‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

Date:

“ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ” ಎಂದು ಹೇಳುವ ಮೂಲಕ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಟ್ರೋಲ್ ಆಗಿದ್ದಾರೆ. ಆಗಸ್ಟ್ 23ರಂದು ಹಿಮಾಚಲ ಪ್ರದೇಶದ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅನುರಾಗ್ ನೀಡಿದ ಹೇಳಿಕೆಯು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಟೀಕೆಗೆ, ಟ್ರೋಲ್‌ಗೆ ಗುರಿಯಾಗಿದೆ.

ಸದ್ಯ ಅನುರಾಗ್ ಹೇಳಿಕೆಯ ವಿಡಿಯೋ ವೈರಲ್ ಆಗಿದ್ದು, “ಮೊದಲ ಬಾಹ್ಯಾಕಾಶ ಯಾತ್ರಿಕ ಯಾರು? ನನ್ನ ಪ್ರಕಾರ ಅದು ಭಗವಾನ್ ಹನುಮಾನ್” ಎಂದು ಹೇಳುವುದು ವಿಡಿಯೋದಲ್ಲಿ ಕಾಣಬಹುದು. “ಈ ಹೇಳಿಕೆಯ ಪೂರ್ಣ ಶ್ರೇಯಸ್ಸು ನಮ್ಮ ಅಜೈವಿಕ ಪ್ರಧಾನಿ ನರೇಂದ್ರ ಮೋದಿ ಅವರಿಗೇ ಸಲ್ಲಬೇಕು” ಎಂದು ಕೆಲವು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ಇದನ್ನು ಓದಿದ್ದೀರಾ? ಬಾಹ್ಯಾಕಾಶಕ್ಕೆ ಹೋಗುವ ಮುನ್ನ ಜೈವಿಕವಲ್ಲದ ಪ್ರಧಾನಿ ಮಣಿಪುರಕ್ಕೆ ಹೋಗಲಿ: ಜೈರಾಮ್ ರಮೇಶ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ವಾಸ್ತವದಲ್ಲಿ ಮೊದಲ ಬಾಹ್ಯಾಕಾಶ ಯಾತ್ರಿಕರಾದ ಯೂರಿ ಗಗಾರಿನ್ ಎಂದು ಹಲವು ನೆಟ್ಟಿಗರು ಕಾಮೆಂಟ್‌ಗಳನ್ನು ಮಾಡಿದ್ದಾರೆ. “ಮಕ್ಕಳ ತಪ್ಪನ್ನು ತಿದ್ದುವ ಬದಲು ಆ ಕ್ಷುಲ್ಲಕ ನಗುವಿನೊಂದಿಗೆ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ ಎಂದು ನೀವು ಅವರಿಗೆ ಹೇಳಿದ್ದೀರಿ. ನಿಜವಾಗಿ ಯೂರಿ ಗಗಾರಿನ್ ಮೊದಲ ಬಾಹ್ಯಾಕಾಶ ಪ್ರಯಾಣಿಕ. ಮಕ್ಕಳ ಮುಗ್ಧ ಮನಸ್ಸಿನೊಂದಿಗೆ ಆಟವಾಡುವುದನ್ನು ನಿಲ್ಲಿಸಿ” ಎಂದು ತಿಳಿಸಿದ್ದಾರೆ.

“ಎಲ್ಲಾ ಮಕ್ಕಳು ತಪ್ಪು ಉತ್ತರಗಳನ್ನು ನೀಡುತ್ತಿದ್ದರು. ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಮೊದಲ ವ್ಯಕ್ತಿ ನೀಲ್ ಆರ್ಮ್‌ಸ್ಟ್ರಾಂಗ್ ಅಲ್ಲ, ಯೂರಿ ಗಗಾರಿನ್ (ಚಂದ್ರನಿಗೆ ಪ್ರಯಾಣಿಸಿದ ಮೊದಲ ವ್ಯಕ್ತಿ). ನಂಬಿಕೆ ಮತ್ತು ವಿಜ್ಞಾನವು ವಿಭಿನ್ನ ವಿಷಯಗಳು. ಮಕ್ಕಳು ಶಾಲೆಯಲ್ಲಿ ವಿಜ್ಞಾನವನ್ನು ಮತ್ತು ಮನೆಯಲ್ಲಿ ನಂಬಿಕೆಯನ್ನು ಕಲಿಯಲಿ” ಎಂದು ಅಭಿಪ್ರಾಯಿಸಿದ್ದಾರೆ.

ಇನ್ನೋರ್ವ ನೆಟ್ಟಿಗರು, “ವಿಜ್ಞಾನವು ಪುರಾಣವಲ್ಲ. ತರಗತಿಗಳಲ್ಲಿ ಯುವ ಮನಸ್ಸುಗಳನ್ನು ದಾರಿ ತಪ್ಪಿಸುವುದು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಜ್ಞಾನ, ತರ್ಕ ಮತ್ತು ವೈಜ್ಞಾನಿಕ ಮನೋಭಾವಕ್ಕೆ ಅವಮಾನ” ಎಂದಿದ್ದಾರೆ. ಇನ್ನು ಹಲವು ಮೀಮ್ಸ್‌ಗಳು ಹರಿದಾಡುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...