ರಾಜ್ಯಪಾಲರು ರಾಜಕಾರಣದ ಬಗ್ಗೆ ಮಾತನಾಡಬಾರದು ಎಂದ ಅಣ್ಣಾಮಲೈ

Date:

ತಮಿಳುನಾಡು ರಾಜ್ಯಪಾಲ ಆರ್‌ ಎನ್ ರವಿ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ನಡುವಿನ ಸಂಘರ್ಷ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ರಾಜ್ಯಪಾಲರು ರಾಜಕೀಯ ಮಾತನಾಡಬಾರದು. ಅವರು ಸಾಂವಿಧಾನಿಕ ಕರ್ತವ್ಯಗಳನ್ನು ನಿರ್ವಹಿಸಲು ಜವಾಬ್ದಾರರಾಗಿರಬೇಕು ಎಂದು ಹೇಳಿದ್ದಾರೆ.

ಚೆನ್ನೈನ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ಸಚಿವ ಸೆಂಥಿಲ್ ಅವರನ್ನು ರಾಜ್ಯಪಾಲರು ವಜಾಗೊಳಿಸಿರುವ ಕ್ರಮ ಸರಿಯಲ್ಲ. ಇದು ಒಂದು ಪಕ್ಷಕ್ಕೆ ಲಾಭದಾಯಕವಾಗಿದ್ದರೂ ರಾಜಕೀಯವಾಗುತ್ತದೆ. ರಾಜ್ಯಪಾಲರು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡಿ ಸಲಹೆ ನೀಡಬಹುದು. ಆದರೆ ವಜಾಗೊಳಿಸುವ ನಿರ್ಧಾರ ಸರಿಯಿಲ್ಲ. ರಾಜ್ಯಪಾಲರು ರಾಜಕೀಯ ಮಾತನಾಡುತ್ತಿದ್ದಾರೆ ಎಂದರೆ ಅದು ಡಿಎಂಕೆಯನ್ನು ಗುರಿಯಾಗಿಸುತ್ತದೆ. ಆದರೆ ಬಿಜೆಪಿಗೆ ಲಾಭವಾಗುತ್ತದೆ ಎಂಬುದು ನಮ್ಮ ನಿಲುವಲ್ಲ” ಎಂದು ತಿಳಿಸಿದರು.  

“ರಾಜ್ಯಪಾಲರು ರಾಜಕೀಯ ಮಾತನಾಡಬಾರದು. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷನಾಗಿ ನಾನು ರಾಜ್ಯಪಾಲರು ರಾಜಕೀಯ ಮಾತನಾಡುತ್ತಿರುವುದು ತಪ್ಪು ನಿದರ್ಶನ ಎಂದು ಪ್ರತಿಪಾದಿಸುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಅವಕಾಶ ನೀಡುವುದಿಲ್ಲ: ತಮಿಳುನಾಡು ಸಚಿವ

“ರಾಜ್ಯಪಾಲರು ನಿಜವಾಗಿಯೂ ಸರ್ಕಾರವನ್ನು ಟೀಕಿಸಲು ಬಯಸಿದರೆ, ಅವರು ರಾಜ್ಯಪಾಲರ ಭಾಷಣದ ಸಮಯದಲ್ಲಿ ರಾಜ್ಯ ವಿಧಾನಸಭೆಯಲ್ಲಿ ಆ ರೀತಿ ಮಾಡಬಹುದು. ರಾಜ್ಯಪಾಲರು ವಿರೋಧ ಪಕ್ಷಗಳಂತೆ ರಾಜ್ಯ ಸರ್ಕಾರವನ್ನು ಟೀಕಿಸಲು ಸಾಧ್ಯವಿಲ್ಲ. ರಾಜ್ಯಪಾಲರು ರಾಜ್ಯ ಸರ್ಕಾರವನ್ನು ಟೀಕಿಸಲು ಪ್ರಾರಂಭಿಸಿದರೆ, ಅದರ ಆಧಾರದ ಮೇಲೆ ಅವರು ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ” ಎಂದು ಅಣ್ಣಾಮಲೈ ಹೇಳಿದ್ದಾರೆ.

ಅಣ್ಣಾಮಲೈ ಅವರು ರಾಜ್ಯಪಾಲರ ವಿರುದ್ಧ ಟೀಕೆ ವ್ಯಕ್ತಪಡಿಸಿರುವುದು ಇದೇ ಮೊದಲಲ್ಲ. ಈ ವರ್ಷದ ಜನವರಿಯಲ್ಲಿ ಮಾಧ್ಯಮವೊಂದಕ್ಕೆ ಮಾತನಾಡುತ್ತಾ, ತಮಿಳುನಾಡು ಲಾಂಛನವಿಲ್ಲದೆ ಪೊಂಗಲ್ ಆಚರಣೆಗೆ ಆಹ್ವಾನವನ್ನು ನೀಡುವ ರಾಜಭವನದ ನಿರ್ಧಾರ ತಪ್ಪು ಎಂದಿದ್ದರು. ಅಲ್ಲದೆ ತಮಿಳುನಾಡನ್ನು “ತಮಿಳಗಂ” ಎಂದು ಮರುನಾಮಕರಣ ಮಾಡುವ ರಾಜ್ಯಪಾಲರ ಸಲಹೆಗೆ ವಿರೋಧ ವ್ಯಕ್ತಪಡಿಸಿದ್ದರು.

2015ರ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಚಿವ ಸೆಂಥಿಲ್‌ ಬಾಲಾಜಿ ಅವರನ್ನು ಬಂಧಿಸಿದ್ದ ಕೆಲವು ದಿನಗಳ ನಂತರ ಸರ್ಕಾರದ ಅನುಮತಿಯಿಲ್ಲದೆ ಸಚಿವರನ್ನು ರಾಜ್ಯಪಾಲರು ಏಕಾಏಕಿ ವಜಾಗೊಳಿಸಿದ್ದರು. ನಂತರ ಕೆಲ ಗಂಟೆಗಳಲ್ಲಿ ತಮ್ಮ ನಿರ್ಧಾರವನ್ನು ವಾಪಸ್‌ ಪಡೆದಿದ್ದರು. ರಾಜ್ಯಪಾಲರ ಸರ್ವಾಧಿಕಾರಿ ಧೋರಣೆ ಈ ಕ್ರಮ ದೇಶಾದ್ಯಂತ ಟೀಕೆ ವ್ಯಕ್ತವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...