ಚುನಾವಣಾ ಬಾಂಡ್‌ ಅಲ್ಲದೆ, ರಾಜಕೀಯ ಪಕ್ಷಗಳು 7,000 ಕೋಟಿ ರೂ. ದೇಣಿಗೆ ಪಡೆದಿವೆ: ವರದಿ

Date:

ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳು ಸುಮಾರು 12,000 ಕೋಟಿ ರೂ. ದೇಣಿಗೆ ಪಡೆದಿವೆ ಎಂಬುದು ಇತ್ತೀಚೆಗೆ ಬಹಿರಂಗವಾಗಿದೆ. ಈ ನಡುವೆ, ಚುನಾವಣಾ ಬಾಂಡ್‌ಗಳ ಹೊರತು ಪಡಿಸಿ, ಕಳೆದ 10 ವರ್ಷಗಳಲ್ಲಿ ಪಕ್ಷಗಳು 7,726 ಕೋಟಿ ರೂ. ದೇಣಿಗೆ ಪಡೆದಿವೆ ಎಂದು ವರದಿಯಾಗಿದೆ.

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಚುನಾವಣಾ ಬಾಂಡ್‌ ಹೊರತುಪಡಿಸಿ, ಪಕ್ಷಗಳು 2013-23ರ ನಡುವೆ  7,726 ಕೋಟಿ ರೂ. ದೇಣಿಗೆ ಪಡೆದಿವೆ. ಈ ಪೈಕಿ, ಸುಮಾರು 5,000 ಕೋಟಿ ರೂ. (64.7%) ಹಣವನ್ನು ಬಿಜೆಪಿಯೇ ಪಡೆದಿದೆ. ನಂತರದ ಸ್ಥಾನದಲ್ಲಿ ಕಾಂಗ್ರೆಸ್ (10.7%), ಭಾರತ ರಾಷ್ಟ್ರ ಸಮಿತಿ (3.3%) ಹಾಗೂ ಆಮ್ ಆದ್ಮಿ ಪಕ್ಷ (3.1%) ದೇಣಿಗೆ ಪಡೆದಿವೆ ಎಂದು ಬಿಸಿನೆಸ್‌ಲೈನ್ ವರದಿ ಮಾಡಿದೆ.

ವರದಿಯ ಪ್ರಕಾರ, ಒಟ್ಟು ದೇಣಿಗೆಯ ದೊಡ್ಡ ಭಾಗವನ್ನು ರಾಜಕೀಯ ನಿಧಿಯ ಪಾರದರ್ಶಕ ವಿಧಾನಗಳ ಮೂಲಕ ಪಕ್ಷಗಳು ಪಡೆದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2018ರಲ್ಲಿ ಕೇಂದ್ರ ಸರ್ಕಾರವು ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಪರಿಚಯಿಸುವ ಮೊದಲು, 2003ರಲ್ಲಿ ಇದೇ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ, ರಾಜಕೀಯ ಹಣಕಾಸು ಕಾನೂನುಗಳ ಪ್ರಕಾರ, 20,000 ರೂ.ಗಿಂತ ಹೆಚ್ಚಿನ ದೇಣಿಗೆ ಪಡೆದರೆ, ಪಕ್ಷಗಳು ಆ ದೇಣಿಗೆಯ ಮಾಹಿತಿಯನ್ನು ಘೋಷಿಸಬೇಕಿತ್ತು.

ರಾಜಕೀಯ ಪಕ್ಷಗಳು ಪಡೆಯುವ ದೇಣಿಗೆಯು 100% ತೆರಿಗೆ ವಿನಾಯತಿಯನ್ನು ಹೊಂದಿರುತ್ತಿತ್ತು. ಈ ದೇಣಿಗೆಯು ವರ್ಷಗಳು ಕಳೆದಂತೆ ಏರಿಕೆಯನ್ನು ಕಂಡಿತ್ತು. 2014ರ ಆರ್ಥಿಕ ವರ್ಷದಲ್ಲಿ ರಾಜಕೀಯ ಪಕ್ಷಗಳಿಗೆ 309 ಕೋಟಿ ರೂ. ದೇಣಿಗೆ ದೊರೆತಿದ್ದರೆ, 2020ರ ವರ್ಷದಲ್ಲಿ 1,247 ಕೋಟಿ ರೂ. ಆಗಿತ್ತು ಆದಾಗ್ಯೂ, 2023ರ ಆರ್ಥಿಕ ವರ್ಷದಲ್ಲಿ ಈ ದೇಣಿಗೆಯ ಮೊತ್ತವು 1,101 ಕೋಟಿ ರೂ.ಗೆ ಸ್ವಲ್ಪ ಇಳಿಕೆ ಕಂಡಿದೆ ಎಂದು ವರದಿ ತಿಳಿಸಿದೆ.

ಪಕ್ಷಗಳಿಗೆ ಕಾರ್ಪೊರೇಟ್ ಕಂಪನಿಗಳು ಹೆಚ್ಚಿನ ದೇಣಿಗೆ ನೀಡಿವೆ. ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್ (ಪಿಇಟಿ) ನಂತಹ ಕಂಪನಿಗಳು ದೇಣಿಗೆ ನೀಡಿರುವ ಪ್ರಮುಖ ಕಂಪನಿಗಳಾಗಿವೆ. ಈ ಕಂಪನಿಯು 2023ರ ಆರ್ಥಿಕ ವರ್ಷದಲ್ಲಿ ಬಿಜೆಪಿಗೆ 256 ಕೋಟಿ ರೂ. ಮತ್ತು ಭಾರತ ರಾಷ್ಟ್ರ ಸಮಿತಿಗೆ 90 ಕೋಟಿ ರೂ. ದೇಣಿಗೆ ನೀಡಿದೆ. ಇದೇ ವರ್ಷ, M/S MKJ ಎಂಟರ್‌ಪ್ರೈಸಸ್ ಲಿಮಿಟೆಡ್ ಕಂಪನಿಯು ಕಾಂಗ್ರೆಸ್‌ಗೆ 45 ಕೋಟಿ ರೂ. ನೀಡಿದೆ. ಬಿ.ಜಿ ಶಿರ್ಕೆ ಕನ್‌ಸ್ಟ್ರಕ್ಷನ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಬಿಜೆಪಿಗೆ 35 ಕೋಟಿ ರೂ. ದೇಣಿಗೆ ನೀಡಿದೆ ಎಂದು ಬಿಸಿನೆಸ್‌ಲೈನ್ ವರದಿ ಮಾಡಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ನ (ಎಡಿಆರ್‌) ಮುಖ್ಯಸ್ಥ ಅನಿಲ್ ವರ್ಮಾ ಅವರು ಭಾರತದಲ್ಲಿ ಪಾರದರ್ಶಕ ರಾಜಕೀಯ ದೇಣಿಗೆಗಳ ಪರಿವರ್ತನೆ ಬಗ್ಗೆ ವಿವರಿಸಿದ್ದಾರೆ. “ಭಾರತದಲ್ಲಿ ಪಕ್ಷ ರಾಜಕೀಯವು ಹೆಚ್ಚು ಸ್ಪರ್ಧಾತ್ಮಕವಾಗುತ್ತಿದೆ. ಇದು ಚುನಾವಣೆಗಳಲ್ಲಿ ಪಕ್ಷದ ವೆಚ್ಚದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಹೀಗೆ ಹೆಚ್ಚುತ್ತಿರುವ ವೆಚ್ಚಗಳನ್ನು ಪೂರೈಸಲು, ಪಕ್ಷಗಳು ಹೆಚ್ಚಾಗಿ ಕಾರ್ಪೊರೇಟ್ ವಲಯದ ಮೇಲೆ ಅವಲಂಬಿತವಾಗಿವೆ. ಇದು ಅಪಾರದರ್ಶಕ ನಿಧಿ ಹಾಗೂ ಕೊಡು-ತೆಗೆದು ವಿಧಾನದ ಬೆಳವಣಿಗೆಗೆ ಕಾರಣವಾಗಿದೆ. ಯಾವುದೇ ರಾಜಕೀಯ ಪಕ್ಷವು ಅಧಿಕಾರದಲ್ಲಿದ್ದರೂ, ಅವರು ತಮ್ಮ ಅನುಕೂಲಕ್ಕಾಗಿ ಕೊಡು-ತೆಗೆದು ವಿಧಾನವನ್ನು ಅನುಸರಿಸುತ್ತಾರೆ” ಎಂದು ಹೇಳಿದ್ದಾರೆ.

ಆರು ರಾಷ್ಟ್ರೀಯ ಪಕ್ಷಗಳು ಸ್ವೀಕರಿಸಿದ ಸುಮಾರು 75% ಹಣವು 20,000 ರೂ. ಮಿತಿಗಿಂತ ಕಡಿಮೆ ಇರುವ ಅನಾಮಧೇಯ ದೇಣಿಗೆಗಳ ಮೂಲಕ ಬಂದಿದೆ ಎಂಬುದನ್ನು ವರದಿಯು ಹೈಲೈಟ್ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...