14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

Date:

ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ ಉಸ್ತುವಾರಿಗಳನ್ನಾಗಿ ಕಾಂಗ್ರೆಸ್‌ ನೇಮಿಸಿದೆ.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್‌ ಈ ಕುರಿತು ನಿರ್ದೇಶನ ನೀಡಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲು 14 ಲೋಕಸಭಾ ಕ್ಷೇತ್ರಗಳಿಗೆ ಹೆಚ್ಚುವರಿ ಉಸ್ತುವಾರಿಯನ್ನಾಗಿ ಸಚಿವರನ್ನು ನೇಮಿಸಲಾಗಿದೆ. ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಕೋರಿದ್ದಾರೆ.

“ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ತಾವುಗಳು (ಸಚಿವರು) ಅತ್ಯಂತ ವ್ಯವಸ್ಥಿತವಾಗಿ ಚುನಾವಣೆ ಪ್ರಚಾರ ಕೈಗೊಂಡಿದ್ದೀರಿ. ತಮಗೆ ಪಕ್ಷದ ಪರವಾಗಿ ಧನ್ಯವಾದ ತಿಳಿಸುವೆ. 2ನೇ ಹಂತದ ಚುನಾವಣೆ ಮೇ 7ರಂದು ನಡೆಯಲಿದ್ದು, ಪ್ರಸ್ತುತ ಚುನಾವಣೆಯೂ ಅತ್ಯಂತ ಮಹತ್ವದ್ದಾಗಿದ್ದರಿಂದ ಉಳಿದ ಕ್ಷೇತ್ರಗಳ ಗೆಲುವಿಗೆ ಶ್ರಮಿಸಿ” ಎಂದು ಡಿಕೆ ಶಿವಕುಮಾರ್‌ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವ ಕ್ಷೇತ್ರಕ್ಕೆ ಯಾರು ಹೆಚ್ಚುವರಿ ಉಸ್ತುವಾರಿ?

ದಾವಣಗೆರೆ ಲೋಕಸಭಾ ಕ್ಷೇತ್ರ – ಡಾ. ಜಿ ಪರಮೇಶ್ವರ್‌
ಧಾರವಾಡ ಲೋಕಸಭಾ ಕ್ಷೇತ್ರ – ದಿನೇಶ್‌ ಗುಂಡೂರಾವ್‌
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ – ಕೆ ಜೆ ಜಾರ್ಜ್‌
ಚಿಕ್ಕೋಡಿ ಲೋಕಸಭಾ ಕ್ಷೇತ್ರ – ಕೆ ಎಚ್‌ ಮುನಿಯಪ್ಪ
ಹಾವೇರಿ ಲೋಕಸಭಾ ಕ್ಷೇತ್ರ – ಕೃಷ್ಣ ಬೈರೇಗೌಡ
ಬಳ್ಳಾರಿ ಲೋಕಸಭಾ ಕ್ಷೇತ್ರ – ರಾಮಲಿಂಗಾರೆಡ್ಡಿ
ಬೆಳಗಾವಿ ಲೋಕಸಭಾ ಕ್ಷೇತ್ರ – ಬೈರತಿ ಸುರೇಶ್‌
ಕೊಪ್ಪಳ ಲೋಕಸಭಾ ಕ್ಷೇತ್ರ – ಡಾ. ಎಂ ಸಿ ಸುಧಾಕರ್‌
ರಾಯಚೂರು ಲೋಕಸಭಾ ಕ್ಷೇತ್ರ – ಕೆ ಎನ್‌ ರಾಜಣ್ಣ
ಬೀದರ್‌ ಲೋಕಸಭಾ ಕ್ಷೇತ್ರ – ಕೆ ವೆಂಕಟೇಶ್‌
ಶಿವಮೊಗ್ಗ ಲೋಕಸಭಾ ಕ್ಷೇತ್ರ – ಎನ್‌ ಚಲುವರಾಯಸ್ವಾಮಿ
ಬಿಜಾಪುರ ಲೋಕಸಭಾ ಕ್ಷೇತ್ರ – ಎಚ್‌ ಸಿ ಮಹದೇವಪ್ಪ
ಬಾಗಲಕೋಟೆ ಲೋಕಸಭಾ ಕ್ಷೇತ್ರ – ಡಿ ಸುಧಾಕರ್‌

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...