ಆಂತರಿಕ ಸಂಘರ್ಷ: ಆಶ್ರಯಕ್ಕಾಗಿ ಭಾರತದೊಳಗೆ ಕಾಲಿಟ್ಟ 600ಕ್ಕೂ ಹೆಚ್ಚು ಮಯನ್ಮಾರ್‌ ಸೈನಿಕರು!

Date:

ಮಯನ್ಮಾರ್‌ನಲ್ಲಿ ಬಂಡುಕೋರ ಪಡೆಗಳು ಮತ್ತು ಜುಂಟಾ ಆಡಳಿತದ ನಡುವೆ ಆಂತರಿಕ ಸಂಘರ್ಷ ನಡೆಯುತ್ತಿದೆ. ಇದರ ನಡುವೆಯೇ ಸುಮಾರು 600ಕ್ಕೂ ಹೆಚ್ಚು ಮಯನ್ಮಾರ್‌ ಸೈನಿಕರು ಭಾರತಕ್ಕೆ ಕಾಲಿಟ್ಟು, ಆಶ್ರಯ ಕೋರಿರುವುದಾಗಿ ವರದಿಯಾಗಿದೆ.

ಮಯನ್ಮಾರ್‌ನೊಂದಿಗೆ ಗಡಿ ಹಂಚಿಕೊಂಡಿರುವ ಭಾರತದ ರಾಜ್ಯವಾಗಿರುವ ಮಿಝೋರಾಂನ ಕೆಲವು ಪ್ರದೇಶಗಳ ಮೂಲಕ ಸೈನಿಕರು ಪ್ರವೇಶಿಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

ಭಾರತ-ಮಯನ್ಮಾರ್‌-ಬಾಂಗ್ಲಾದೇಶದ ಗಡಿ ಭಾಗದ ಜಂಕ್ಷನ್‌ ಎಂದು ಗುರುತಿಸಲಾಗಿರುವ ಮಿಜೋರಾಂನ ಬಂಡುಕ್ಬಂಗಾ ಗ್ರಾಮದೊಳಗೆ ಬುಧವಾರ ಮಧ್ಯಾಹ್ನ ಕನಿಷ್ಠ 276 ಮಯನ್ಮಾರ್‌ ಸೇನೆಯ ಸಿಬ್ಬಂದಿಗಳು ಭಾರತದ ಭೂಪ್ರದೇಶದೊಳಗೆ ಪ್ರವೇಶಿಸುತ್ತಿರುವ ದೃಶ್ಯವು ಹರಿದಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಮಿಝೋರಾಂ ಸರ್ಕಾರವು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದು, ಈ ಬಗ್ಗೆ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಎಚ್ಚರಿಸಿದೆ. ನೆರೆಯ ರಾಷ್ಟ್ರದ ಸೈನಿಕರನ್ನು ಹಿಂದಕ್ಕೆ ಕಳುಹಿಸುವ ಬಗ್ಗೆ ತ್ವರಿತವಾಗಿ ಖಚಿತಪಡಿಸಿ ಎಂದು ಒತ್ತಾಯಿಸಿದೆ.

ಮಯನ್ಮಾರ್‌ನಲ್ಲಿ ತೀವ್ರ ಘರ್ಷಣೆಯ ನಡುವೆ ಸುಮಾರು 600 ಮ್ಯಾನ್ಮಾರ್ ಸೇನೆಯ ಸೈನಿಕರು ಭಾರತವನ್ನು ದಾಟಿದ್ದಾರೆ. ಪಶ್ಚಿಮ ಮಯನ್ಮಾರ್‌ ರಾಜ್ಯದ ರಾಖೈನ್‌ನಲ್ಲಿ ಜನಾಂಗೀಯ ಸಶಸ್ತ್ರ ಗುಂಪು ಅರಕನ್ ಆರ್ಮಿ (ಎಎ) ಉಗ್ರಗಾಮಿಗಳು ತಮ್ಮ ಶಿಬಿರಗಳನ್ನು ವಶಪಡಿಸಿಕೊಂಡ ನಂತರ ಸೈನಿಕರು ಭಾರತದೊಳಗೆ ಬಂದಿದ್ದು, ಸೈನಿಕರು ಅಸ್ಸಾಂ ರೈಫಲ್ಸ್ ಶಿಬಿರದಲ್ಲಿ ಆಶ್ರಯ ಪಡೆದಿದ್ದಾರೆ ಎಂದು ವರದಿಯಾಗಿದೆ.

ಈ ಬೆಳವಣಿಗೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತುರ್ತು ಮಾತುಕತೆ ನಡೆಸುವಂತೆ ಮಿಝೋರಾಂ ಮುಖ್ಯಮಂತ್ರಿ ಲಾಲ್ದುಹೋಮ ಆಗ್ರಹಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಿಝೋರಾಂ ಮುಖ್ಯಮಂತ್ರಿ ಲಾಲ್ದುಹೋಮ, “ಜನರು ಆಶ್ರಯಕ್ಕಾಗಿ ಮಯನ್ಮಾರ್‌ನಿಂದ ನಮ್ಮ ದೇಶಕ್ಕೆ ಪಲಾಯನ ಮಾಡುತ್ತಿದ್ದಾರೆ. ನಾವು ಅವರಿಗೆ ಮಾನವೀಯ ಆಧಾರದ ಮೇಲೆ ಸಹಾಯ ಮಾಡುತ್ತಿದ್ದೇವೆ. ಮಯನ್ಮಾರ್ ಸೈನಿಕರು ಕೂಡ ಬರುತ್ತಲೇ ಇದ್ದು, ಆಶ್ರಯ ಪಡೆಯುತ್ತಿದ್ದಾರೆ. ಸುಮಾರು 450 ಸೇನಾ ಸಿಬ್ಬಂದಿಯನ್ನು ವಾಪಸ್ ಕಳುಹಿಸಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...