ಬಜೆಟ್ ಅಧಿವೇಶನ | ಕೇಂದ್ರದ ತೆರಿಗೆ ತಾರತಮ್ಯ ಖಂಡಿಸಿ ನಿರ್ಣಯ ಮಂಡಿಸಿದ ರಾಜ್ಯ ಸರ್ಕಾರ; ಬಿಜೆಪಿ ಧರಣಿ

Date:

ಕೇಂದ್ರ ಸರ್ಕಾರವು ಕರ್ನಾಟಕದ ತೆರಿಗೆ ಪಾಲನ್ನು ನೀಡುವುದರಲ್ಲಿ ತಾರತಮ್ಯ ಎಸಗಿರುವುದನ್ನು ಖಂಡಿಸಿ ವಿಧಾನಸಭೆಯಲ್ಲಿ ಗುರುವಾರ ರಾಜ್ಯ ಸರ್ಕಾರ ಖಂಡನಾ ನಿರ್ಣಯ ಅಂಗೀಕರಿಸಿತು.

ಕಾನೂನು ಸಚಿವ ಹೆಚ್ ಕೆ ಪಾಟೀಲ್ ಅವರು ತೆರಿಗೆ ತಾರತಮ್ಯದ ವಿರುದ್ಧ ನಿರ್ಣಯ ಮಂಡಿಸಿ, “ರಾಜ್ಯಕ್ಕೆ ಸಮ ಪ್ರಮಾಣದಲ್ಲಿ ತೆರಿಗೆಯ ಪಾಲು ನೀಡದೆ ಕೇಂದ್ರ ಸರ್ಕಾರವು ಅನ್ಯಾಯ ಎಸಗುತ್ತಿದೆ. ಇದು ರಾಜ್ಯದ ಜನರಿಗೆ ಮಾಡಿದ ಅನ್ಯಾಯ. ತೆರಿಗೆಯಲ್ಲಿ ಪಾಲು ನೀಡದೆ ರಾಜ್ಯದ ಅಭಿವೃದ್ಧಿಯಲ್ಲಿ ಕುಂಠಿತವಾಗಿದೆ. ಇದನ್ನು ವಿರೋಧಿಸಿ ರಾಜ್ಯದ ನಾಗರಿಕರ ಪರವಾಗಿ ಈ ನಿರ್ಣಯ ತೆಗೆದುಕೊಂಡಿದ್ದೇವೆ” ಎಂದು ಅಂಕಿಅಂಶ ಸಮೇತ ಸದನಕ್ಕೆ ತಿಳಿಸಿದರು.

ಸಚಿವರು ನಿರ್ಣಯ ಮಂಡಿಸುತ್ತಿದ್ದಂತೆಯೇ ಒಮ್ಮೆಲೆ ಆಘಾತಕ್ಕೊಳಗಾದ ವಿಪಕ್ಷ ಬಿಜೆಪಿಯ ನಾಯಕರು, ಪ್ರತಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಸದನದ ಬಾವಿಗಿಳಿದು ಧರಣಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದಿನ ಕಲಾಪದ ಅಜೆಂಡಾದಲ್ಲಿ ಉಲ್ಲೇಖಿಸದೆ ಈ ನಿರ್ಣಯ ಅಂಗೀಕರಿಸಲಾಗಿದೆ. ಕೇಂದ್ರ ಸರ್ಕಾರದ ಮೇಲೆ ರಾಜ್ಯ ಸರ್ಕಾರವು ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ. ಇದು ಹೇಡಿಗಳ ಸರ್ಕಾರ. ಸಿದ್ದರಾಮಯ್ಯನವರು ವಿಷ ಕಾರುತ್ತಿರುವ ಮನಸ್ಥಿತಿ ಇದು” ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಏರುಧ್ವನಿಯಲ್ಲಿ ಗದ್ದಲ ಎಬ್ಬಿಸಿದರು.

ಈ ನಡುವೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಗದಗಳನ್ನು ಹರಿದೆಸೆದು ಆಕ್ರೋಶ ಹೊರಹಾಕಿದರು. ಬಿಜೆಪಿಯವರ ಗದ್ದಲದ ನಡುವೆಯೇ ಸಭಾಧ್ಯಕ್ಷ ಯು ಟಿ ಖಾದರ್ ಅವರು ನಿರ್ಣಯವನ್ನು ಅಂಗೀಕರಿಸಿದರು.

ಇದಲ್ಲದೇ, ಕೇಂದ್ರ ಸರ್ಕಾರವು ರೈತರ ಎಲ್ಲ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಸದನದಲ್ಲಿ ಸರ್ಕಾರ ನಿರ್ಣಯ ಅಂಗೀಕರಿಸಿದೆ.

ರೈತರ ಎಲ್ಲ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರ ಸರಕಾರ ಶಾಸನ ರೂಪಿಸುವಂತೆ ಈ ಸದನ ಒಕ್ಕೂರಲಿನಿಂದ ಒತ್ತಾಯಿಸುತ್ತದೆ. ರೈತರೊಂದಿಗೆ ಸಂಘರ್ಷದ ಹಾದಿ ತುಳಿಯದೇ ಅತ್ಯಂತ ನ್ಯಾಯಯುತವಾದ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಈ ಸದನ ಒತ್ತಾಯಿಸುವುದಾಗಿ ಸರ್ಕಾರ ನಿರ್ಣಯ ಅಂಗೀಕರಿಸುವ ವೇಳೆ ತಿಳಿಸಿದೆ.

ಇದನ್ನು ಓದಿದ್ದೀರಾ? ಕಾಂಗ್ರೆಸ್‌ಗೆ ಮರಳಿದ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ

ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ಸ್ಪೀಕರ್ ಯುಟಿ ಖಾದರ್ ಸದನವನ್ನು ಹತ್ತು ನಿಮಿಷಗಳ ಕಾಲ ಮುಂದೂಡಿದರು. 10 ನಿಮಿಷಗಳ ಬಳಿಕ ಆರಂಭಗೊಂಡರೂ ಕೂಡ ಸದನದಲ್ಲಿ ವಿಪಕ್ಷಗಳು ಬಾರದಿರುವುದರಿಂದ ಸದನ ನಡೆಸುವುದು ಸೂಕ್ತವಲ್ಲ ಎಂದು ಕಂದಾಯ ಸಚಿವ ಅಭಿಪ್ರಾಯ ತಿಳಿಸಿದ್ದರಿಂದ, ವಿಧಾನ ಸಭಾಧ್ಯಕ್ಷ ಯುಟಿ ಖಾದರ್ ಸದನವನ್ನು ನಾಳೆ (ಫೆ.23) ಬೆಳಗ್ಗೆ 9.30ಕ್ಕೆ ಮುಂದೂಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...