ತಮಿಳುನಾಡು ರಾಜ್ಯಪಾಲರ ಏಕಪಕ್ಷೀಯ ಸಚಿವರ ವಜಾ ನಿರ್ಧಾರ; ಅಮಿತ್‌ ಶಾ ಸಲಹೆ ಮೇರೆಗೆ ಆದೇಶಕ್ಕೆ ತಡೆ

Date:

ಭ್ರಷ್ಟಾಚಾರ ಆರೋಪಗಳಿಗೆ ಬಂಧನಕ್ಕೆ ಒಳಗಾಗಿರುವ ತಮಿಳುನಾಡು ಸಚಿವ ಸೇಂಥಿಲ್‌ ಬಾಲಾಜಿ ಅವರನ್ನು ವಜಾಗೊಳಿಸಿದ ವಿವಾದಾತ್ಮಕ ಆದೇಶವನ್ನು ರಾಜ್ಯಪಾಲ ಆರ್‌ ಎನ್‌ ರವಿ ಕೆಲವೇ ಗಂಟೆಗಳಲ್ಲೇ ಹಿಂಪಡೆದಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಕಾನೂನು ಹೋರಾಟದ ಸುಳಿವು ನೀಡಿದ ಹಿನ್ನೆಲೆಯಲ್ಲಿ ಈ ಆದೇಶಕ್ಕೆ ತಡೆ ನೀಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ ಆದೇಶಕ್ಕೆ ತಡೆ ನೀಡಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಸಲಹೆಯೂ ಕಾರಣ ಎನ್ನಲಾಗಿದೆ.

ಹಲವಾರು ಗಂಭೀರ ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿರುವ ವಿ ಸೆಂಥಿಲ್ ಬಾಲಾಜಿ ಸಂಪುಟದಲ್ಲಿ ಇರಲು ಅರ್ಹರಲ್ಲ ಎನ್ನುವ ಕಾರಣ ನೀಡಿ ರಾಜ್ಯಪಾಲ ಆರ್‌ ಎನ್‌ ರವಿ ಅವರು ರಾಜ್ಯ ಸರ್ಕಾರವನ್ನು ಸಂಪರ್ಕಿಸದೆ ವಜಾ ಆದೇಶ ಜಾರಿಗೊಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಚಿವ ಸೆಂಥಿಲ್ ಬಾಲಾಜಿ ಅವರು ಉದ್ಯೋಗಕ್ಕಾಗಿ ಲಂಚ ತೆಗೆದುಕೊಳ್ಳುವುದು ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಸಚಿವ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ತನಿಖೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ ಮತ್ತು ಕಾನೂನು ಮತ್ತು ನ್ಯಾಯದ ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿದ್ದಾರೆ” ಎಂದು ರಾಜ್ಯಪಾಲರು ಹೇಳಿಕೆಯಲ್ಲಿ ಉಲ್ಲೇಖಿಸಿದ್ದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಲಹೆಯ ಮೇರೆಗೆ ರಾಜ್ಯಪಾಲರು ತಡರಾತ್ರಿ ಈ ವಿಷಯದ ಬಗ್ಗೆ ಅಟಾರ್ನಿ ಜನರಲ್ ಅವರೊಂದಿಗೆ ಸಮಾಲೋಚಿಸುತ್ತಿದ್ದಾರೆ ಹಾಗೂ ನಿರ್ಧಾರವನ್ನು ತಡೆಹಿಡಿಯಲಾಗಿದೆ ಎಂದು ರಾಜ್ಯಪಾಲರ ಕಚೇರಿಯ ಮೂಲಗಳು ತಿಳಿಸಿವೆ. ಬಾಲಾಜಿ ಸದ್ಯಕ್ಕೆ ಸಚಿವರಾಗಿ ಉಳಿಯುತ್ತಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಆದೇಶ ತಾತ್ಕಾಲಿಕವಾಗಿದ್ದು ಯಾವುದೇ ಸಮಯದಲ್ಲಾದರೂ ಮರು ಜಾರಿಯಾಗಬಹುದು ಎಂದು ಕೂಡ ಮಾಧ್ಯಮಗಳಲ್ಲಿ ವರದಿಯಾಗಿವೆ.

ಈ ಸುದ್ದಿ ಓದಿದ್ದೀರಾ? ಸಿಎಂ ಸಂಪರ್ಕಿಸದೆ ಬಂಧಿತ ಸಚಿವರನ್ನು ವಜಾ ಮಾಡಿದ ತಮಿಳುನಾಡು ರಾಜ್ಯಪಾಲ

ಸಚಿವರ ವಜಾ ಕುರಿತು ಅಟಾರ್ನಿ ಜನರಲ್‌ ಅವರಿಂದ ಕಾನೂನು ಅಭಿಪ್ರಾಯವನ್ನು ಆಲಿಸುತ್ತೇನೆ. ಅವರ ಅಭಿಪ್ರಾಯ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ ಎನ್ನಲಾಗಿದೆ.

ರಾಜ್ಯಪಾಲರೊಬ್ಬರು ಸಚಿವರನ್ನು ವಜಾಗೊಳಿಸಿದ ಉದಾಹರಣೆ ಇದ್ದರೂ ಆ ಆದೇಶವನ್ನು ತಡೆ ಹಿಡಿದು ಕಾನೂನು ಸಲಹೆ ಪಡೆಯಲು ಮುಂದಾಗಿರುವುದು ಇದೇ ಮೊದಲು ಎನ್ನಲಾಗುತ್ತಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜೂನ್‌ 14ರಂದು ಉದ್ಯೋಗಕ್ಕಾಗಿ ಲಂಚ ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿ ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿದ್ದರು. ಪ್ರಸ್ತುತ ಜೈಲು ಸೇರಿರುವ ಮತ್ತು ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಬಾಲಾಜಿ ಅವರನ್ನು ಸ್ಟಾಲಿನ್ ಅವರು ಖಾತೆರಹಿತ ಸಚಿವರಾಗಿ ಉಳಿಸಿಕೊಂಡಿದ್ದರು. 

ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟು ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಾಜಿ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ.

ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಬಂಧವು ಹಲವು ತಿಂಗಳುಗಳಿಂದ ಉದ್ವಿಗ್ನಗೊಂಡಿದೆ. ಸರ್ಕಾರದ ಹಲವಾರು ವಿಷಯಗಳ ಬಗ್ಗೆ ರಾಜ್ಯಪಾಲರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಖ್ಯವಾಗಿ, ರಾಜ್ಯ ವಿಧಾನಸಭೆಯು ಅಂಗೀಕರಿಸಿದ ಶಾಸನಕ್ಕೆ ರಾಜ್ಯಪಾಲರು ಒಪ್ಪಿಗೆ ನಿರಾಕರಿಸಿದರು. ರಾಜ್ಯಪಾಲರ ನಿರ್ಧಾರದ ಬಗ್ಗೆ ಡಿಎಂಕೆ ಕಳೆದ ವರ್ಷ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ಸಲ್ಲಿಸಿತ್ತು.

ಪಶ್ಚಿಮ ಬಂಗಾಳ, ತೆಲಂಗಾಣ, ಕೇರಳ, ನವದೆಹಲಿ ಸೇರಿದಂತೆ ಪ್ರತಿಪಕ್ಷಗಳು ಆಳ್ವಿಕೆ ನಡೆಸುವ ಇತರ ರಾಜ್ಯಗಳಲ್ಲಿ ಇದೇ ರೀತಿಯ ಘರ್ಷಣೆಗಳು ವರದಿಯಾಗಿವೆ. ಈ ಪ್ರಕರಣಗಳಲ್ಲಿ, ರಾಜ್ಯಪಾಲರು ಅಥವಾ ಲೆಫ್ಟಿನೆಂಟ್ ಗವರ್ನರ್‌ಗಳು ಪಕ್ಷಪಾತದ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಆಡಳಿತ ಪಕ್ಷಗಳು ಆರೋಪಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...