ಅನ್ನಭಾಗ್ಯ | ಫಲಾನುಭವಿಗಳ ಖಾತೆಗೆ ಒಂದು ವರ್ಷದಲ್ಲಿ ₹8,433 ಕೋಟಿ ಜಮೆ: ಸಚಿವ ಕೆ ಎಚ್‌ ಮುನಿಯಪ್ಪ

Date:

ಜುಲೈ ತಿಂಗಳಲ್ಲಿ 1,15,61,765 ಪಡಿತರ ಚೀಟಿಯ 4,08,46,548 ಫಲಾನುಭವಿಗಳಿಗೆ 670.45 ಕೋಟಿ ರೂ. ನೇರ ನಗದು ಜಮೆ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ನೇರ ನಗದು ಜಮೆ ಪ್ರಾರಂಭವಾದ ಜುಲೈ-2023 ರಿಂದ ಜುಲೈ-2024ರವರೆಗೆ 8,433.11 ಕೋಟಿ ರೂ. ಮೊತ್ತವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ ಎಚ್‌ ಮುನಿಯಪ್ಪ ತಿಳಿಸಿದರು.

ಆಹಾರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಆಹಾರ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ಕರ್ನಾಟಕ ಆಹಾರ ನಿಗಮದ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಸಚಿವರು ಮಾತನಾಡಿದರು.

“ಈವರೆಗೂ ಪ್ರತಿ ತಿಂಗಳು ಒಂದು ಕೆ.ಜಿ. ಅಕ್ಕಿಗೆ 34 ರೂ. ನಂತೆ 5 ಕೆ.ಜಿ. ಅಕ್ಕಿಗೆ ಪ್ರತಿ ಸದಸ್ಯರಿಗೆ 170 ರೂ. ಮೊತ್ತವನ್ನು ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಈಗ ಚಾಲ್ತಿಯಲ್ಲಿರುವಂತೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ನೀಡಬೇಕಾಗಿರುವ ಅಕ್ಕಿ ಬದಲಾಗಿ ನೇರ ಹಣ ಜಮೆಯನ್ನು ಮುಂದುವರಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತ ಸರ್ಕಾರ 2013ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು ಮೊಟ್ಟಮೊದಲು ಜಾರಿಗೆ ತಂದ ರಾಜ್ಯ ಕರ್ನಾಟಕ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೊದಲ ಅವಧಿ ಮತ್ತು ಎರಡನೇ ಅವಧಿಯಲ್ಲಿ ಅನ್ನಭಾಗ್ಯ ಯೋಜನೆಗೆ ಅತ್ಯಂತ ಪ್ರಾಮುಖ್ಯತೆ ಕೊಡುವ ಮೂಲಕ ಕರ್ನಾಟಕ ರಾಜ್ಯವನ್ನು ಹಸಿವು ಮುಕ್ತ ಕರ್ನಾಟಕವಾಗಿಸಿದ್ದಾರೆ. ಇದು ನಮ್ಮ ಸರ್ಕಾರದ ಹೆಮ್ಮೆಯ ವಿಷಯವಾಗಿದೆ” ಎಂದು ತಿಳಿಸಿದರು.

ಅನ್ನ ಸುವಿಧಾ

“2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅನ್ನ ಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. 80 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಪಡಿತರ ವಿತರಣೆಯನ್ನು ಮನೆಯ ಬಾಗಿಲಿಗೆ ತಲುಪಿಸಲಾಗುತ್ತಿದೆ” ಎಂದರು.

“ಬಹಳ ವರ್ಷಗಳಿಂದ ಇದ್ದ ಸರ್ವರ್ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಇಲಾಖೆಯ ಬಹುದಿನದ ಬೇಡಿಕೆ ಆಹಾರ ಇಲಾಖೆಯ ಕಚೇರಿಗಳ ಸಂಕೀರ್ಣ ಆಹಾರ ಸೌಧವನ್ನು 50.00 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಆಲಿ ಆಸ್ಕರ್ ರಸ್ತೆಯಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ” ಎಂದು ಹೇಳಿದರು.

“ಆಹಾರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ಕಾಯ್ದೆಗಳಾದ ಅಗತ್ಯ ವಸ್ತುಗಳು ಕಾಯ್ದೆ-1955, ಕಾಳಸಂತೆ ನಿಯಂತ್ರಣ ಕಾಯ್ದೆ-1980, ಆಹಾರ ಭದ್ರತಾ ಕಾಯ್ದೆ-2013 ಹಾಗೂ ಗ್ರಾಹಕರ ಹಕ್ಕುಗಳ ರಕ್ಷಣಾ ಕಾಯ್ದೆ-2019ನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ” ಎಂದು ತಿಳಿಸಿದರು.

ಕೇಂದ್ರದಿಂದ ಅಕ್ಕಿ ಖರೀದಿ

“ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಪ್ರತಿ ಕೆ.ಜಿ.ಗೆ 28 ರೂ. ದರದಲ್ಲಿ ಅಕ್ಕಿ ನೀಡಲು ತೀರ್ಮಾನಿಸಿದೆ. ಕೇಂದ್ರ ಸರ್ಕಾರ OMSS(D) ಯೋಜನೆಯಡಿ ರಾಜ್ಯ ಸರ್ಕಾರದ ಹೆಚ್ಚುವರಿ ಕಾರ್ಡ್‌ಗಳಿಗೆ ಬೇಕಾಗುವ 20,000 ಮೆ.ಟ. ಅಕ್ಕಿಯನ್ನು 28 ರೂ. ದರದಲ್ಲಿ ಎಫ್‌ಸಿಐ ಮೂಲಕ ಖರೀದಿಸಲು ತೀರ್ಮಾನಿಸಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...