ಮೋದಿ ಸರ್ಕಾರದ ವಿರುದ್ಧ ಮೌನವಾಗಿರುವ ಅಣ್ಣಾ ಹಜಾರೆಗೆ ಕೇಜ್ರಿವಾಲ್ ಸೋಲಿನಿಂದ ಖುಷಿ: ಸಂಜಯ್ ರಾವತ್

Date:

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಸೋತಿದ್ದಾರೆ. ಅವರ ಸೋಲು ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಗೆ ಸಂತೋಷವಾಗಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಸೋಲುಂಡಿದ್ದಾರೆ. ಎಎಪಿ ಕೂಡ ಕೇವಲ 22 ಸ್ಥಾನಗಳನ್ನು ಗೆಲ್ಲುವ ಮೂಲಕ ಹೀನಾಯ ಸೋಲು ಕಂಡಿದೆ. ಎಎಪಿ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ಅಣ್ಣಾ ಹಜಾರೆ, ‘ಮದ್ಯ ಹಗರಣ, ಅಕ್ರಮ ಹಣ ವರ್ಗಾವಣೆ ಭ್ರಷ್ಟಾಚಾರ ಆರೋಪಗಳಿಂದಲೇ ಕೇಜ್ರಿವಾಲ್-ಎಎಪಿ ಸೋತಿರುವುದು’ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಂಜಯ್ ರಾವತ್, “ಕಳೆದ ಕೆಲವು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹಲವಾರು ಭ್ರಷ್ಟಾಚಾರದ ಆರೋಪಗಳಿವೆ. ಆದರೆ, ಆ ಆರೋಪಗಳ ವಿಚಾರದಲ್ಲಿ ಹಜಾರೆ ಮೌನವಾಗಿರುವುದು ಯಾಕೆ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿ ಆಳ್ವಿಕೆಯಲ್ಲಿ ಭ್ರಷ್ಟಾಚಾರ ನಡೆದಾಗ ಹಜಾರೆ ಎಲ್ಲಿದ್ದರು? ಕೇಜ್ರಿವಾಲ್ ಸೋಲಿಗೆ ಹಜಾರೆ ಸಂತೋಷವಾಗಿದ್ದಾರೆ. ಪ್ರಸ್ತುತ ಸಮಯದಲ್ಲಿ, ಒಬ್ಬನೇ ಕೈಗಾರಿಕೋದ್ಯಮಿಯ ಕೈಯಲ್ಲಿ ಸಂಪತ್ತು ಕೇಂದ್ರೀಕೃತವಾಗುತ್ತಿದೆ, ದೇಶವನ್ನು ಲೂಟಿ ಮಾಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವ ಹೇಗೆ ಮುಂದುವರಿಯಬಹುದು? ಇಂತಹ ಸಮಯದಲ್ಲಿ ಹಜಾರೆ ಮೌನವಾಗಿರುವುದರ ಹಿಂದಿನ ರಹಸ್ಯವೇನು?” ಎಂದಿದ್ದಾರೆ.

“ಮಹಾರಾಷ್ಟ್ರ, ಹರಿಯಾಣ ಮತ್ತು ದೆಹಲಿಯಲ್ಲಿ ಮತದಾರರ ಪಟ್ಟಿ ಭಾರೀ ಗೊಂದಲ, ಅನುಮಾನಗಳನ್ನು ಹುಟ್ಟುಹಾಕಿದೆ. ಬಿಹಾರ ಚುನಾವಣೆಯಲ್ಲಿಯೂ ಇದೇ ರೀತಿಯ ಬೆಳವಣಿಗೆಗಳು ನಡೆಯಬಹುದು. ಆದರೂ, ಅಂತಹ ವಿಚಾರಗಳ ಬಗ್ಗೆ ಹಜಾರೆ ಮೌನವಾಗಿದ್ದಾರೆ” ಎಂದು ರಾವತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ, ಚುನಾವಣೆಗಳು ಸಾಂವಿಧಾನಿಕ ನೀತಿ-ನಿಯಮಗಳನ್ನು ಪಾಲಿಸದೆ ನಡೆಯುತ್ತಿವೆ. ಮತಯಂತ್ರ ತಿರುಚುವಿಕೆ, ಮತದಾರರ ಪಟ್ಟಿ ತಿರುಚುವಿಕೆ ಹಾಗೂ ಹಣ ಬಲದಿಂದ ಗೆಲುವು ಸಾಧಿಸಲಾಗುತ್ತಿದೆ” ಎಂದು ರಾವತ್ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...