ಶೋಭಾ ಕರಂದ್ಲಾಜೆ ವಿರುದ್ಧ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು: ಟಿಕೆಟ್ ನೀಡದಂತೆ ಹೈಕಮಾಂಡ್‌ಗೆ ಪತ್ರ

Date:

ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್​ ನೀಡುವ ವಿಚಾರದ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸ್ವಕ್ಷೇತ್ರದಲ್ಲೇ ಬಿಜೆಪಿ ಕಾರ್ಯಕರ್ತರಿಂದಲೇ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಈ ಬಾರಿ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರು ಪತ್ರ ಅಭಿಯಾನ ಆರಂಭಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಂಚೆಯ ಮೂಲಕ ಪತ್ರ ಕಳುಹಿಸಲು ಆರಂಭಿಸಿದ್ದಾರೆ.

Shobha Karandlaje

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲದಿನಗಳ ಹಿಂದೆಯಷ್ಟೇ ಉಡುಪಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿ ಶೋಭಾ ಕರಂದ್ಲಾಜೆಯವರನ್ನು ಮೀನುಗಾರ ಮುಖಂಡರಿಂದ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆಯ ಬೆನ್ನಲ್ಲೇ ಈ ಬೆಳವಣಿಗೆ ಆರಂಭಗೊಂಡಿದೆ.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೂ ಬಿಜೆಪಿ ಕಾರ್ಯಕರ್ತರು ಪತ್ರ ಬರೆದಿದ್ದಾರೆ. ಎರಡು ಬಾರಿ ಸಂಸದೆಯಾಗಿ ಕ್ಷೇತ್ರ ಅಭಿವೃದ್ಧಿ ಮಾಡಿಲ್ಲ ಅವರಿಗೆ ಈ ಬಾರಿ ಟಿಕೆಟ್ ಬೇಡ ಎಂದು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸುಮಾರು 5 ಸಾವಿರಕ್ಕೂ ಅಧಿಕ ಪತ್ರಗಳನ್ನು ಕಾರ್ಯಕರ್ತರು ಬರೆದು ಅಂಚೆ ಮೂಲಕ ಕಳುಹಿಸಿದ್ದಾರೆ. ಇದೇ ವೇಳೆ ಉತ್ತಮ ಅಭ್ಯರ್ಥಿ ಅಥವಾ ಹೊಸ ಮುಖಕ್ಕೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಪಟ್ಟುಹಿಡಿದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಚಾರಕ್ಕೆ ಆಗಮಿಸಿಲ್ಲ ಎಂಬುವುದು ಕಾರ್ಯಕರ್ತರ ಅಸಮಾಧಾನಕ್ಕೆ ಪ್ರಮುಖ ಕಾರಣಗಳಲ್ಲಿ ಒಂದು ಎನ್ನಲಾಗಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಭದ್ರಕೋಟೆಗಳೆಲ್ಲ ಕಾಂಗ್ರೆಸ್ ಕೈ ವಶವಾಗಿತ್ತು. ಇದರಿಂದ ಕಾರ್ಯಕರ್ತರು ಶೋಭಾ ವಿರುದ್ಧ ಕಿಡಿಕಾರಿದ್ದರು.

ct ravi 6

ಈ ನಡುವೆ ಚಿಕ್ಕಮಗಳೂರು ಉಡುಪಿ ಲೋಕಸಭಾ ಟಿಕೆಟ್‌ಗಾಗಿ ಸಿ.ಟಿ ರವಿ ಹಾಗೂ ಶೋಭಾ ಬೆಂಬಲಿಗರ ನಡುವೆ ಬಣ ರಾಜಕೀಯ ಶುರುವಾಗಿದೆ. ಸಿ.ಟಿ ರವಿ ಅವರಿಗೆ ಟಿಕೆಟ್ ನೀಡುವಂತೆ ಮತ್ತೊಂದು ಅಭಿಯಾನವನ್ನು ಆರಂಭಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಕ್ಷೇತ್ರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ, ಬಿಜೆಪಿ ಕಾಯಕರ್ತರು ಸಿ ಟಿ ರವಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರು.

bjp 28
ಬಿಜೆಪಿ ಕಾರ್ಯಕರ್ತರು ಹೈಕಮಾಂಡ್‌ಗೆ ಬರೆದಿರುವ ಪತ್ರ

ಇನ್ನು, ಕೇಂದ್ರ ಸಚಿವೆ ಶೋಭಾ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಸಿ ಟಿ ರವಿ, “1995ರ ನಂತರ ಪಕ್ಷದಲ್ಲಿ ನಾನು ಯಾವುದನ್ನೂ ಕೇಳಿ ಪಡೆದಿಲ್ಲ. ಪತ್ರ ಚಳುವಳಿಯ ಮಾಹಿತಿ ನನಗಿಲ್ಲ. ನಮ್ಮ ಪಕ್ಷದ ಟಿಕೆಟ್ ಕೊಡುವ ಮಾನದಂಡ ಬೇರೆಯೇ ಇದೆ. ಈಗಾಗಲೇ ಬಿಜೆಪಿ ವತಿಯಿಂದ ಇಂಟರ್‌ನಲ್ ಮತ್ತು ಎಕ್ಸ್ಟರ್ನಲ್ ಸರ್ವೆ ನಡೆಯುತ್ತಿದೆ. ಹಲವಾರು ಏಜೆನ್ಸಿ ಮೂಲಕ ಸರ್ವೆ ನಡೆಯುತ್ತಿದೆ. ಸರ್ವೆ ವರದಿಯ ಆಧಾರದ ಮೇಲೆ ಟಿಕೆಟ್ ಫೈನಲ್ ಮಾಡಲಾಗುತ್ತದೆ. ಸರ್ವೆ ಬಳಿಕ ಯಾರಿಗೆ ಟಿಕೆಟ್ ಕೊಡಬೇಕೆಂದು ತೀರ್ಮಾನಿಸಲಾಗುತ್ತದೆ. ಆದರೆ ನಾನಂತೂ ಟಿಕೆಟ್ ಆಕಾಂಕ್ಷಿಯಲ್ಲ” ಎಂದು ಹೇಳುವ ಮೂಲಕ ತಮಗೂ ಪತ್ರ ಚಳವಳಿಗೂ ಸಂಬಂಧವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

“ನಮ್ಮ ಗುರಿ ಒಂದೇ. ಮತ್ತೆ ಮೋದಿಯವರು ಈ ದೇಶದ ಪ್ರಧಾನಿಯಾಗಬೇಕು. ಮೂರನೇ ಬಾರಿಗೆ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿ, ಯಾರೇ ಅಭ್ಯರ್ಥಿಯಾದರೂ ಪಕ್ಷದ ಪರವಾಗಿ ಕೆಲಸ ಮಾಡುತ್ತೇವೆ” ಎಂದು ಸಿ ಟಿ ರವಿ ತಿಳಿಸಿದ್ದಾರೆ. ತಮ್ಮ ವಿರುದ್ಧದ ಪತ್ರ ಚಳವಳಿಯ ಬಗ್ಗೆ ಶೋಭಾ ಕರಂದ್ಲಾಜೆ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...