ದೇಶ ಕಂಡ ಅತೀ ಭ್ರಷ್ಟ ಪ್ರಧಾನಿ ಮೋದಿ; ಕೇಜ್ರಿವಾಲ್‌ ವಾಗ್ದಾಳಿ

Date:

  • ಪ್ರಧಾನಿ ಮೋದಿ ನಾಯಕತ್ವದಲ್ಲಿ ದೇಶವನ್ನು ನಾಶಗೊಳಿಸಲಾಗುತ್ತಿದೆ ಎಂದ ದೆಹಲಿ ಸಿಎಂ
  • ಬಿಜೆಪಿಯಿಂದ ಹೊರಬಂದು ದೇಶವನ್ನು ರಕ್ಷಿಸಿ ಎಂದು ಕರೆಕೊಟ್ಟ ಅರವಿಂದ್‌ ಕೇಜ್ರಿವಾಲ್

ದೇಶದ ಇತಿಹಾಸದಲ್ಲೇ ಅತೀ ಭ್ರಷ್ಟ ಹಾಗೂ ಕಡಿಮೆ ಶಿಕ್ಷಣ ಹೊಂದಿರುವ ಪ್ರಧಾನಿಯನ್ನು ತಾವು ಇದುವರೆಗೂ ಕಂಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದರ ಕುರಿತು ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, “ದೇಶ ಕಂಡ ಅತೀ ಭ್ರಷ್ಟ ಪ್ರಧಾನಿ ನರೇಂದ್ರ ಮೋದಿ. ಅಹಂಕಾರ ಅವರ ತಲೆಯ ಮೇಲೆ ಕೂತಿದೆ. 12ನೇ ತರಗತಿ ಪಾಸ್ ಆದ ವ್ಯಕ್ತಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರಾಹುಲ್‌ ಅವರನ್ನು ಅನರ್ಹಗೊಳಿಸಿರುವುದರಿಂದ ಕಾಂಗ್ರೆಸ್ ಮಾತ್ರ ಹೋರಾಟ ಮಾಡಬೇಕಿಲ್ಲ. ಇದು ಪ್ರತಿಯೊಬ್ಬರ ಹೋರಾಟವಾಗಿದೆ. ಹೀಗಾಗಿ ಎಲ್ಲರೂ ಜೊತೆಯಾಗಿ ಪ್ರತಿಭಟಿಸಬೇಕು. ಓದು ಬರಹ ಇಲ್ಲದ ಪ್ರಧಾನಿಯಿಂದ ದೇಶವನ್ನು ರಕ್ಷಿಸುವ ಹೋರಾಟವಾಗಿದೆ. ಪ್ರಧಾನಿ ಪದವಿಗೆ ಮೋದಿ ಅಪಮಾನ ಮಾಡಿದ್ದಾರೆ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ಮೋದಿ ನಾಯಕತ್ವದಲ್ಲಿ ದೇಶವನ್ನು ನಾಶಗೊಳಿಸಲಾಗುತ್ತಿದೆ. ದೇಶವನ್ನು ಹಾಳು ಮಾಡಲು ಇಚ್ಚಿಸುವವರು ಬಿಜೆಪಿಯಲ್ಲಿರಿ. ದೇಶವನ್ನು ರಕ್ಷಿಸುವವರು ಬಿಜೆಪಿಯಿಂದ ಹೊರಬನ್ನಿ. ರಾಷ್ಟ್ರವನ್ನು ಉಳಿಸಬೇಕಿದ್ದರೆ ಪಕ್ಷ ತೊರೆಯಿರಿ” ಎಂದು ಕಮಲ ನಾಯಕರಿಗೆ ಕರೆ ನೀಡಿದರು.  

“ಭಾರತ ಅಪಾಯದಲ್ಲಿದೆ. ಅಪಾಯದ ಸಂಚಿನಿಂದ ಪಾರು ಮಾಡಲು ರಾಷ್ಟ್ರದ 130 ಕೋಟಿ ಜನತೆ ಮುಂದೆ ಬರಬೇಕು. ಯಾವ ಪಕ್ಷ ಅಧಿಕಾರಕ್ಕೆ ಬಂದರೂ ಚಿಂತೆಯಿಲ್ಲ. ಆದರೆ ನಮ್ಮ ಪ್ರಜಾಪ್ರಭುತ್ವದ ಮೇಲಿನ ದಾಳಿ ಮತ್ತು ಅದಕ್ಕೆ ಕಳಂಕ ತರುತ್ತಿರುವುದು ಗಂಭಿರವಾದ ಬೆಳವಣಿಗೆ” ಎಂದು ಆತಂಕ ವ್ಯಕ್ತಪಡಿಸಿದರು.

ರಾಹುಲ್‌ ಗಾಂಧಿಯವರನ್ನು ಅನರ್ಹಗೊಳಿಸಿದ ಕೇಂದ್ರ ಸರ್ಕಾರದ ಪ್ರಜಾಸತ್ತಾತ್ಮಕ ವಿರೋಧಿ ನಡೆಯನ್ನು ವಿಪಕ್ಷಗಳು ಖಂಡಿಸಿದ್ದು, ದೇಶಾದ್ಯಂತ ಪ್ರತಿಭಟನೆಗೆ ಮುಂದಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...