿತ್ತು ಎಂಬುದನ್ನು ನಾವು ಮರೆಯುವಂತಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...