ಅಕ್ಕಿ ಕೊಡಲು ನಿರಾಕರಿಸಿದ ಕೇಂದ್ರ ಸರ್ಕಾರ: ಜಾರಿ ಖಚಿತ ಎಂದ ಸಚಿವ ಕೆ.ಎಚ್ ಮುನಿಯಪ್ಪ

Date:

  • ಅಕ್ಕಿ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಅಸಹಕಾರ
  • ಅಕ್ಕಿ ಹೊಂದಿಸಲು ಮತ್ತೆ ಕಸರತ್ತು ಆರಂಭಿಸಿದ ರಾಜ್ಯ ಸರ್ಕಾರ

ಅನ್ನಭಾಗ್ಯ ಯೋಜನೆ ಜಾರಿಗೆ ಅಗತ್ಯವಾಗಿರುವ ಅಕ್ಕಿ ನೀಡುವ ವಿಚಾರದಲ್ಲಿ ಮತ್ತೆ ಕೇಂದ್ರ ಸರ್ಕಾರ ತನ್ನ ಮೊಂಡುತನ ಮುಂದುವರೆಸಿ ಅಸಹಕಾರ ತೋರಿದೆ. ಪರಿಣಾಮ ರಾಜ್ಯ ಸರ್ಕಾರ ಯೋಜನೆ ಜಾರಿಗೆ ಅಗತ್ಯ ಅಕ್ಕಿ ಹೊಂದಾಣಿಕೆಗೆ ಪರ್ಯಾಯ ಮಾರ್ಗ ಕಂಡಕೊಳ್ಳಬೇಕಿದೆ.

ಅಕ್ಕಿ ವಿತರಣೆಗೆ ಅಸಹಕಾರ ತೋರುತ್ತಿದ್ದ ಕೇಂದ್ರ ಸರ್ಕಾರದ ಜೊತೆ ಮತ್ತೊಂದು ಸುತ್ತಿನ ಮಾತುಕತೆ ಸಲುವಾಗಿ ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್ ಮುನಿಯಪ್ಪ, ಇಂದು ಕೇಂದ್ರ ಮಂತ್ರಿ ಪಿಯೂಷ್‌ ಗೋಯಲ್‌ ಭೇಟಿಯಾಗಿ ಮಾತುಕತೆ ನಡೆಸಿದರು.

ನವದೆಹಲಿಯಲ್ಲಿಂದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಭೇಟಿಯಾಗಿ ರಾಜ್ಯಕ್ಕೆ ನೀಡಲಾಗುತ್ತಿರುವ ಅಕ್ಕಿಯನ್ನು ಶೀಘ್ರವೇ ಒದಗಿಸುವಂತೆ ಮನವಿ ಸಲ್ಲಿಸಿದರು. ಆದರೆ ರಾಜ್ಯದ ಮನವಿಗೆ ಕೇಂದ್ರ ಸರ್ಕಾರದ ಸ್ಪಂದನೆ ಸಕಾರಾತ್ಮಕವಾಗಿರಲಿಲ್ಲ ಎಂದು ಸಚಿವ ಮುನಿಯಪ್ಪ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೋಯಲ್‌ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಆಹಾರ ಸಚಿವರು ನಮ್ಮ ಬೇಡಿಕೆಗೆ ಹಾರಿಕೆ ಉತ್ತರ ನೀಡಿದ್ದಾರೆ ಎಂದು ಹೇಳಿದರು. ಕೇಂದ್ರ ಕೊಟ್ಟರೂ ಕೊಡದಿದ್ದರೂ ನಾವು ಯೋಜನೆ ಜಾರಿ ಮಾಡುವುದು ಖಚಿತ ಎಂದು ಮುನಿಯಪ್ಪ ಸ್ಪಷ್ಟಪಡಿಸಿದರು.

ಕೇಂದ್ರ-ರಾಜ್ಯದ ನಡುವೆ ಜಟಾಪಟಿ

ಅನ್ನ ಭಾಗ್ಯಕ್ಕಾಗಿನ ಅಕ್ಕಿ ವಿತರಣೆಯಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಸಚಿವ ಮುನಿಯಪ್ಪ ಆರೋಪಿಸಿದ್ದರು. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಭಾರತೀಯ ಆಹಾರ ನಿಗಮ (ಎಫ್ಸಿಐ) ರಾಜ್ಯಕ್ಕೆ ಅಗತ್ಯವಿರುವ ಅಕ್ಕಿ ಪೂರೈಕೆ ಮಾಡುತ್ತಿಲ್ಲ. ಹೀಗಾಗಿ ಅಕ್ಕಿಗಾಗಿ ಬೇರೆ ರಾಜ್ಯಗಳಿಗೆ ಮನವಿ ಮಾಡುವಂತಾಗಿದೆ.

ಈಗಾಗಲೇ ಛತ್ತೀಸ್‌ಘಢ ಮತ್ತು ಪಂಜಾಬ್ ಸರ್ಕಾರಗಳು ಅಕ್ಕಿ ಕೊಡಲು ಮುಂದೆ ಬಂದಿವೆ. ಆದರೆ ಛತ್ತೀಸ್‌ಘಢ ಸರ್ಕಾರ ಕೇವಲ ಒಂದು ತಿಂಗಳಿಗೆ ಆಗುವಷ್ಟು(1.5 ಮೆಟ್ರಿಕ್ ಟನ್) ಅಕ್ಕಿ ಕೊಡುವುದಾಗಿ ಹೇಳಿದೆ. ಈ ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳ ಆಹಾರ ಸಚಿವರ ಜೊತೆಗೆ ಈ ಕುರಿತು ಸಭೆ ನಡೆಸಲಾಗುತ್ತಿದೆ ಎಂದರು.ಕೆ ಎಚ್_ ಮುನಿಯಪ್ಪ -ಗೋಯಲ್

ಅಕ್ಕಿಯನ್ನು ಕೇಂದ್ರದಿಂದ ಪುಕ್ಕಟೆ ಕೇಳುತ್ತಿಲ್ಲ. ಅದಕ್ಕೆ ಹಣವನ್ನು ಕೊಡುತ್ತೇವೆ ಎಂದು ಹೇಳಿದ್ದೇವೆ. ಆದರೆ, ಕೇಂದ್ರದಿಂದ ಸಹಕಾರ ಸಿಗುತ್ತಿಲ್ಲ. ಹೀಗಾಗಿ ನಮ್ಮದೇ ಆದಂತ ವ್ಯವಸ್ಥೆಯನ್ನು ಮಾಡಿಕೊಳ್ಳುತ್ತಿದ್ದೇವೆ. ಎನ್ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರ ಮುಖಾಂತರ ಅಕ್ಕಿ ಖರೀದಿ ಮಾಡುತ್ತೇವೆ.

ಈ ಸುದ್ದಿ ಓದಿದ್ದೀರಾ?:ಅಕ್ಕಿ ಕೊಡದಿರುವ ನೀಚ ಬುದ್ಧಿ ನಮಗಿಲ್ಲ: ಡಿ ವಿ ಸದಾಂದಗೌಡ ತಿರುಗೇಟು

ಹೊರ ರಾಜ್ಯದಿಂದ ಪಡಿತರಕ್ಕೆ ಅಗತ್ಯ ಧಾನ್ಯಗಳ ಖರೀದಿ ಮಾಡಿದರೆ ಸಾರಿಗೆ ವೆಚ್ಚ ಹೆಚ್ಚುವರಿಯಾಗುತ್ತದೆ. ಇದಕ್ಕಾಗಿ ಕೇಂದ್ರ ಸಂಸ್ಥೆಗಳಿಂದ ಖರೀದಿ ಮಾಡಲು ಮುಂದಾಗಿದ್ದೇವೆ. ಕೇಂದ್ರದ ಸಂಸ್ಥೆಗಳಾದರೆ ಅವರೇ ತರಿಸಿಕೊಂಡು ನಮಗೆ ಕೊಡುತ್ತಾರೆ. ಹೀಗಾಗಿ ಇಲ್ಲಿಂದಲೇ ದಾನ್ಯಗಳ ಖರೀಗೆ ಮಾತುಕತೆ ನಡೆಸುತ್ತಿದ್ದೇವೆ ಎಂದವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...