ಸಾರಿಗೆ ಸಂಸ್ಥೆಗಳನ್ನು ₹5,900 ಕೋಟಿ ನಷ್ಟದಲ್ಲಿಟ್ಟು ಹೋಗಿದ್ದಕ್ಕೆ ಉತ್ತರಿಸಿ ಆರ್ ಅಶೋಕ್‌: ಸಚಿವ ರಾಮಲಿಂಗಾರೆಡ್ಡಿ ಸವಾಲು

Date:

“ಬಸ್ ದರ ಏರಿಕೆಗೆ ಹೊಸ ಆಯೋಗ, ಪಿಕ್ ಪಾಕೆಟ್ ಸರ್ಕಾರದ ಹೊಸ ಪ್ರಯೋಗ” ಎಂದು ಎಕ್ಸ್‌ ತಾಣದಲ್ಲಿ ಟೀಕಿಸಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಎಕ್ಸ್‌ ತಾಣದಲ್ಲೇ ತಿರುಗೇಟು ನೀಡಿದ್ದಾರೆ.

“ಅಶೋಕ್ ಅವರೇ, ನೀವು ಸಾರಿಗೆ ಸಚಿವರಾಗಿದ್ದವರು , ಸಾರಿಗೆ ಸಂಸ್ಥೆಗಳ‌ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದಾರಾ ಎಂದರೆ ಆಶ್ಚರ್ಯವಾಗುತ್ತಿದೆ. 2013 ರಲ್ಲಿ ತಾವು ಸಾರಿಗೆ ಸಚಿವರಾಗಿದ್ದಾಗ ಬಸ್ ಪ್ರಯಾಣ ದರ 10.5% ಏರಿಕೆ ಮಾಡಿರುವುದು ಮರೆತುಬಿಟ್ಟಿದ್ದೀರಾ” ಎಂದು ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.

“ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ಈಗ ಬಸ್ ದರ ಏರಿಕೆಗೆ ಪ್ರತ್ಯೇಕ ಆಯೋಗ ರಚಿಸಿ ಪಿಕ್ ಪಾಕೆಟ್ ಗಾಗಿ ಹೊಸ ಪ್ರಯೋಗ ಮಾಡಲು ಹೊರಟಿದೆ. ಆಡಳಿತ ಮಾಡುವಲ್ಲಿ ಮೂರು ಕಾಸು ಪ್ರಯೋಜನ ಇಲ್ಲದಿದ್ದರೂ ಜನರಿಗೆ ಮಂಕು ಬೂದು ಎರಚಿ ಹೊಸ ಪ್ರಯೋಗಗಳ ಮೂಲಕ ಜನರನ್ನ ಸುಲಿಗೆ ಮಾಡುವಲ್ಲಿ ಕಾಂಗ್ರೆಸ್ ಪಕ್ಷದವರು ಬಹಳ ನಿಸ್ಸೀಮರು” ಎಂದು ಆರ್ ಅಶೋಕ್‌ ಟೀಕಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಶೋಕ್‌ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, “2020 ರಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿದ್ದಾಗ ಬಸ್ ಪ್ರಯಾಣ ದರ 12% ಹೆಚ್ಚಳ ಮಾಡಿದಾಗ ನೀವು ಕ್ಯಾಬಿನೆಟ್ ಮಂತ್ರಿಯಾಗಿದ್ದರಲ್ಲವೇ ?ಆಗ ಯಾಕೆ ವಿರೋಧ ವ್ಯಕ್ತ ಪಡಿಸಲಿಲ್ಲ. ದಿನಾಂಕ: 15/11/2021 ರಲ್ಲಿ ಎಂ.ಆರ್ ಶ್ರೀನಿವಾಸಮೂರ್ತಿ ಭಾಆಸೇ (ನಿವೃತ್ತ) ರವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಸಮಿತಿಯನ್ನು ತಮ್ಮದೇ ಬಿಜೆಪಿ ಸರ್ಕಾರ ರಚಿಸಿತ್ತು” ಎಂದು ನೆನಪಿಸಿದ್ದಾರೆ.

“ಅನೇಕ ಶಿಫಾರಸುಗಳೊಂದಿಗೆ ಪ್ರಮುಖವಾಗಿ, ಬಸ್ ಪ್ರಯಾಣ ದರವನ್ನು Institutional Arrangement for Revision of Bus Fares ಶೀರ್ಷಿಕೆಯಡಿಯಲ್ಲಿ KERC ಮಾದರಿಯಲ್ಲಿ ಕಾಲಕಾಲಕ್ಕೆ ಬಸ್ ದರವನ್ನು ಹೆಚ್ಚಿಸಬೇಕು, ಆಗಷ್ಟೇ ಸಾರಿಗೆ ಸಂಸ್ಥೆಗಳು ಉಳಿಯಲು ಸಾಧ್ಯವೆಂದು ಸದರಿ ಸಮಿತಿಯು ವರದಿ ನೀಡಿದ್ದು, ನೀವು ಕ್ಯಾಬೆನೆಟ್ ಮಂತ್ರಿಯಾಗಿದ್ದಾಗ ಯಾಕೆ ಈ ವರದಿಯನ್ನು ತಿರಸ್ಕರಿಸಲಿಲ್ಲ. ತಮ್ಮದೇ ಸರ್ಕಾರ ಅಂಗೀಕಾರ ಮಾಡಿದ ವರದಿಯನ್ನು ಈಗ ಸರಿಯಿಲ್ಲವೆಂದು ಹೇಳಲು ಹೊರಟ್ಟಿದ್ದೀರಾ?” ಎಂದು ಸಚಿವರು ಹರಿಹಾಯ್ದಿದ್ದಾರೆ.

ಕರ್ನಾಟಕ ಸರ್ಕಾರವು ದಿನಾಂಕ 30.09.2000ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಹೆಚ್‌ಟಿಡಿ/85/ಟಿಆ‌ರ್ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್ ತೈಲದ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು ನೌಕರರಿಗೆ ನೀಡುವ ತುಟ್ಟಿಭತ್ಯೆ ದರಗಳಲ್ಲಿ ಹೆಚ್ಚಳವಾದಾಗ ಪ್ರಯಾಣ ದರಗಳನ್ನು ಸ್ವಯಂಚಾಲಿತ ದರ ಹೊಂದಾಣಿಕೆ ನೀತಿಯಂತೆ ಪರಿಷ್ಕರಿಸಲು ಅನುಮತಿ ನೀಡಿರುತ್ತದೆ ಎಂಬ ಮಾಹಿತಿಯೇ ತಮಗೆ ಇಲ್ಲವೇ” ಎಂದು ಕೇಳಿದ್ದಾರೆ.

“ತಮ್ಮದೇ ಬಿಜೆಪಿ ಸರ್ಕಾರ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳನ್ನು 5,900 ಕೋಟಿ ರೂ. ನಷ್ಟದಲ್ಲಿಟ್ಟು ಹೋಗಿದ್ದು, ಈಗ ಸಾರಿಗೆ ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ?” ಎಂದು ಸವಾಲು ಹಾಕಿದ್ದಾರೆ.

“ನನಗೆ ರಾಜಕೀಯವೇ ಮುಖ್ಯ. ಸಾರಿಗೆ ಸಂಸ್ಥೆಗಳು ಉಳಿದರೇನು? ಮುಳುಗಿದರೆ ನನಗೇನು? ಅನ್ನುವ ಮನಸ್ಥಿತಿಯೇ ತಿಳಿಯದಾಗಿದೆ. ಅಶೋಕ್ ಅವರೇ ತಾವು ಕೂಡ ಸರ್ಕಾರದ ಭಾಗವಾಗಿ ತೆಗೆದುಕೊಂಡ ಎಲ್ಲ ಕ್ರಮಗಳನ್ನು ಇಂದು ಮರೆಮಾಚಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವುದು ಎಷ್ಟು ಸಮಂಜಸ ಎಂದು ಆತ್ಮಾವಲೋಕನ ಮಾಡಿಕೊಳ್ಳಿ” ಎಂದು ಕುಟುಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...