‘ಬಂಗಾಳಿ’ ಎಂಬ ಭಾಷೆಯೇ ಇಲ್ಲ ಎಂದ ಅಮಿತ್ ಮಾಳವೀಯ: ಬಿಜೆಪಿ ವಿರುದ್ಧ ಟಿಎಂಸಿ ತರಾಟೆ

Date:

ಬಿಜೆಪಿ ಐಟಿ ಸೆಲ್‌ನ ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವೀಯ ಅವರು ‘ಬಂಗಾಳಿ’ ಎಂಬ ಭಾಷೆಯೇ ಇಲ್ಲ ಎಂದು ಹೇಳಿದ್ದು ಇದರ ವಿರುದ್ದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿಯ ಲೋಧಿ ಕಾಲೋನಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಮಿತ್ ದತ್ ಅವರು ಪಶ್ಚಿಮ ಬಂಗಾಳ ಸರ್ಕಾರದ ಬಂಗಾ ಭವನದ ಉಸ್ತುವಾರಿ ಅಧಿಕಾರಿಗೆ ಬರೆದ ಪತ್ರವನ್ನು ಉಲ್ಲೇಖಿಸಿ ಮಮತಾ ಬ್ಯಾನರ್ಜಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಭಾರತ ಸರ್ಕಾರದ ಗೃಹ ಸಚಿವಾಲಯದ ನೇರ ನಿಯಂತ್ರಣದಲ್ಲಿರುವ ದೆಹಲಿ ಪೊಲೀಸರು ಬಂಗಾಳಿಯನ್ನು ‘ಬಾಂಗ್ಲಾದೇಶಿ’ ಭಾಷೆ ಎಂದು ಹೇಗೆ ವಿವರಿಸುತ್ತಿದ್ದಾರೆಂದು ಈಗ ನೋಡಿ! ಬಂಗಾಳಿ, ನಮ್ಮ ಮಾತೃಭಾಷೆ, ರವೀಂದ್ರನಾಥ ಟ್ಯಾಗೋರ್ ಮತ್ತು ಸ್ವಾಮಿ ವಿವೇಕಾನಂದರ ಭಾಷೆ, ನಮ್ಮ ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗೀತೆ (ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಅವರ ಭಾಷೆ) ಬರೆಯಲ್ಪಟ್ಟ ಭಾಷೆ, ಕೋಟ್ಯಂತರ ಭಾರತೀಯರು ಮಾತನಾಡುವ ಮತ್ತು ಬರೆಯುವ ಭಾಷೆ, ಭಾರತದ ಸಂವಿಧಾನದಿಂದ ಪವಿತ್ರ ಮತ್ತು ಗುರುತಿಸಲ್ಪಟ್ಟ ಭಾಷೆಯನ್ನು ಈಗ ಬಾಂಗ್ಲಾದೇಶಿ ಭಾಷೆ ಎಂದು ವಿವರಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಅಮಿತ್ ಮಾಳವೀಯ ಎಂಬ ಸ್ತ್ರೀಪೀಡಕನೂ, ಬಿಜೆಪಿಯ ಬೇಟಿ ಬಚಾವೋ ಎಂಬ ಘೋಷಣೆಯೂ…

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿಯ ಐಟಿ ಸೆಲ್‌ನ ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವೀಯ, “ದೆಹಲಿ ಪೊಲೀಸರು ನುಸುಳುಕೋರರು ಬಳಸುವ ಭಾಷೆಯನ್ನು ‘ಬಾಂಗ್ಲಾದೇಶಿ’ ಎಂದು ಉಲ್ಲೇಖಿಸಿದ್ದಕ್ಕೆ ಬ್ಯಾನರ್ಜಿ ಅವರು ನೀಡಿದ ಪ್ರತಿಕ್ರಿಯೆ ತಪ್ಪಾಗಿದೆ. ಅದು ಅಪಾಯಕಾರಿಯಾಗಿ ಉದ್ರೇಕಕಾರಿಯಾಗಿದೆ. ದೆಹಲಿ ಪೊಲೀಸರ ಪತ್ರದಲ್ಲಿ ಎಲ್ಲಿಯೂ ಬಾಂಗ್ಲಾ ಅಥವಾ ಬಂಗಾಳಿ ಭಾಷೆಯನ್ನು ‘ಬಾಂಗ್ಲಾದೇಶಿ’ ಭಾಷೆ ಎಂದು ವಿವರಿಸಲಾಗಿಲ್ಲ. ಬ್ಯಾನರ್ಜಿ ಭಾಷಾ ಸಂಘರ್ಷವನ್ನು ಪ್ರಚೋದಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಹಾಗೆಯೇ, “ದೆಹಲಿ ಪೊಲೀಸರು ಒಳನುಸುಳುಕೋರರನ್ನು ಗುರುತಿಸುವ ಸಂದರ್ಭದಲ್ಲಿ ಭಾಷೆಯನ್ನು ಬಾಂಗ್ಲಾದೇಶಿ ಎಂದು ಉಲ್ಲೇಖಿಸುವುದು ಸಂಪೂರ್ಣವಾಗಿ ಸರಿ. ಭಾರತದಲ್ಲಿ ಮಾತನಾಡುವ ಬಾಂಗ್ಲಾ ಭಾಷೆಗಿಂತ ಸ್ಪಷ್ಟವಾಗಿ ಭಿನ್ನವಾಗಿರುವ ಉಪಭಾಷೆಗಳು, ವಾಕ್ಯರಚನೆ ಮತ್ತು ಮಾತಿನ ಮಾದರಿಗಳನ್ನು ವಿವರಿಸಲು ಈ ಪದವನ್ನು ಬಳಸಲಾಗುತ್ತಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ತಮ್ಮ ವಾದವನ್ನು ಮತ್ತಷ್ಟು ಸಮರ್ಥಿಸಿಕೊಂಡ ಮಾಳವೀಯ, “ಬಾಂಗ್ಲಾದೇಶದ ಅಧಿಕೃತ ಭಾಷೆ ಧ್ವನಿವಿಜ್ಞಾನದಲ್ಲಿ ಭಿನ್ನವಾಗಿದೆ. ಆದರೆ ಭಾರತೀಯ ಬಂಗಾಳಿಗಳಿಗೆ ಬಹುತೇಕ ಗ್ರಹಿಸಲಾಗದ ಉಪಭಾಷೆಗಳನ್ನು ಸಹ ಒಳಗೊಂಡಿದೆ” ಎಂದು ಹೇಳಿಕೊಂಡಿದ್ದಾರೆ.

ಇದಾದ ಕೆಲವೇ ಗಂಟೆಗಳಲ್ಲಿ ಟಿಎಂಸಿ ಮಾಳವೀಯ ವಿರುದ್ದ ವಾಗ್ದಾಳಿ ನಡೆಸಿದೆ. “ವಾಸ್ತವವಾಗಿ, ಬಂಗಾಳಿ ಎಂಬ ಭಾಷೆಯೇ ಇಲ್ಲ ಎಂಬುದನ್ನು ಬಿಜೆಪಿ ಸಮರ್ಥಿಸಿರುವುದು ಬಂಗಾಳಿ ಗುರುತಿನ ಕಡೆಗೆ ಆಡಳಿತದಲ್ಲಿ ಬೇರೂರಿರುವ ದ್ವೇಷವನ್ನು ಪ್ರತಿಬಿಂಬಿಸುತ್ತದೆ. ಸಾಂವಿಧಾನಿಕವಾಗಿ ಗುರುತಿಸಲ್ಪಟ್ಟ ಭಾಷೆಯ ಅಸ್ತಿತ್ವವನ್ನು ನಿರಾಕರಿಸುವುದು ಭಾಷಾ ಭೇದಕ್ಕಿಂತ ಕಡಿಮೆಯಲ್ಲ” ಎಂದು ಹೇಳಿದೆ.

ಈ ನಡುವೆ ಡಿಎಂಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ಈ ವಿವಾದದ ಬಗ್ಗೆ ಬ್ಯಾನರ್ಜಿಗೆ ತಮ್ಮ ಬೆಂಬಲವನ್ನು ನೀಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಸ್ಟಾಲಿನ್, “ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ದೆಹಲಿ ಪೊಲೀಸರು ಬಂಗಾಳಿಯನ್ನು ‘ಬಾಂಗ್ಲಾದೇಶಿ ಭಾಷೆ’ ಎಂದು ಬಣ್ಣಿಸಿದ್ದಾರೆ. ಇದು ಭಾರತದ ರಾಷ್ಟ್ರಗೀತೆಯಲ್ಲಿರುವ ಭಾಷೆಗೆ ನೇರ ಅವಮಾನ” ಎಂದು ದೂರಿದ್ದಾರೆ.

“ಇದು ಆಕಸ್ಮಿಕವಾಗಿ ನಡೆಯುವ ತಪ್ಪಲ್ಲ. ಇದು ವೈವಿಧ್ಯತೆಯನ್ನು ನಿರಂತರವಾಗಿ ದುರ್ಬಲಗೊಳಿಸುವ ಕರಾಳ ಮನಸ್ಥಿತಿ. ಹಿಂದಿಯೇತರ ಭಾಷೆಗಳ ಮೇಲಿನ ಈ ದಾಳಿಯ ಸಂದರ್ಭದಲ್ಲಿ, ಮಮತಾ ದೀದಿ ಪಶ್ಚಿಮ ಬಂಗಾಳದ ಭಾಷೆ ಮತ್ತು ಜನರಿಗೆ ಗುರಾಣಿಯಾಗಿ ನಿಂತಿದ್ದಾರೆ” ಎಂದು ಸ್ಟಾಲಿನ್ ಪೋಸ್ಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಹಿಂದಿ ಭಾಷೆಯನ್ನು ಹೇರಿಕೆ ಮಾಡುತ್ತಿದೆ, ಇತರೆ ಭಾಷೆಗಳನ್ನು ಕಡೆಗಣಿಸುತ್ತಿದೆ ಎಂಬ ಆರೋಪಗಳ ನಡುವೆ ಈ ಬೆಳವಣಿಗೆ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...