ವಿಧಾನಸಭೆ ಉಪಚುನಾವಣೆ | ನಿಲಂಬೂರ್‌ ಯುಡಿಎಫ್ ತೆಕ್ಕೆಗೆ, ಗುಜರಾತ್‌ನ ವಿಸಾವದರ್‌ನಲ್ಲಿ ಎಎಪಿಗೆ ಗೆಲುವು

Date:

ದೇಶದ ಐದು ವಿಧಾನಸಭೆ ಕ್ಷೇತ್ರಗಳಾದ ಲುಧಿಯಾನ ಪಶ್ಚಿಮ (ಪಂಜಾಬ್), ನೀಲಂಬೂರ್ (ಕೇರಳ), ಕಾಳಿಗಂಜ್ (ಪಶ್ಚಿಮ ಬಂಗಾಳ), ಮತ್ತು ವಿಸಾವದರ್‌ ಮತ್ತು ಕಾಡಿ(ಗುಜರಾತ್)ಗಳಲ್ಲಿ ನಡೆದ ವಿಧಾನಸಭೆ ಉಪಚುನಾವಣೆಗಳ ಮತ ಎಣಿಕೆ ಮುಗಿದಿದೆ. ಬಿಜೆಪಿ, ಕಾಂಗ್ರೆಸ್, ಎಎಪಿ ಸೇರಿದಂತೆ ಪ್ರಮುಖ ಪಕ್ಷಗಳು ಪರಸ್ಪರ ತೀವ್ರ ಪೈಪೋಟಿ ನೀಡಿ ಗೆಲುವು ಬಾಚಿಕೊಂಡಿದೆ.

ನೀಲಂಬೂರ್‌ ಎಲ್‌ಡಿಎಫ್‌ ತೆಕ್ಕೆಯಿಂದ ಯುಡಿಎಫ್‌ ತೆಕ್ಕೆಗೆ ಜಾರಿದೆ. ಪಂಜಾಬ್‌ನ ಲುಧಿಯಾನ ಮತ್ತು ಗುಜರಾತ್‌ನ ವಿಸಾವದರ್‌ ಎಎಪಿ ಪಾಲಾಗಿದೆ. ಗುಜರಾತ್‌ನಲ್ಲಿ ಒಂದು ಸ್ಥಾನ ಮಾತ್ರ ಬಿಜೆಪಿ ಉಳಿಸಿಕೊಂಡರೆ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೆಲುವು ಪಡೆದಿದೆ.

ಇದನ್ನು ಓದಿದ್ದೀರಾ? ವಿಧಾನ ಪರಿಷತ್ | ಜೂನ್‌ 30ರಂದು ಉಪಚುನಾವಣೆ; ಅಂದೇ ಫಲಿತಾಂಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಲಂಬೂರ್ ಉಪಚುನಾವಣೆ ಫಲಿತಾಂಶ

ನಿಲಂಬೂರ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್ಯದನ್ ಶೌಕತ್ ಗೆಲುವು ಕಂಡಿದ್ದು ಸಿಪಿಐ(ಎಂ)ನ ಎಂ ಸ್ವರಾಜ್ ಅವರನ್ನು 11,077 ಮತಗಳಿಂದ ಸೋಲಿಸಿದ್ದಾರೆ. ಈ ವರ್ಷದ ಜನವರಿವರೆಗೆ ನಿಲಂಬೂರ್ ಶಾಸಕರಾಗಿದ್ದ ಸ್ವತಂತ್ರ ಅಭ್ಯರ್ಥಿ ಪಿವಿ ಅನ್ವರ್ 19,946 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ. ಅನ್ವರ್ ಅವರು ಸಿಪಿಐಎಂಗೆ ರಾಜೀನಾಮೆ ನೀಡಿದ ಬಳಿಕ ಈ ಶಾಸಕ ಸ್ಥಾನ ತೆರವಾಗಿತ್ತು. ಜೂನ್ 19 ರಂದು ಉಪಚುನಾವಣೆ ನಡೆದಿದ್ದು, ಶೇಕಡ 73.26ರಷ್ಟು ಮತದಾನವಾಗಿತ್ತು.

ಲುಧಿಯಾನ ಪಶ್ಚಿಮ ವಿಧಾನಸಭಾ ಉಪಚುನಾವಣೆ

ಪಂಜಾಬ್‌ನ ಲುಧಿಯಾನ ಪಶ್ಚಿಮ ವಿಧಾನಸಭಾ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಂಜೀವ್ ಅರೋರಾ 10,000ಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಕಾಂಗ್ರೆಸ್‌ನ ಭರತ್ ಭೂಷಣ್ ಅಂಶು 24,542 ಮತಗಳನ್ನು ಪಡೆದಿದ್ದರೆ, ಅರೋರಾ 35,179 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ ಜೀವನ್ ಗುಪ್ತಾ 20,323 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಶಿರೋಮಣಿ ಅಕಾಲಿ ದಳದ ವಕೀಲ ಪೌರ್ಪ್ಕರ್ ಸಿಂಗ್ ಕೇವಲ 8,203 ಮತಗಳನ್ನು ಪಡೆದಿದ್ದಾರೆ.

ಗುಜರಾತ್‌ನ ಕಾಡಿ, ವಿಸಾವದರ್

ಗುಜರಾತ್‌ನ ಕಾಡಿ ಮತ್ತು ವಿಸಾವದರ್ ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಕಾಡಿಯಲ್ಲಿ, ಬಿಜೆಪಿಯ ರಾಜೇಂದ್ರ ಚಾವ್ಡಾ ಅವರು ಕಾಂಗ್ರೆಸ್‌ನ ರಮೇಶ್ ಚಾವ್ಡಾ ಮತ್ತು ಎಎಪಿಯ ಜಗದೀಶ್ ಚಾವ್ಡಾ ಅವರನ್ನು ಸೋಲಿಸಿದ್ದಾರೆ. ಬಿಜೆಪಿ ಶಾಸಕ ಕರ್ಸನ್‌ಭಾಯ್ ಸೋಲಂಕಿ ಅವರ ಮರಣದ ನಂತರ ಈ ಸ್ಥಾನ ತೆರವಾಗಿತ್ತು.

ವಿಸಾವದರ್‌ನಲ್ಲಿ, ಎಎಪಿಯ ಗೋಪಾಲ್ ಇಟಾಲಿಯಾ 75,942 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಬಿಜೆಪಿಯ ಕಿರಿತ್ ಪಟೇಲ್ ಮತ್ತು ಕಾಂಗ್ರೆಸ್‌ನ ನಿತಿನ್ ರಣಪರಿಯಾ ಅವರನ್ನು ಇಟಾಲಿಯಾ ಸೋಲಿಸಿದ್ದಾರೆ. ಜೂನ್ 19ರಂದು ಚುನಾವಣೆ ನಡೆದಿದ್ದು, ವಿಸಾವದರ್‌ನಲ್ಲಿ ಶೇಕಡ 56.89, ಕಾಡಿಯಲ್ಲಿ ಶೇಕಡ 57.90ರಷ್ಟು ಮತದಾನವಾಗಿದೆ.

ಕಾಲಿಗಂಜ್‌ನಲ್ಲಿ ಯಾರಿಗೆ ಗೆಲುವು?

ತೃಣಮೂಲ ಕಾಂಗ್ರೆಸ್‌ನ ಅಲಿಫಾ ಅಹ್ಮದ್ ಅವರು ಪಶ್ಚಿಮ ಬಂಗಾಳದ ಕಾಲಿಗಂಜ್‌ನಲ್ಲಿ ಗೆದ್ದಿದೆ. 23ನೇ ಸುತ್ತಿನಲ್ಲಿ 50,000ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಬಿಜೆಪಿಯ ಆಶಿಶ್ ಘೋಷ್ ವಿರುದ್ಧ ಅಲಿಫಾ ಸ್ಪರ್ಧಿಸಿದ್ದರು. ಜೂನ್ 19ರಂದು ನಡೆದ ಉಪಚುನಾವಣೆಯಲ್ಲಿ ಶೇ. 69.85 ರಷ್ಟು ಮತದಾನವಾಗಿದೆ. ಈ ವರ್ಷದ ಫೆಬ್ರವರಿಯಲ್ಲಿ ಟಿಎಂಸಿ ಶಾಸಕ ನಾಸಿರುದ್ದೀನ್ ಅಹಮದ್ ಅವರು ನಿಧನರಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿದೆ. ನಾಸಿರುದ್ದೀನ್ ಅಹಮದ್ ಅವರ ಪುತ್ರಿ ಅಲಿಫಾ ಅಹಮದ್ ಅವರನ್ನು ಕಣಕ್ಕಿಳಿಸಿದ ಟಿಎಂಸಿ ಕಾಲಿಗಂಜ್‌ ಕ್ಷೇತ್ರವನ್ನು ತನ್ನ ತೆಕ್ಕೆಯಲ್ಲೇ ಉಳಿಸಿಕೊಂಡಿದೆ. ಬಿಜೆಪಿ ಆಶಿಸ್ ಘೋಷ್ ಅವರನ್ನು ಕಣಕ್ಕಿಳಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಕಬಿಲ್ ಉದ್ದೀನ್ ಶೇಖ್ ಸಿಪಿಐ (ಎಂ) ಬೆಂಬಲದೊಂದಿಗೆ ಸ್ಪರ್ಧಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...