ದಿಟ್ಟ ಪ್ರಶ್ನೆ ಎದುರಾದಾಗ ಅಹಂಕಾರ ತೋರುವುದು ಸಿಎಂ ಸಿದ್ದರಾಮಯ್ಯ ಗುಣ: ಆರ್‌ ಅಶೋಕ್

Date:

ಅಸಮರ್ಥ ಸಿಎಂ ಸಿದ್ದರಾಮಯ್ಯ ನವರೇ, ಕಳೆದ ವರ್ಷ ಆಗಸ್ಟ್ ನಿಂದ ಮಾರ್ಚ್ 2024ರವರೆಗೆ ಬಾಕಿ ಉಳಿಸಿಕೊಂಡಿರುವ ₹1,087 ಕೋಟಿ ಪರಿಹಾರ ಧನವನ್ನು ರೈತರಿಗೆ ಯಾವಾಗ ಬಿಡುಗಡೆ ಮಾಡುತ್ತೀರಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಪ್ರಶ್ನಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಇದನ್ನಾದರೂ ನಿಮ್ಮ ರಾಜ್ಯ ಸರ್ಕಾರವೇ ಕೊಡಬೇಕು ಅಂತ ಒಪ್ಪಿಕೊಳ್ಳುತ್ತೀರೋ ಅಥವಾ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ತಮ್ಮ ಪೆದ್ದುತನ ಪ್ರದರ್ಶನ ಮಾಡುತ್ತೀರೋ?” ಎಂದು ವ್ಯಂಗ್ಯವಾಡಿದ್ದಾರೆ.

“ದಿಟ್ಟ ಪ್ರಶ್ನೆಗಳು ಎದುರಾದಾಗ ಅಹಂಕಾರದ ಮಾತುಗಳನ್ನಾಡಿ ವೈಯಕ್ತಿಕ ನಿಂದನೆ ಮಾಡುವುದು. ಜ್ವಲಂತ ಸಮಸ್ಯೆಗಳನ್ನು ಪರಿಹರಿಸದೆ ಜನರ ಗಮನ ಬೇರೆಡೆ ಸೆಳೆದು ದಿಕ್ಕು ತಪ್ಪಿಸುವುದು. ಮತ್ತೊಬ್ಬರ ಸಾಧನೆಯನ್ನು ತನ್ನದೆಂದು ಹೇಳಿಕೊಂಡು ತಿರುಗಾಡುವುದು. ಪುಕ್ಕಟೆ ಪ್ರಚಾರ ಪಡೆಯುವುದು. ನಾನೊಬ್ಬನೇ ಮಹಾ ಬುದ್ಧಿವಂತ ಎಂದು ಗರ್ವ ಪಡುವುದು. ಇವೆಲ್ಲವೂ ಸಿದ್ದರಾಮಯ್ಯರವರ ಐದು ಗ್ಯಾರಂಟಿ ಗುಣಗಳು” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮತ್ತೊಮ್ಮೆ ಎಚ್ಚರಿಕೆ ನೀಡುತ್ತಿದ್ದೇನೆ. ನಾಲ್ಕು ಅಹಂಕಾರದ ಮಾತುಗಳನ್ನಾಡಿದ ಮಾತ್ರಕ್ಕೆ ವಿಪಕ್ಷಗಳ ಬಾಯಿ ಮುಚ್ಚಿಸಬಹುದು ಎಂಬ ಭ್ರಮೆಯಿಂದ ಹೊರಗೆ ಬನ್ನಿ. ನಿಮ್ಮ ಅಹಂಕಾರದ, ದರ್ಪದ ಮಾತುಗಳು ನಿಮ್ಮ ಚಾರಿತ್ರ್ಯವನ್ನ ಪ್ರದರ್ಶನ ಮಾಡುತ್ತವೆಯೇ ಹೊರತು ಅದರಿಂದ ನನಗೆ ಯಾವುದೇ ನಷ್ಟವಿಲ್ಲ. ನಿಮ್ಮ ಅಹಂಕಾರದಿಂದ ನನ್ನ ದನಿ ಅಡಗಿಸಲೂ ಸಾಧ್ಯವಿಲ್ಲ.

ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತೆ ತಮ್ಮ ವೈಫಲ್ಯ, ದಡ್ಡತನವನ್ನ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಬಗ್ಗೆ ಯಾಕೆ ಟೀಕೆ ಮಾಡುತ್ತೀರಿ? ಏಪ್ರಿಲ್ 2004 ರಿಂದ ಏಪ್ರಿಲ್ 2014 ರವರೆಗೆ ಅಂದರೆ ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಗಳಿಗೆ 32% ತೆರಿಗೆ ಹಂಚಿಕೆ ಮಾಡುತ್ತಿತ್ತು. ಆದರೆ ಕಳೆದ ಹತ್ತು ವರ್ಷಗಳ ಎನ್ ಡಿಎ ಸರ್ಕಾರದಲ್ಲಿ, ಏಪ್ರಿಲ್ 2014 ರಿಂದ ಏಪ್ರಿಲ್ 2024, ರಾಜ್ಯಗಳಿಗೆ 42% ತೆರಿಗೆ ಹಂಚಿಕೆಯಾಗಿದೆ. ಅಂದರೆ ಯುಪಿಎ ಸರ್ಕಾರ 68% ತೆರಿಗೆ ಹಣವನ್ನ ಕೇಂದ್ರದ ಬಳಿಯೇ ಉಳಿಸಿಕೊಳ್ಳುತ್ತಿತ್ತು, ಮೋದಿ ಅವರ ಸರ್ಕಾರ ಕೇವಲ 58% ತೆರಿಗೆಯನ್ನ ಕೇಂದ್ರದ ಬಳಿ ಉಳಿಸಿಕೊಳ್ಳುತ್ತಿದೆ” ಎಂದಿದ್ದಾರೆ.

“ಕಳೆದ ಮೂರು ವರ್ಷಗಳ ಜಾಗತಿಕ ಇಂಧನ ಪ್ರಕ್ಷುಬ್ಧತೆಯ ಸಮಯದಲ್ಲಿ, ಪ್ರಧಾನಿ ಮೋದಿ ಅವರ ನೇತೃತ್ವದ NDA ಸರ್ಕಾರವು ಭಾರತದ ಕಚ್ಚಾ ತೈಲ ಖರೀದಿ ಮೂಲಗಳನ್ನು ಬೇರೆ ಬೇರೆ ದೇಶಗಳಿಗೆ ವಿಸ್ತರಿಸಿದ ಸಮಯೋಚಿತ ನಿರ್ಧಾರದ ಪರಿಣಾಮವಾಗಿ ಪೆಟ್ರೋಲ್ ಬೆಲೆಗಳು ಸುಮಾರು 14% ರಷ್ಟು ಕಡಿಮೆಯಾಗಿದೆ ಮತ್ತು ಡೀಸೆಲ್ ಬೆಲೆಗಳು ನವೆಂಬರ್ 2021-ಮೇ 2024 ರ ಅವಧಿಯಲ್ಲಿ ಸುಮಾರು 11% ರಷ್ಟು ಕಡಿಮೆಯಾಗಿದೆ. ಅದೇ ಅವಧಿಯಲ್ಲಿ, ಅಮೆರಿಕದಲ್ಲಿ ಪೆಟ್ರೋಲ್ ಬೆಲೆಗಳು 29% ರಷ್ಟು ಏರಿಕೆಯಾಗಿದೆ, ನೆರೆಯ ಪಾಕಿಸ್ತಾನ ಮತ್ತು ಶ್ರೀಲಂಕಾ ಜಾಗತಿಕ ಕಚ್ಚಾ ಬೆಲೆಗಳ ಏರಿಕೆಯಿಂದಾಗಿ ತೀವ್ರ ಆರ್ಥಿಕ ಒತ್ತಡವನ್ನು ಎದುರಿಸಿದವು. ಸದಾ ಚಿಲ್ಲರೆ ರಾಜಕಾರಣದಲ್ಲಿ ಕಾಲ ಕಳೆಯುವ ತಮಗೆ ಜಾಗತಿಕ ರಾಜಕೀಯ, ಜಾಗತಿಕ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅರಿವೂ ಇಲ್ಲ, ಅದನ್ನ ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ತಮಗಿಲ್ಲ. ತಮಗೆ ಅರ್ಥವಾಗದಿದ್ದರೆ ಸುಮ್ಮನಿದ್ದು ಬಿಡಿ. ತಮ್ಮ ಪೆದ್ದತನ ಪ್ರದರ್ಶನ ಮಾಡಿ ಇನ್ನಷ್ಟು ಸಣ್ಣವರಾಗಬೇಡಿ” ಎಂದು ಹೇಳಿದ್ದಾರೆ.

“ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರವು ನವೆಂಬರ್ 2021 ಮತ್ತು ಮೇ 2022ರಲ್ಲಿ ಎರಡು ಬಾರಿ ಅಬಕಾರಿ ಸುಂಕದಲ್ಲಿ ಗಣನೀಯ ಕಡಿತ ಮಾಡಿತ್ತು. ನವೆಂಬರ್ 2021ರಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಲೀಟರ್‌ಗೆ ₹5 ಮತ್ತು ₹10 ಕಡಿಮೆ ಮಾಡಿತ್ತು. ನಂತರ ಮೇ 2022 ರಲ್ಲಿ ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕ್ರಮವಾಗಿ ಲೀಟರ್‌ಗೆ ₹8 ಮತ್ತು ₹6 ರಷ್ಟು ಕಡಿತಗೊಳಿಸಲಾಯಿತು. ಇತ್ತೀಚೆಗೆ ಈ ವರ್ಷ ಮಾರ್ಚ್ 14 ರಂದು ತೈಲ ಕಂಪನಿಗಳು ಲೀಟರ್‌ಗೆ 2 ರೂಪಾಯಿ ಕಡಿಮೆ ಮಾಡಿವೆ” ಎಂದು ತಿಳಿಸಿದ್ದಾರೆ.

“15 ಬಜೆಟ್ ಮಂಡಿಸಿರುವ ಸ್ವಯಂ ಘೋಷಿತ ಆರ್ಥಿಕ ತಜ್ಞರಲ್ಲವೇ ತಾವು? ತಮ್ಮ ಪ್ರಕಾರ ತಾವು ಮಹಾ ಬುದ್ಧಿವಂತರಲ್ಲವೇ? ಹಾಗಾದರೆ ತಾವು ಮಾಡಿರುವ ಯಾವುದಾದರೂ ಒಂದೇ ಒಂದು ಸುಧಾರಣೆ ತೋರಿಸಿ. ರಾಜ್ಯದ ಜನ ತಮ್ಮನ್ನ, ತಮ್ಮ ಆಡಳಿತವನ್ನು ನೆನಪಿನಲ್ಲಿ ಇಟ್ಟುಕೊಳ್ಳಬಹುದಾದ ಯಾವುದಾದರೂ ಒಂದು ಗಣನೀಯ ಮೂಲಸೌಕರ್ಯ ಯೋಜನೆ, ಕೈಗಾರಿಕಾ ನೀತಿ ಸುಧಾರಣೆ, ಮಾನವ ಅಭಿವೃದ್ಧಿ ಸೂಚ್ಯಂಕ ಸುಧಾರಣೆ, ಯಾವುದಾದರೂ ಸಾಧನೆ ಇದೆಯೇ? ನಿಮ್ಮ ಯೋಗ್ಯತೆಗೆ ಯಾವುದೂ ಇಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಕರ್ನಾಟಕ ಕಂಡ ಅತ್ಯಂತ ಅಸಮರ್ಥ, ಪೆದ್ದ ಮುಖ್ಯಮಂತ್ರಿ ಅಂದರೆ ಅದು ತಾವೇ ಮಿಸ್ಟರ್ ಸಿದ್ದರಾಮಯ್ಯನವರೇ. ಇತಿಹಾಸ ನಿಮ್ಮನ್ನ ಕರೆಯುವುದು ಹೀಗೆ. ನೆನಪಿಡಿ” ಎಂದು ಕುಟುಕಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...