ನೀರಿನ ಬಿಕ್ಕಟ್ಟಿನ ಕುರಿತ ಚರ್ಚೆಗಾಗಿ ದೆಹಲಿ ಗವರ್ನರ್ ಸಮಯ ಕೋರಿದ ಅತಿಶಿ

Date:

ರಾಷ್ಟ್ರ ರಾಜಧಾನಿ ದೆಹಲಿ ಕುಡಿಯುವ ನೀರಿನ ಮೂಲಗಳಲ್ಲಿ ಒಂದಾದ ಮುನಕ್ ಕಾಲುವೆಗೆ ಹರಿಯಾಣ ‘ಅಸಮರ್ಪಕ’ವಾಗಿ ನೀರು ಹರಿಸುತ್ತಿದ್ದು, ದೆಹಲಿಯಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಈ ಬಗ್ಗೆ ಚರ್ಚಿಸಲು ತುರ್ತು ಸಭೆಗೆ ಸಮಯ ಕೋರಿ ದೆಹಲಿ ರಾಜ್ಯ ಜಲ ಸಚಿವೆ ಅತಿಶಿ ಅವರು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರಿಗೆ ಮನವಿ ಮಾಡಿದ್ದಾರೆ.

ನೀರಿನ ಸಮಸ್ಯೆ ಮತ್ತು ಗರ್ವರ್ನರ್‌ರಿಂದ ಸಮಯ ಕೋರಿರುವ ಬಗ್ಗೆ ಅತಿಶಿ ಟ್ವೀಟ್ ಮಾಡಿದ್ದಾರೆ. “ದೆಹಲಿಗೆ ನೀರಿನ ಪೂರೈಕೆಗಾಗಿ ಮುನಕ್ ಕಾಲುವೆಯಿಂದ ದಿನನಿತ್ಯ 1,050 ಕ್ಯೂಸೆಕ್ ನೀರನ್ನು ಪಡೆಯಬೇಕಾಗಿತ್ತು. ಆದರೆ, ಹರಿಣಾಮವು ಕಾಲುವೆಗೆ ಕೇವಲ 840 ಕ್ಯೂಸೆಕ್‌ ನೀರನ್ನು ಹರಿಸುತ್ತಿದೆ” ಎಂದು ಹೇಳಿದ್ದಾರೆ.

“ಹರಿಯಾಣ ಸರ್ಕಾರವು ಮುನಕ್ ಕಾಲುವೆಗೆ ಅಸಮರ್ಪಕವಾಗಿ ನೀರು ಹರಿಸುತ್ತಿರುವ ಬಗ್ಗೆ ತಿಳಿಸಲು ತುರ್ತು ಸಭೆಗೆ ಗವರ್ನರ್‌ ಅವರಲ್ಲಿ ಸಮಯ ಕೋರಿದ್ದೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುನಕ್ ಕಾಲುವೆಯಿಂದ ಸಿಎಲ್‌ಸಿ ಮತ್ತು ಡಿಎಸ್‌ಬಿ ಉಪಕಾಲುವೆಗಳ ಮೂಲಕ ದೆಹಲಿಗೆ 1050 ಕ್ಯೂಸೆಕ್ ನೀರು ಬರಬೇಕಿದೆ. ಆದರೆ, ಕೇವಲ 840 ಕ್ಯೂಸೆಕ್‌ ನೀರು ದೊರೆಯುತ್ತಿದೆ. 7 ನೀರು ಸಂಸ್ಕರಣಾ ಘಟಕಗಳು ಈ ನೀರನ್ನೇ ಅವಲಂಬಿಸಿವೆ. ನೀರಿನ ಪ್ರಮಾಣ ಹೆಚ್ಚಾಗದಿದ್ದರೆ ಒಂದೆರಡು ದಿನಗಳಲ್ಲೇ ದೆಹಲಿಯಾದ್ಯಂತ ನೀರಿನ ಪರಿಸ್ಥಿತಿ ಹದಗೆಡುತ್ತದೆ” ಎಂದು ಅವರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

 

“ಏರುತ್ತಿರುವ ತಾಪಮಾನದ ನಡುವೆ, ದೆಹಲಿಯು ನೀರಿನ ಕೊರತೆ ಎದುರಿಸುತ್ತಿದೆ. ಗವರ್ನರ್‌ ಅವರು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿದ್ದಾರೆ. ಅವರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಪರಿಹರಿಸಲು ವಿನಂತಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...