ಕೋಮು ಉದ್ವಿಗ್ನತೆ ಹಿನ್ನೆಲೆ ಅಮಿತ್‌ ಶಾ ಬಿಹಾರ ಭೇಟಿ ರದ್ದು; ಜನ ಬಾರದ ಕಾರಣ ವಾಪಸ್‌ ಎಂದ ಜೆಡಿಯು

Date:

  • ಏಪ್ರಿಲ್‌ 2ರಂದು ನಳಂದ ಜಿಲ್ಲೆಯ ಸಸರಾಮ್‌ನಲ್ಲಿ ಕಾರ್ಯಕ್ರಮ ನಿಗದಿ
  • ನಳಂದ ಜಿಲ್ಲೆಯಲ್ಲಿ ಬಿಜೆಪಿಗೆ ಅಸ್ತಿತ್ವವೇ ಇಲ್ಲ ಎಂದ ಜೆಡಿಯು ನಾಯಕರು

ಭಾನುವಾರ (ಏಪ್ರಿಲ್ 2) ಬಿಹಾರದ ಸಸಾರಾಮ್‌ನಲ್ಲಿ ಮೌರ್ಯ ಚಕ್ರವರ್ತಿ ಅಶೋಕ ಜನ್ಮದಿನದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆಯ ನಂತರ ಪ್ರದೇಶದಲ್ಲಿ ಉಂಟಾದ ಕೋಮು ಉದ್ವಿಗ್ನತೆಯ ಹಿನ್ನೆಲೆಯಲ್ಲಿ ತಮ್ಮ ಪ್ರವಾಸ ರದ್ದುಗೊಳಿಸಿದ್ದಾರೆ.

ಆದರೆ ಬಿಜೆಪಿ ಕಾರ್ಯಕ್ರಮಕ್ಕೆ ಜನರು ಆಗಮಿಸದ ಕಾರಣ ಅಮಿತ್‌ ಶಾ ಬಿಹಾರಕ್ಕೆ ಬರುತ್ತಿಲ್ಲ ಎಂದು ಜೆಡಿಯು ಕಾನೂನು ಸುವ್ಯಸ್ಥೆಯ ಕಾರಣವನ್ನು ನಿರಾಕರಿಸಿದೆ.

ಸಸಾರಾಮ್‌ನಲ್ಲಿ ನಗರದಲ್ಲಿ ಇನ್ನೂ ನಿಷೇಧಾಜ್ಞೆ ಜಾರಿಯಲ್ಲಿದೆ. “ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಸಸಾರಂ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಿದ್ದಾರೆ. ಪರಿಸ್ಥಿತಿ ಸೂಕ್ಷ್ಮವಾಗಿರುವುದರಿಂದ ಸಸಾರಾಮ್‌ನಲ್ಲಿ ನಿಷೇಧಾಜ್ಞೆ ಇನ್ನೂ ಜಾರಿಯಲ್ಲಿದೆ. ಈ ಹಿನ್ನಲೆಯಲ್ಲಿ ನಾವು ಸಭೆ ನಡೆಸಲು ಸಾಧ್ಯವಿಲ್ಲ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಾಮ್ರಾಟ್ ಚೌಧರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಆರೋಪವನ್ನು ನಿರಾಕರಿಸಿರುವ ರಾಜ್ಯ ಜೆಡಿಯು ವಕ್ತಾರ ನೀರಜ್ ಕುಮಾರ್, “ಬಿಜೆಪಿ ನಾಯಕರು ಸುಳ್ಳು ಹೇಳುತ್ತಿದ್ದಾರೆ. ಅಮಿತ್ ಶಾ ರ್‍ಯಾಲಿಗೆ ಸ್ಥಳೀಯ ಆಡಳಿತ ಸಿದ್ಧಗೊಳಿಸಿತ್ತು. ಆದರೆ ಜನರು ಬಾರದ ಕಾರಣ  ರಾಜ್ಯ ಬಿಜೆಪಿ ಅಮಿತ್ ಶಾ ಅವರ ಪ್ರವಾಸ ರದ್ದುಗೊಳಿಸಿದೆ. ಸಸಾರಂ ಬಾಬು ಜಗಜೀವನ್ ರಾಮ್ ಅವರ ಜನ್ಮಭೂಮಿ. ಅವರ ಹೆಸರಿನ ಯೋಜನೆಯನ್ನು ಕೇಂದ್ರವು ಸ್ಥಗಿತಗೊಳಿಸಿದೆ. ಸಮಾಜವಾದಿಗಳ ನಾಡಾಗಿರುವ ಶಹಾಬಾದ್ ಪ್ರದೇಶದಲ್ಲಿ ಬಿಜೆಪಿಗೆ ಅಸ್ತಿತ್ವವೇ ಇಲ್ಲ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಮೋದಿ ಪದವಿ ಪ್ರಮಾಣಪತ್ರ ನೀಡಬೇಕಾಗಿಲ್ಲ ಎಂದ ಗುಜರಾತ್ ಹೈಕೋರ್ಟ್; ಕೇಜ್ರಿವಾಲ್‌ಗೆ ₹25 ಸಾವಿರ ದಂಡ

ರಾಜ್ಯ ಸರ್ಕಾರವನ್ನು ಟೀಕಿಸಿದ ಸಾಮ್ರಾಟ್‌ ಚೌಧರಿ, “ಸಿಎಂ ನಿತೀಶ್ ಕುಮಾರ್ ಅವರು ಕೇಂದ್ರ ಗೃಹ ಸಚಿವರನ್ನು ಬಿಹಾರದಿಂದ ದೂರವಿಡಲು ಬಹುಶಃ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಆದರೆ ಒಂದು ವಿಷಯ ಸ್ಪಷ್ಟವಾಗಿದೆ. ನಿತೀಶ್ ಕುಮಾರ್ ಅವರಿಗೆ ಈಗ ಬಿಹಾರವನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಅವರ ಹುಟ್ಟೂರಾದ ಬಿಹಾರ ಶರೀಫ್, ನಳಂದದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ತಡೆಯಲು ಅವರಿಗೆ ಸಾಧ್ಯವಾಗುತ್ತಿಲ್ಲ. ಇದು ಬಿಹಾರ ಸರ್ಕಾರದ ‘ವಿಧ್ವಂಸಕ’ ಪ್ರಯತ್ನ” ಎಂದು ಖಂಡಿಸಿದ್ದಾರೆ.

ಸಸಾರಾಮ್ ಮತ್ತು ಬಿಹಾರಶರೀಫ್ ಪಟ್ಟಣಗಳು ರೋಹ್ತಾಸ್ ಮತ್ತು ನಳಂದದ ಜಿಲ್ಲಾ ಕೇಂದ್ರಗಳಾಗಿವೆ. ರಾಮನವಮಿ ಮೆರವಣಿಗೆಯಲ್ಲಿ ಕೋಮು ಸಂಘರ್ಷ ವರದಿಯಾದ ನಂತರ ಎರಡೂ ಪಟ್ಟಣಗಳಲ್ಲಿ ನಿಷೇಧಾಜ್ಞೆ ವಿಧಿಸಲಾಯಿತು.

ಹಿಂದುಳಿದ ವರ್ಗ ಕುಶ್ವಾಹ ಸಮುದಾಯವು ಅಶೋಕ ಚಕ್ರವರ್ತಿಯನ್ನು ತಮ್ಮ ಪೂಜನೀಯ ಎಂದು ಭಾವಿಸುತ್ತಾರೆ. ಸಸಾರಾಮ್ ಭಾಗವಾಗಿರುವ ಶಹಾಬಾದ್ ಪ್ರದೇಶವು ಗಣನೀಯ ಪ್ರಮಾಣದ ಕುಶ್ವಾಹ ಜನಸಂಖ್ಯೆ ಹೊಂದಿದೆ. ಕುಶ್ವಾಹ ನಾಯಕ ಸಾಮ್ರಾಟ್ ಚೌಧರಿ ಅವರನ್ನು ರಾಜ್ಯ ಬಿಜೆಪಿ ಮುಖ್ಯಸ್ಥರನ್ನಾಗಿಸಲು ಇದು ವೇದಿಕೆಯಾಗಿತ್ತು. ಆದರೆ ಜನರು ಸೇರುವುದಿಲ್ಲ ಎಂಬ ಕಾರಣಕ್ಕೆ ಸಭೆಯನ್ನು ಬಿಜೆಪಿ ರದ್ದುಗೊಳಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...