ಕಳೆದ 5 ವರ್ಷಗಳಲ್ಲಿ ಅಮೇಥಿ ನೊಂದಿದೆ; ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

Date:

ಕಳೆದ ಐದು ವರ್ಷಗಳಲ್ಲಿ ಅಮೇಥಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಅವರು ಯೋಚಿಸದ ಕಾರಣ ಕ್ಷೇತ್ರವು ‘ನೊಂದಿದೆ’ ಎಂದು ಅಮೇಥಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದೆ ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಅಮೇಥಿ ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಪರವಾಗಿ ನಡೆದ ಪ್ರಚಾರದಲ್ಲಿ ಪ್ರಿಯಾಂಕಾ ಭಾಗಿಯಾಗಿದ್ದರು. ಮೇ 20 ರಂದು ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಕೊನೆಯ ಸುತ್ತಿನ ಪ್ರಚಾರದಲ್ಲಿ ಪ್ರಿಯಾಂಕಾ ಅವರು ಶರ್ಮಾ ಪರವಾಗಿ ಮತಚಾಯಿಸಿದ್ದಾರೆ. ‘ಶರ್ಮಾತಮ್ಮ ಇಡೀ ಜೀವನವನ್ನು ಅಮೇಥಿಗೆ ಅರ್ಪಿಸಿದ್ದಾರೆ’ ಎಂದು ಹೇಳಿದ್ದಾರೆ.

“ಶರ್ಮಾ ಕಳೆದ 40 ವರ್ಷಗಳಿಂದ ಅಮೇಥಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಅವರು ಈ ಕ್ಷೇತ್ರದಲ್ಲಿ ನನ್ನ ತಂದೆ ರಾಜೀವ್ ಗಾಂಧಿ ಅವರಿಗೆ ನಿಖಕವರ್ತಿಯಾಗಿದ್ದರು. ನನ್ನ ತಾಯಿ ಸೋನಿಯಾ ಗಾಂಧಿ ಮತ್ತು ನನ್ನ ಅಣ್ಣ ರಾಹುಲ್ ಗಾಂಧಿಯವರ ಗೆಲುವಿಗಾಗಿಯೂ ಕೆಲಸ ಮಾಡಿದ್ದಾರೆ. ಅವರು ಅಮೇಥಿಗೆ ತಮ್ಮ ಜೀವನವನ್ನು ಅರ್ಪಿಸಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್ ಬರೇಲಿಯಲ್ಲಿ ಕ್ರಮವಾಗಿ ಶರ್ಮಾ ಮತ್ತು ರಾಹುಲ್ ಗಾಂಧಿ ಪರವಾಗಿ ಪ್ರಿಯಾಂಕಾ ಭಾರೀ ಪ್ರಚಾರ ನಡೆಸುತ್ತಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ಬೀಡುಬಿಟ್ಟಿದ್ದಾರೆ. “ಅಮೇಥಿ ನನ್ನ ಮನೆ ಮತ್ತು ಕುಟುಂಬ. ನಾವು ಅದರಿಂದ ಎಂದಿಗೂ ದೂರ ಉಳಿದಿಲ್ಲ. ಉಳಿಯುವುದೂ ಇಲ್ಲ” ಎಂದು ಹೇಳಿದರು.

ಇರಾನಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕಾ, “2019ರಲ್ಲಿ ಅವರು ನಿಮ್ಮನ್ನು ದಾರಿ ತಪ್ಪಿಸಿದ್ದರಿಂದ ರಾಹುಲ್‌ ಅವರನ್ನು ಸೋಲಿಸಲಾಯಿತು. ಆದರೆ, ನಾವು ನಮ್ಮ ಜವಾಬ್ದಾರಿಯನ್ನು ಅರ್ಥಮಾಡಿಕೊಂಡಿದ್ದೇವೆ. ಅಮೇಥಿ ನನ್ನ ಮನೆ ಮತ್ತು ಕುಟುಂಬ. ನಾವು ಈ ಕುಟುಂಬಕ್ಕಾಗಿ ಕೆಲಸ ಮಾಡುತ್ತಲೇ ಇರುತ್ತೇವೆ. ಕಿಶೋರಿ ಲಾಲ್ ಶರ್ಮಾ ಜೊತೆಗೆ ರಾಹುಲ್ ಗಾಂಧಿ ಕೂಡ ಇದು ನನ್ನ ಕುಟುಂಬ ಎಂದು ಹೇಳಿದ್ದಾರೆ.ನಾನು ಅಮೇಥಿ ಮತ್ತು ರಾಯ್ ಬರೇಲಿಗಾಗಿ ಕೆಲಸ ಮಾಡುತ್ತೇನೆ” ಎಂದು ಪ್ರಿಯಾಂಕಾ ಹೇಳಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಅಮೇಥಿಯಿಂದ ಸ್ಪರ್ಧಿಸಿದ್ದರು. ಅವರು ವಯನಾಡಿನಲ್ಲಿ ಗೆದ್ದರು. ಆದರೆ, ಅಮೇಥಿಯಲ್ಲಿ ಇರಾನಿ ವಿರುದ್ಧ ಸೋತರು. ಈಗ, ರಾಹುಲ್‌ ವಯನಾಡ್ ಮತ್ತು ರಾಯ್‌ಬರೇಲಿಯಲ್ಲಿ ಸ್ಪರ್ಧಿಸಿದ್ದಾರೆ. ತಮ್ಮ ಹಳೆಯ ಕ್ಷೇತ್ರ ಅಮೇಥಿಯನ್ನು ಪಕ್ಷದ ಹಿರಿಯ ಕಾರ್ಯಕರ್ತ ಶರ್ಮಾ ಅವರಿಗೆ ಬಿಟ್ಟುಕೊಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...