ಲೋಕಸಭೆ ಚುನಾವಣೆ| ಅರುಣಾಚಲ ಬಿಜೆಪಿ ನಾಯಕನನ್ನು ಅಪಹರಿಸಿದ ಬಂಡುಕೋರರು!

Date:

ಅರುಣಾಚಲ ಪ್ರದೇಶದಲ್ಲಿ ಬಂಡುಕೋರರು ಬಿಜೆಪಿ ನಾಯಕನನ್ನು ಅಪಹರಿಸಿದ ಘಟನೆ ನಡೆದಿದ್ದು, ಇದಾದ ಕೆಲವೇ ಗಂಟೆಗಳ ನಂತರ, “ಚುನಾವಣಾ ಪ್ರಕ್ರಿಯೆಯಲ್ಲಿ ಈ ರೀತಿ ಹಸ್ತಕ್ಷೇಪವನ್ನು ಸಹಿಸಲಾಗದು ಮತ್ತು ಅಂತಹ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಪವನ್ ಕುಮಾರ್ ಸೇನ್ ಹೇಳಿದ್ದಾರೆ.

ಅರುಣಾಚಲ ಪ್ರದೇಶದ ಲಾಂಗ್ಡಿಂಗ್ ಜಿಲ್ಲೆಯಲ್ಲಿ ಬಿಜೆಪಿ ನಾಯಕನನ್ನು ಬಂಡುಕೋರರು ಅಪಹರಿಸಿದ್ದು ಅದಾದ ಬಳಿಕ ಅರುಣಾಚಲ ಪೂರ್ವ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಅದೇ ಜಿಲ್ಲೆಯ ಮತ್ತೋರ್ವ ಚುನಾವಣಾ ಸ್ಪರ್ಧಿ ಬಂಡುಕೋರರ ಸಹಾಯ ಪಡೆದ ಆರೋಪದ ಬೆನ್ನಲ್ಲೇ ಮುಖ್ಯ ಚುನಾವಣಾ ಅಧಿಕಾರಿ ಈ ಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಚುಕು ಅಪಾ ಅವರು ಬಿಜೆಪಿ ನಾಯಕರನ್ನು ಬಂಡುಕೋರರು ಅಪಹರಿಸಿರುವುದನ್ನು ಒಪ್ಪಿಕೊಂಡಿದ್ದು, ಪ್ರಸ್ತುತ ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಈ ವ್ಯಕ್ತಿಯ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ನೈಜೀರಿಯಾ | ಮನೆಗೆ ಮರಳಿದ ಅಪಹರಣಕ್ಕೊಳಗಾಗಿದ್ದ 250 ಶಾಲಾ ಮಕ್ಕಳು

ಆದರೆ ಘಟನೆಯ ವಿವರ ನೀಡಲು ಐಜಿಪಿ ನಿರಾಕರಿಸಿದ್ದಾರೆ. ಈ ವಿಚಾರದಲ್ಲಿ ಲಾಂಗ್ಡಿಂಗ್ ಡೆಪ್ಯುಟಿ ಕಮಿಷನರ್ ಬೆಕಿರ್ ನ್ಯೋರಾಕ್ ಮತ್ತು ಪೊಲೀಸ್ ಅಧೀಕ್ಷಕ ಡೆಕಿಯೊ ಗುಮ್ಜಾ ಮಾತನಾಡಲು ನಿರಾಕರಿಸಿದ್ದಾರೆ ಎನ್‌ಡಿ ಟಿವಿ ವರದಿ ಮಾಡಿದೆ.

ಎರಡು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಈಶಾನ್ಯ ರಾಜ್ಯದಲ್ಲಿ ಏಪ್ರಿಲ್ 19 ರಂದು ಲೋಕಸಭೆ ಮತ್ತು 60 ವಿಧಾನಸಭೆ ಕ್ಷೇತ್ರಗಳ ಚುನಾವಣೆ ಏಕಕಾಲದಲ್ಲಿ ನಡೆಯಲಿದೆ. ಆದರೆ ಒಟ್ಟು 60 ರಲ್ಲಿ, ಆಡಳಿತಾರೂಢ ಬಿಜೆಪಿಯು ಈಗಾಗಲೇ ಹತ್ತು ಕ್ಷೇತ್ರದಲ್ಲಿ ಅವಿರೋಧವಾಗಿ ಗೆಲುವು ಪಡೆದಿದೆ.

ಘಟನೆಯ ಕುರಿತು ಚರ್ಚಿಸಲು ನಾವು ಇಂದು ಉನ್ನತ ಮಟ್ಟದ ಭದ್ರತಾ ಸಭೆಯನ್ನು ಕರೆದಿದ್ದೇವೆ ಮತ್ತು ಯಾವುದೇ ಭೂಗತ ಗುಂಪುಗಳಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪವಾಗದಂತೆ ನೋಡಿಕೊಳ್ಳಲು ಲಾಂಗ್ಡಿಂಗ್ ಮತ್ತು ತಿರಾಪ್ ಉಪ ಆಯುಕ್ತರಿಗೆ ಸೂಚಿಸಲಾಗಿದೆ. ಭದ್ರತೆಯನ್ನು ಹೆಚ್ಚಿಸಲು ಅಸ್ಸಾಂ ರೈಫಲ್ಸ್ ಮತ್ತು ಇತರ ಅರೆಸೇನಾ ಪಡೆಗಳಿಗೆ ತಿಳಿಸಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಪವನ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇದನ್ನು ಓದಿದ್ದೀರಾ?  ಬೆಂಗಳೂರು | ಪದೇಪದೆ ಡ್ರಗ್ಸ್‌ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಅಪಹರಣ: ಆರೋಪಿಗಳ ಬಂಧನ

ನಾಗಾ ದಂಗೆಕೋರರು ಮೂರು ಪೂರ್ವ ಜಿಲ್ಲೆಗಳಾದ ತಿರಾಪ್, ಚಾಂಗ್ಲಾಂಗ್ ಮತ್ತು ಲಾಂಗ್ಡಿಂಗ್‌ಗಳಲ್ಲಿ ಸಕ್ರಿಯರಾಗಿದ್ದಾರೆ. ಅಪಹರಣ, ಸುಲಿಗೆ ಮತ್ತು ಇತರ ಸಮಾಜವಿರೋಧಿ ಚಟುವಟಿಕೆ ನಡೆಸುತ್ತಾರೆ. ಕಳೆದ ಕೆಲವು ವರ್ಷಗಳಲ್ಲಿ, ಈ ಪ್ರದೇಶದಲ್ಲಿ ವಿವಿಧ ದಂಗೆಕೋರ ಗುಂಪುಗಳ ಹಲವಾರು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಲಾಂಗ್‌ಡಿಂಗ್‌ನಲ್ಲಿ ಅಭ್ಯರ್ಥಿಯೊಬ್ಬರು ಬಂಡಾಯಗಾರರನ್ನು ಬಳಸುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಮಾತನಾಡಿದ ಪವನ್ ಕುಮಾರ್ ಸೇನ್ ಯಾವುದೇ ಅಭ್ಯರ್ಥಿಯು ಅಂತಹ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದರೆ, ಚುನಾವಣಾ ಆಯೋಗವು ಅವರನ್ನು ಅನರ್ಹಗೊಳಿಸುತ್ತದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...