‘ವ್ಯೂಹಂ’ ಸಿನಿಮಾ ವಿವಾದ | ನಿರ್ದೇಶಕ ವರ್ಮಾ ತಲೆಗೆ 1 ಕೋಟಿ ಘೋಷಿಸಿದ್ದ ಟಿಡಿಪಿ ಮುಖಂಡನ ವಿರುದ್ಧ ದೂರು

Date:

ಆಂಧ್ರಪ್ರದೇಶದಲ್ಲಿ ‘ವ್ಯೂಹಂ’ ಸಿನಿಮಾ ಸದ್ಯ ವಿವಾದಕ್ಕೆ ಸಿಲುಕಿದೆ. ಚಿತ್ರವನ್ನು ನಿರ್ದೇಶನ ಮಾಡಿರುವ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದ್ದು, ಟಿಡಿಪಿ ಮುಖಂಡ ಕೋಲಿಕಪುಡಿ ಶ್ರೀನಿವಾಸ್ ನಾಯ್ಡು ಎನ್ನುವವರು ಮಾಧ್ಯಮವೊಂದರ ಚರ್ಚಾ ಕಾರ್ಯಕ್ರಮದಲ್ಲಿ ರಾಮ್ ಗೋಪಾಲ್ ವರ್ಮಾ ತಲೆ ಕತ್ತರಿಸಿದವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, “ವ್ಯೂಹಂ ಸಿನಿಮಾ ನಿರ್ದೇಶನ ಮಾಡಿದ್ದಕ್ಕೆ ತಮಗೆ ಕೊಲೆ ಬೆದರಿಕೆ ಹಾಕಲಾಗುತ್ತಿದೆ. ಟಿಡಿಪಿ ಮುಖಂಡ ಕೋಲಿಕಪುಡಿ ಶ್ರೀನಿವಾಸ್ ನಾಯ್ಡು ಎನ್ನುವವರು ಮಾಧ್ಯಮದಲ್ಲಿ ಕೂತು ಬಹಿರಂಗವಾಗಿ ತಮ್ಮನ್ನು ಕೊಲ್ಲಲು ಪ್ರಚೋದನೆ ನೀಡಿದ್ದಾರೆ. ನನ್ನ ತಲೆ ಕತ್ತರಿಸಿದವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರ್ಮಾ ನಿರ್ದೇಶನ ಮಾಡಿರುವ ವ್ಯೂಹಂ ಸಿನಿಮಾ, ಆಂಧ್ರದ ಮಾಜಿ ಸಿಎಂ, ದಿವಂಗತ ಜಗನ್ ಮೋಹನ್ ರೆಡ್ಡಿ ಹಾಗೂ ಈಗಿನ ಮುಖ್ಯಮಂತ್ರಿ ಅವರ ಮಗ ಜಗನ್ಮೋಹನ್ ರೆಡ್ಡಿ ಜೀವನವನ್ನು ಆಧರಿಸಿದ ಸಿನಿಮಾವಾಗಿದೆ. ಸಿನಿಮಾದಲ್ಲಿ ತೆಲುಗುದೇಶಂ ಪಕ್ಷದ ಮುಖಂಡ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಖಳನಾಯಕನ ರೀತಿಯಲ್ಲಿ ಬಿಂಬಿಸಲಾಗಿದೆ ಎನ್ನುವುದು ಟಿಡಿಪಿ ಸದಸ್ಯರ ಆರೋಪ. ಈ ಕಾರಣದಿಂದಾಗಿ ರಾಮ್ ಗೋಪಾಲ್ ವರ್ಮಾ ವಿರುದ್ಧ ಟಿಡಿಪಿ ಕಾರ್ಯಕರ್ತರು ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಬಿಡುಗಡೆಯಾಗಿರುವ ಸಿನಿಮಾದ ಟ್ರೇಲರ್‌ನಲ್ಲಿ ನಟರಾದ ಪವನ್ ಕಲ್ಯಾಣ್, ಚಿರಂಜೀವಿ ಅವರ ಪಾತ್ರವನ್ನೂ ಕೂಡ ಸೃಷ್ಟಿಸಲಾಗಿದೆ.

ಈ ವಿವಾದದ ಬಗ್ಗೆ ಮಾಧ್ಯಮದೊಂದಿಗಿನ ಚರ್ಚೆಯಲ್ಲಿ ಭಾಗಿಯಾಗಿದ್ದ ವೇಳೆ ಮಾತನಾಡಿದ್ದ ಟಿಡಿಪಿ ಮುಖಂಡ ಕೋಲಿಕಪುಡಿ ಶ್ರೀನಿವಾಸ್ ನಾಯ್ಡು, ಎಡವಟ್ಟಿನ ಹೇಳಿಕೆಯನ್ನು ನೀಡಿದ್ದರು. ವರ್ಮಾ ತಲೆ ಕಡಿದು ತಂದಿವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಇದರ ವಿರುದ್ಧ ವರ್ಮಾ ದೂರು ನೀಡಿದ್ದಾರೆ.

ಈ ನಡುವೆ ನಿನ್ನೆ ರಾಮ್ ಗೋಪಾಲ್ ವರ್ಮಾ ಕಚೇರಿಯ ಬಳಿ ಸೇರಿ ಟಿಡಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಹೈದರಾಬಾದ್‌ನಲ್ಲಿರುವ ವರ್ಮಾ ಅವರ ಡೆನ್ ಕಚೇರಿಗೆ ಮುತ್ತಿಗೆ ಹಾಕಿದ್ದ ಕಾರ್ಯಕರ್ತರು, ವ್ಯೂಹಂ ಸಿನಿಮಾದ ಪೋಸ್ಟರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಸಿನಿಮಾ ಯಾವುದೇ ಕಾರಣಕ್ಕೂ ಬಿಡುಗಡೆಗೆ ಅನುಮತಿ ನೀಡಬಾರದು ಎಂದು ಒತ್ತಡ ಹಾಕಿದ್ದಾರೆ.

vyuham

ಆಂಧ್ರಪ್ರದೇಶ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ನಡುವೆಯೇ ಈ ವಿವಾದ ಎಬ್ಬಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಚಂದ್ರಬಾಬು ನಾಯ್ಡು  ಜೈಲಿಗೆ ಹೋಗಿ ಬಂದಿದ್ದ ದೃಶ್ಯವನ್ನೂ ಸೇರಿಸಲಾಗಿದೆ. ಇವೆಲ್ಲವೂ ಚುನಾವಣೆ ಮೇಲೆ ಪರಿಣಾಮ ಬೀರಲಿವೆ ಎಂದು ಆರೋಪಿಸಿರುವ ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್, ಕೇಂದ್ರ ಸೆನ್ಸಾರ್ ಮಂಡಳಿಗೆ ಪತ್ರ ಬರೆದಿದ್ದು ಈ ಚಿತ್ರದ ಬಿಡುಗಡೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ನಡುವೆ ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, “ಈ ರಾಜಕೀಯ ಕಿತ್ತಾಟಗಳು ಏನೇ ಇದ್ದರೂ, ಈ ಸಿನಿಮಾವನ್ನು ತಾವು ಬಿಡುಗಡೆ ಮಾಡಿಯೇ ಮಾಡುತ್ತೇನೆ. ಒಬ್ಬ ಸಿನಿಮಾ ಮೇಕರ್ ಆಗಿ ನನ್ನ ಕೆಲಸ ಮಾಡಿದ್ದೇನೆ. ಜನರು ಎಲ್ಲವನ್ನೂ ತೀರ್ಮಾನ ಮಾಡಲಿ” ಎಂದು ತಿಳಿಸಿದ್ದಾರೆ.

ಡಿ.29ರಂದು ‘ವ್ಯೂಹಂ’ ಸಿನಿಮಾ ಬಿಡುಗಡೆಯಾಗಲಿದೆ. ಈ ನಡುವೆ ಇದಕ್ಕೆ ತಡೆ ಕೋರುವಂತೆ ಆಗ್ರಹಿಸಿ ಟಿಡಿಪಿ ಪಕ್ಷದ ಮುಖಂಡರು ತೆಲಂಗಾಣ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...