ಗೃಹಜ್ಯೋತಿ | 200 ಯೂನಿಟ್​ಗಿಂತ ಹೆಚ್ಚು ಬಳಸಿದರೆ ಅರ್ಜಿ ತಿರಸ್ಕೃತ : ಸಚಿವ ಕೆ ಜೆ ಜಾರ್ಜ್

Date:

  • ಇಂಧನ ಇಲಾಖೆಯ ಮೇಲೆ ಯಾವುದೇ ಹೊರೆ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವ ಜಾರ್ಜ್
  • ಆ.5ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಉದ್ಘಾಟನಾ ಸಮಾರಂಭ

ಗೃಹಜ್ಯೋತಿ ಯೋಜನೆಯಲ್ಲಿ ನಿಗದಿಪಡಿಸಲಾಗಿರುವ 200 ಯೂನಿಟ್​ಗಿಂತ ಹೆಚ್ಚು ವಿದ್ಯುತ್ ಬಳಸಿದರೂ ಅರ್ಜಿ ತಿರಸ್ಕೃತ ಆಗಲಿದೆ ಮತ್ತು ಸಂಪೂರ್ಣ ಬಿಲ್ಲನ್ನು ಗ್ರಾಹಕರು ನೀಡಬೇಕು ಎಂದು ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಗೆ 1.42 ಲಕ್ಷ ಕೋಟಿ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ಆ.5ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ತಿಳಿಸಿದ್ದಾರೆ.

“ಸರಾಸರಿ ಬಳಸುವ ಯೂನಿಟ್‌ ವಿದ್ಯುತ್ 200 ಯೂನಿಟ್‌ಗಳಿಗಿಂತ ಕಡಿಮೆಯಿದ್ದರೆ, ಮನೆಯ ಗ್ರಾಹಕರು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಸರಾಸರಿಗಿಂತ ಹೆಚ್ಚಿನ ಯೂನಿಟ್ ಬಳಸಿದರೆ, ಹೆಚ್ಚುವರಿ ಯೂನಿಟ್‌ಗೆ ಮಾತ್ರ ಶುಲ್ಕ ಪಾವತಿಸಬೇಕಾಗುತ್ತದೆ. ಆದರೆ,200ಕ್ಕೂ ಹೆಚ್ಚು ಯೂನಿಟ್ ಬಳಸಿದರೆ ಪೂರ್ಣ ಶುಲ್ಕ ಪಾವತಿಸಬೇಕಾಗುತ್ತದೆ,” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೃಹ ಜ್ಯೋತಿ ಯೋಜನೆ ಇಂಧನ ಇಲಾಖೆಯ ಯೋಜನೆಯಲ್ಲ. ಇದು ಸರ್ಕಾರದ ಯೋಜನೆ. ಆದ್ದರಿಂದ ಇಂಧನ ಇಲಾಖೆಯ ಮೇಲೆ ಯಾವುದೇ ಹೊರೆ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವ ಜಾರ್ಜ್, ನಾವು ಎಷ್ಟು ಬಿಲ್ ಕೊಡುತ್ತೇವೋ ಅಷ್ಟೂ ಬಿಲ್ಲನ್ನು ಸರ್ಕಾರವೇ ಸಬ್ಸಿಡಿ ರೂಪದಲ್ಲಿ ಕೊಡಲಿದೆ ಎಂದರು.

‘200 ಯೂನಿಟ್​ಯೊಳಗೆ ವಿದ್ಯುತ್​ ಬಳಸಿದರೆ ಬಿಲ್ ಪಾವತಿಸುವಂತಿಲ್ಲ. ಒಂದು ವರ್ಷದ ಸರಾಸರಿ ವಿದ್ಯುತ್ ಬಿಲ್ ಪರಿಗಣಿಸಿ ಉಚಿತ ವಿದ್ಯುತ್​ ನೀಡಲಾಗುತ್ತದೆ. 200 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಸಿದರೆ ಅರ್ಜಿ ತಿರಸ್ಕೃತ ಆಗಲಿದೆ’ ಎಂದು ಕೆ.ಜೆ.ಜಾರ್ಜ್ ತಿಳಿಸಿದರು.

‘ಮಧ್ಯಮ ವರ್ಗದ ಜನರ ಜೀವನ ಸುಧಾರಣೆ ಮಾಡುವ ಮಹಾತ್ವಾಕಾಂಕ್ಷಿ ಯೋಜನೆ ಇದು. 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವ ಯೋಜನೆ ಕೇವಲ ವಿದ್ಯುತ್ ಶುಲ್ಕದ ಕಡಿಮೆ ಮಾಡುತ್ತಿಲ್ಲ, ಬದಲಾಗಿ ಕುಟುಂಬದ ಆರ್ಥಿಕ ಪ್ರಗತಿಯ ಮೂಲಕ ಸಾಮಾಜಿಕ ಭದ್ರತೆ ನೀಡಲಿದೆ’ ಎಂದು ಜಾರ್ಜ್‌ ವಿವರಿಸಿದರು.

‘ಗೃಹ ಜ್ಯೋತಿ’ ಯೋಜನೆಯ ಅನುಷ್ಠಾನದ ಮೊದಲ ತಿಂಗಳಿನಲ್ಲೇ ಸುಮಾರು 1.42 ಕೋಟಿ ಕುಟುಂಬಗಳು ಇದರ ಪ್ರಯೋಜನ ಪಡೆಯಲಿವೆ. ಜುಲೈ 27ರ ಮೊದಲು ಅರ್ಜಿ ಸಲ್ಲಿಸಿದವರು ಮಾತ್ರ ಜುಲೈ ತಿಂಗಳ ವಿದ್ಯುತ್ ಬಳಕೆಯ ಶುಲ್ಕದಲ್ಲಿ ಲಾಭ ಪಡೆಯಲು ಅರ್ಹರಾಗಿರುತ್ತಾರೆ. ಜುಲೈ 27ರ ನಂತರ ಅರ್ಜಿ ಸಲ್ಲಿಸಿದವರು ಆಗಸ್ಟ್‌ನಲ್ಲಿ ಅವರ ಬಳಕೆಯ ಆಧಾರದ ಮೇಲೆ ಸೆಪ್ಟೆಂಬರ್‌ನ ಬಿಲ್ಲಿಂಗ್‌ನಲ್ಲಿ ಪ್ರಯೋಜನ ಪಡೆಯುತ್ತಾರೆ,”ಎಂದರು.

‘ಗೃಹಜ್ಯೋತಿ’ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ. ಆ.5ರಂದು ಕಲಬುರಗಿಯ ಕಲಬುರಗಿಯ ಎನ್‌ವಿ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​, ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ಜಾರ್ಜ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಇಂಧನ, ಮೂಲಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಹಾಗೂ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಪಂಂಕಜ್ ಕುಮಾರ್ ಪಾಂಡೆ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...