ಅಪ್ಪಾಜಿ ಕುಟುಂಬದ ಬಣ್ಣ ಬಯಲಾಗಬೇಕು, ಅವರೂ ಜೈಲಿಗೆ ಹೋಗಬೇಕು: ಯತ್ನಾಳ್

Date:

ಯಡಿಯೂರಪ್ಪ ಅವರ ಕಾಲದ ಹಗರಣಗಳು ಹೊರಗೆ ಬರಲಿ. ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೂ ಅವರ ನಿಜ ಬಣ್ಣ ಬಯಲಾಗಲಿ. ಪೂಜ್ಯ ಅಪ್ಪಾಜಿಯವರು, ಪೂಜ್ಯ ತಂದೆಯವರು ಎಂದು ತಿಳಿದುಕೊಳ್ಳುವವರಿಗೆ ಇವರ ಅಸಲಿ ರೂಪ ಗೊತ್ತಾಗಲಿ ಎಂದು ಸ್ವಪಕ್ಷ ನಾಯಕರ ವಿರುದ್ದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಗುಡುಗಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ, “ಅಪ್ಪಾಜಿ ಕುಟುಂಬದ ಬಣ್ಣ ಬಯಲಾಗಬೇಕು. ಅವರೂ ಜೈಲಿಗೆ ಹೋಗಬೇಕು” ಎಂದರು.

“ಮುಡಾ ಅಕ್ರಮದಲ್ಲಿ ಯಾರು ತಪ್ಪು ಮಾಡಿದ್ದಾರೋ ಅವರ ಸತ್ಯವೆಲ್ಲವೂ ರಾಜ್ಯದ ಜನತೆಗೆ ತಿಳಿಯಬೇಕು. ಯಡಿಯೂರಪ್ಪ, ಬೊಮ್ಮಾಯಿ, ಶೆಟ್ಟರ್, ಸದಾನಂದ ಗೌಡ, ಕುಮಾರಸ್ವಾಮಿ ಅವಧಿಯಲ್ಲಿ ತಪ್ಪಾಗಿದ್ದರೂ ಅದು ಕೂಡಾ ತಪ್ಪೇ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಡಿಯೂರಪ್ಪ ಅವಧಿಯಲ್ಲಿ ಏನೇನು ಆಗಿದೆ ಎನ್ನುವುದು ಮೊದಲು ಗೊತ್ತಾಗಲಿ. ಪಾದಯಾತ್ರೆ ಮಾಡುವುದರಿಂದ ಆಗುವುದೇನಿದೆ? ಮೊದಲು ನಮಗೆ ನೈತಿಕತೆ ಇದೆಯಾ?” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗೆ ಕುಟುಕಿದರು.

“ಮೈಸೂರು ಪಾದಯಾತ್ರೆ ಎನ್ನುವುದು ಬರೀ ನಾಟಕ, ಬರೀ ಆಟ. ಇವರು, ಇವರ ಅಪ್ಪ ಎಷ್ಟು ಆಸ್ತಿ ಮಾಡಿದ್ದಾರೆ ಎನ್ನುವುದು ಗೊತ್ತಾಗಬೇಕಲ್ಲ. ಮುಖ್ಯಮಂತ್ರಿಗಳ ಮಗನ ದಾಖಲೆಯೂ ಇದೆ. ಎಲ್ಲರೂ ಜೈಲಿಗೆ ಹೋದರೆ ಹೋಗಲಿ, ನ್ಯಾಯ ಕೊಡಿಸುವುದಕ್ಕೆ ನಾನಿದ್ದೇನೆ” ಎಂದರು.

“ಸದನದಲ್ಲಿ ಮುಡಾ ಅಕ್ರಮ ಬಗ್ಗೆ ಏಕೆ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಸಿದ್ದರಿಲ್ಲ? ಸಿದ್ದರಾಮಯ್ಯ ಪಲಾಯನ ಮಾಡುತ್ತಿದ್ದಾರೆ. ವಾಲ್ಮೀಕಿ ಮತ್ತು ಮುಡಾ ಹಗರಣ ಸಿದ್ದರಾಮಯ್ಯನವರ ಅನುಮತಿ ಇಲ್ಲದೆ ಆಗಲು ಸಾಧ್ಯವಿಲ್ಲ. ಮುಡಾ ಹಗರಣದಲ್ಲಿ ಸಿಎಂ ತಲೆ ಎತ್ತಿ ಓಡಲು ಸಾಧ್ಯವಾಗುತ್ತಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...