ಪ್ರಧಾನ ಮಂತ್ರಿಗಳೆಂದರೆ ಸರ್ವಾಧಿಕಾರಿಯೇ: ಸಿದ್ದರಾಮಯ್ಯ ಪ್ರಶ್ನೆ

Date:

  • ‘ಕುಮಾರಸ್ವಾಮಿ ಸುಳ್ಳು ಹೇಳುವುದನ್ನು ಬಿಟ್ಟರೆ ಬೇರೆ ಏನೂ ಮಾಡುತ್ತಿಲ್ಲ’
  • ‘ರಾಜ್ಯ ಸರ್ಕಾರ ಎಲ್ಲದಕ್ಕೂ ಕೇಂದ್ರ ಸರ್ಕಾರದೆಡೆಗೆ ಬೊಟ್ಟು ಮಾಡುತ್ತಿಲ್ಲ’

ಪ್ರಧಾನ ಮಂತ್ರಿಗಳೆಂದರೆ ಅವರೇನು ಸರ್ವಾಧಿಕಾರಿಯೇ? ಮಧ್ಯಪ್ರದೇಶದ ಚುನಾವಣೆಯಲ್ಲಿ ನನ್ನ ಬಗ್ಗೆ ಮೋದಿ ಮಾತನಾಡಬಹುದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ದುರಹಂಕಾರದಿಂದ ಮಾತನಾಡುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿಕೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಸರ್ಕಾರ ಕೇವಲ ಶಾಸಕರನ್ನು ಸೆಳೆಯುವ ಕೆಲಸದಲ್ಲಿ ಮಗ್ನವಾಗಿದೆ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಮಾತನಾಡಿ, “ಕುಮಾರಸ್ವಾಮಿಯವರು ಯಾವಾಗ ಸತ್ಯವನ್ನು ಹೇಳಿದ್ದಾರೆ. ಸುಳ್ಳು ಆರೋಪಗಳನ್ನು ಮಾಡುವುದು, ಸುಳ್ಳು ಹೇಳುವುದನ್ನು ಬಿಟ್ಟರೆ ಬೇರೆ ಏನೂ ಮಾಡುತ್ತಿಲ್ಲ. ವಿರೋಧ ಪಕ್ಷ ಎಂದ ಮೇಲೆ ಸಲಹೆಗಳನ್ನು ನೀಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಶೀಲನೆ ನಂತರ ಲೋಕಸಭಾ ಅಭ್ಯರ್ಥಿ ತೀರ್ಮಾನ

ಹಾಸನದ ಲೋಕಸಭಾ ಚುನಾವಣಾ ಅಭ್ಯರ್ಥಿ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “ಹಾಸನ ಜಿಲ್ಲೆಗೆ ಸಚಿವರನ್ನು ವೀಕ್ಷಕರಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿನ ಜನನಾಯಕರ ಅಭಿಪ್ರಾಯಗಳ ವರದಿಯನ್ನು ಪಡೆದ ನಂತರ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

ಯತ್ನಾಳ್ ಶೇಮ್‌ಲೆಸ್ ವ್ಯಕ್ತಿ

ಶಾಸಕ ಬಸವರಾಜ ಯತ್ನಾಳ್ ಅವರು ಕಾಂಗ್ರೆಸ್ ಶೇಮ್‍ಲೆಸ್ ಸರ್ಕಾರ ಎಂದು ಹೇಳಿರುವ ಬಗ್ಗೆ ಮಾತನಾಡಿ “ಯತ್ನಾಳ್ ಅವರೇ ಶೇಮ್‍ಲೆಸ್ ವ್ಯಕ್ತಿ. ಅವರ ನಡವಳಿಕೆ ಸರಿಯಿಲ್ಲದ ಕಾರಣ ಬಿಜೆಪಿ ಅವರಿಗೆ ನೋಟಿಸ್‌ ಜಾರಿ ಮಾಡಿತ್ತು” ಎಂದರು.

“ಬರ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ರಾಜ್ಯ ಸರ್ಕಾರ ಎಲ್ಲದಕ್ಕೂ ಕೇಂದ್ರ ಸರ್ಕಾರದೆಡೆಗೆ ಬೊಟ್ಟು ಮಾಡುತ್ತಿಲ್ಲ. ಬದಲಿಗೆ ಪರಿಹಾರ ನೀಡಿ ಎಂದು ಕೇಳುತ್ತಿದ್ದೇವೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

“ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡಬೇಕು. ಕರ್ನಾಟಕ ರಾಜ್ಯದಲ್ಲಿ ಬರ ಬಂದರೆ ಕೇಂದ್ರ ಸರ್ಕಾರದ್ದೂ ಜವಾಬ್ದಾರಿ ಇರುತ್ತದೆ. ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ತೆರಿಗೆ ನೀಡುತ್ತದೆ. ಎನ್.ಡಿ.ಆರ್.ಎಫ್/ ಎಸ್.ಡಿ.ಆರ್.ಎಫ್ ಅನುದಾನವಿರುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲುಗಳಲ್ಲಿ ಪುರುಷರಿಗೆ ನೀಡುವ ಸೌಲಭ್ಯಗಳು ಮಹಿಳೆಯರಿಗೇಕಿಲ್ಲ?

ಕಿಯೋನಿಕ್ಸ್ ಎಂಡಿ ಲಂಚ: ವಿಚಾರಣೆ

“ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕರ ಸಂಗಪ್ಪ 300 ಕೋಟಿ ಹಣ ಬಿಡುಗಡೆ ಮಾಡಲು 38 ಲಕ್ಷ ಲಂಚ ಕೇಳುತ್ತಿರುವ ಕುರಿತು ಮಾತನಾಡಿ, “ಈ ಬಗ್ಗೆ ವಿಚಾರಣೆ ಮಾಡಲಾಗುವುದು. ತನಿಖೆ ನಡೆಸಿ, ಆರೋಪ ಸಾಬೀತಾದರೆ ಅವರ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದರು.

ದೇಗುಲದ ಆಚರಣೆಗಳನ್ನು ಜನ ನಂಬುತ್ತಾರೆ

ಹಾಸನಾಂಬ ದೇಗುಲದಲ್ಲಿ ಕೆಲವು ಮೌಢ್ಯಾಚರಣೆಗಳು ಇದ್ದು, ಸಿಎಂ ಭೇಟಿ ಇದಕ್ಕೆ ಪುಷ್ಟಿ ನೀಡಿದಂತಾಗುವುದಿಲ್ಲವೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, “ಕೆಲವು ಮೌಢ್ಯಗಳನ್ನು ಹಿಂದಿನಿಂದ ಆಚರಿಸಿಕೊಂಡು ಬರಲಾಗಿದೆ. ಸರ್ಕಾರ ಮೌಢ್ಯ ವಿರೋಧಿ ಕಾಯ್ದೆಯನ್ನೂ ಜಾರಿ ಮಾಡಿದೆ. ನಾನು ಪ್ರಜ್ಞಾಪೂರ್ವಕವಾಗಿ ಯಾವುದೇ ಮೌಢ್ಯಗಳನ್ನು ಪಾಲಿಸುವುದಿಲ್ಲ. ಆದರೆ ದೇವರಲ್ಲಿ ನಂಬಿಕೆ ಇರಿಸಿದ್ದೇನೆ” ಎಂದು ಹೇಳಿದರು.

7 ಗಂಟೆ ವಿದ್ಯುತ್ ಪೂರೈಕೆಗೆ ತೀರ್ಮಾನ 

ರಾಜ್ಯದಲ್ಲಿ ತಲೆದೋರಿರುವ ವಿದ್ಯುತ್ ಸಮಸ್ಯೆ ನಿವಾರಣೆ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ, “800 ಮೆಗಾ ವ್ಯಾಟ್ ನಷ್ಟು ಥರ್ಮಲ್ ವಿದ್ಯುತ್ ಅನ್ನು ಉತ್ಪಾದಿಸಲಾಗುತ್ತಿದೆ. ರಾಜ್ಯದಲ್ಲಿ ಉತ್ಪಾದನೆಯಾಗುವ ವಿದ್ಯುತ್ ರಾಜ್ಯದ ಬಳಕೆಗೆ ಲಭ್ಯವಾಗಬೇಕು ಎಂಬ ಆದೇಶ ಹೊರಡಿಸಲಾಗಿದೆ. ಸಕ್ಕರೆ ಕಾರ್ಖಾನೆಗಳ ಪ್ರಾರಂಭದಿಂದಾಗಿ ವಿದ್ಯುತ್ ಕೋಜನರೇಷನ್ ಸಾಧ್ಯವಾಗುತ್ತಿದ್ದು, ಸುಮಾರು 450 ಮೆ.ವ್ಯಾ ವಿದ್ಯುತ್ ಉತ್ಪಾದನೆಯಾಗುತ್ತದೆ. ಈ ಎಲ್ಲ ಕ್ರಮಗಳಿಂದ ಮೂರು ಫೇಸ್ ಗಳಲ್ಲಿ ಸತತ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ತೀರ್ಮಾನಿಸಲಾಗಿದೆ” ಎಂದರು.

ವೈದ್ಯಕೀಯ ಕಾಲೇಜು ನಿರ್ದೇಶಕರ ನೇಮಕಕ್ಕೆ ಕ್ರಮ

ಹಾಸನ ವೈದ್ಯಕೀಯ ಕಾಲೇಜಿನ ನಿರ್ದೇಶಕರ ರಾಜೀನಾಮೆಯಿಂದ ಖಾಲಿ ಹುದ್ದೆಗೆ ನೇಮಕಾತಿ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿರುವುದಿಲ್ಲ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪರಿಶೀಲಿಸಿ ಕೂಡಲೇ ಬೇರೆಯವರನ್ನು ಹುದ್ದೆಗೆ ನೇಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಂಗಳೂರು ಮಳೆ

ಬೆಂಗಳೂರಿನಲ್ಲಿ ಸಾಕಷ್ಟು ಮಳೆಯಾಗಿ ತೊಂದರೆಯಾಗಿರುವ ಬಗ್ಗೆ ಮಾತನಾಡಿ, ಸಾರ್ವಜನಿಕ ಆಸ್ತಿಪಾಸ್ತಿಗೆ ತೊಂದರೆಯಾಗಿಲ್ಲ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...