ಉಪಕುಲಪತಿಗಳ ನೇಮಕಾತಿ | ಕೇಂದ್ರದ ಕ್ರಮ ಖಂಡನೀಯ, ಚರ್ಚಿಸಿ ತೀರ್ಮಾನ: ಸಿದ್ದರಾಮಯ್ಯ

Date:

ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ಸಣ್ಣ ಅವಕಾಶವನ್ನೂ ಬಿಟ್ಟುಕೊಡದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ಯುಜಿಸಿ ನೇಮಕಾತಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ಕರಡು ನಿಯಮಾಳಿಗಳನ್ನು ನಮ್ಮ ಸರ್ಕಾರ ಪರಿಶೀಲಿಸಿ, ಇದರ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಚನೆ ಮಾಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗಿರುವ ನಿಯಮಾವಳಿಗಳ ಪ್ರಕಾರ ಉಪಕುಲಪತಿಗಳ ನೇಮಕಾತಿಗೆ ರಾಜ್ಯ ಸರ್ಕಾರ ಶೋಧನಾ ಸಮಿತಿಯನ್ನು ರಚಿಸುತ್ತಿತ್ತು. ಅದರಲ್ಲಿ ಕುಲಪತಿಗಳಾಗಿರುವ ರಾಜ್ಯಪಾಲರು ಶಿಫಾರಸು ಮಾಡುವ ವ್ಯಕ್ತಿಗಳು ಕೂಡಾ ಸದಸ್ಯರಾಗಿರುತ್ತಿದ್ದರು. ಹೊಸ ನಿಯಮಗಳ ಪ್ರಕಾರ ರಾಜ್ಯಪಾಲರು ಸೂಚಿಸುವ ವ್ಯಕ್ತಿಯೇ ಶೋಧನಾ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಇದು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದ ಮೇಲಿನ ನೇರ ಸವಾರಿಯಾಗಿದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ವಿಶ‍್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿಗಾಗಿ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಅರ್ಜಿಗಳನ್ನು ಆಹ್ವಾನಿಸಬೇಕೆಂದು ಯುಜಿಸಿ ಹೊಸ ನಿಯಮಾವಳಿಗಳು ಹೇಳುತ್ತಿದೆ. ಇಲ್ಲಿಯ ವರೆಗೆ ಆಯಾ ರಾಜ್ಯಗಳ ವಿದ್ವಾಂಸರಿಗಷ್ಟೇ ಸೀಮಿತವಾಗಿದ್ದ ರಾಜ್ಯಪಾಲರ ಹುದ್ದೆ ಹೊಸ ನಿಯಮಗಳು ಜಾರಿಗೆ ಬಂದರೆ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಸ್ಥಾನದಲ್ಲಿ ಅನ್ಯಭಾಷಿಕರು ಬಂದು ಕೂರುವ ಅಪಾಯ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ಕೇಸರಿಕರಣ, ಪರಿಶುದ್ಧ ಆಟ ಅಂತರ್ಧಾನ

ಉಪಕುಲಪತಿಗಳ ನೇಮಕಾತಿಯ ಅರ್ಹತೆಗೆ ಸಂಬಂಧಿಸಿದಂತೆಯೂ ಕೆಲವು ಪ್ರಮುಖ ಬದಲಾವಣಿಗಳನ್ನು ಮಾಡಲಾಗಿದೆ. ಹೊಸ ನಿಯಮಗಳ ಪ್ರಕಾರ ಉಪಕುಲಪತಿಗಳನ್ನು ಕೇವಲ ಅಕಾಡೆಮಿಕ್ ವಲಯದಿಂದ ಮಾತ್ರ ನೇಮಿಸಿಕೊಳ್ಳದೆ, ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರದ ಉದ್ಯಮಿಗಳು, ಸಾರ್ವಜನಿಕ ಆಡಳಿತದ ನೀತಿ ನಿರೂಪಕರು ಸೇರಿದಂತೆ ಬೇರೆ ಕ್ಷೇತ್ರದಲ್ಲಿರುವ ತಜ್ಞರನ್ನು ನೇಮಕಮಾಡಿಕೊಳ್ಳಬಹುದಾಗಿದೆ. ಇದು ಕನ್ನಡಿಗರಿಗೆ ಬಗೆಯುವ ದ್ರೋಹವಾಗಿದೆ ಎಂದು ಸಿಎಂ ಟೀಕಿಸಿದ್ದಾರೆ.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರು ಅನಗತ್ಯವಾಗಿ ಮೂಗುತೂರಿಸುತ್ತಾ ಬಂದಿ‍ದ್ದಾರೆ. ಎಷ್ಟೋ ಸಂದರ್ಭಗಳಲ್ಲಿ ರಾಜ್ಯ ಸರ್ಕಾರದ ಶಿಫಾರಸನ್ನು ನಿರ್ಲಕ್ಷಿಸಿ ತಮ್ಮ ಆಯ್ಕೆಯನ್ನು ನಮ್ಮ ಮೇಲೆ ಹೇರುತ್ತಿದ್ದಾರೆ. ಶಿಕ್ಷಣ ಕ್ಷೇತ್ರದ ನಿರ್ವಹಣೆ ರಾಜ್ಯ ಸರ್ಕಾರದ ಪರಮಾಧಿಕಾರವಾಗಿದ್ದು ಇದರಲ್ಲಿ ಅನಗತ್ಯವಾದ ಮಧ್ಯಪ್ರವೇಶದಿಂದಾಗಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಘರ್ಷಣೆ ಏರ್ಪಡುವ ಸಾಧ್ಯತೆ ಇದೆ. ಒಕ್ಕೂಟ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂತಹ ಇಂತಹ ನಡವಳಿಕೆಗಳನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ. ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಜೊತೆಯಲ್ಲಿ ಈ ಬಗ್ಗೆ ಚರ್ಚಿಸಿ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...