ಸಂಸತ್‌ನೊಳಗೆ ದಾಳಿ | ಗೃಹ ಸಚಿವ ಅಮಿತ್ ಶಾ ಹೊಣೆ ಹೊರಬೇಕು: ಬಿ ಕೆ ಹರಿಪ್ರಸಾದ್

Date:

ಸಂಸತ್‌ ಭವನದೊಳಗೆ ಆಗುಂತಕರಿಂದ ದಾಳಿ ನಡೆದಿದ್ದು, ಲೋಕಸಭೆ ಭದ್ರತಾ ವೈಫಲ್ಯದ ಹೊಣೆಯನ್ನು ಗೃಹ ಸಚಿವ ಅಮಿತ್ ಶಾ ಹೊರಬೇಕು ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿ ಕೆ‌ ಹರಿಪ್ರಸಾದ್ ಆಗ್ರಹಿಸಿದರು.

ಲೋಕಸಭೆಯಲ್ಲಿ ನಡೆದ ಭದ್ರತಾ ಲೋಪ ಕರ್ನಾಟಕ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲೂ ಪ್ರತಿಧ್ವನಿಸಿತು. ಈ ವೇಳೆ ಮಾತನಾಡಿದ ಬಿ ಕೆ ಹರಿಪ್ರಸಾದ್‌, “ಘಟನೆಯನ್ನ ನಾನು ಖಂಡಿಸುತ್ತೇನೆ. ಈ‌ ಹಿಂದೆ ಉಗ್ರಗಾಮಿಗಳು ‌ಸಂಸತ್‌ ಭವನದ ಮೇಲೆ ದಾಳಿ‌ ನಡೆಸಿದ್ದರು. ‌ಹುತಾತ್ಮರಿಗೆ ಸಂತಾಪ ಸೂಚಿಸುವ ದಿನವೇ‌ ಈ ಘಟನೆ ನಡೆದಿದೆ. ಹೊಸ‌ ಪಾರ್ಲಿಮೆಂಟ್ ಕಟ್ಟಡ ಕಟ್ಟಿದ್ದಾರೆ. ಆದರೂ‌ ದೇಶದ ಭದ್ರತೆ ಕುಸಿದಿದೆ” ಎಂದರು.

ಶಿವಾಜಿನಗರದ ಕಾಂಗ್ರೆಸ್‌ ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿ, “ಸುಮಾರು 22 ವರ್ಷಗಳ ಹಿಂದೆ ಸಂಸತ್ ಭವನದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಆಗ ಅನೇಕರು ಪ್ರಾಣ ಕಳೆದುಕೊಂಡಿದ್ದರು.‌ ಇದೀಗ 22 ವರ್ಷಗಳ ಬಳಿಕ ಇದೇ ದಿನ ಈ ಘಟನೆ ನಡೆದಿದೆ. ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವೈಫಲ್ಯ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯುವಕರು ಬಳಸಿದ ಪಾಸ್ ಸಂಸದ ಪ್ರತಾಪ್ ಸಿಂಹ ಕಚೇರಿಯದ್ದೇ ಆಗಿದ್ದರೆ ಮೊದಲು ಅವರ ಮೇಲೆ ಪ್ರಕರಣ ದಾಖಲಿಸಬೇಕು. ನಮ್ಮವರು ಪಾಸ್ ಪಡೆದಿದ್ದರೆ ಬಿಜೆಪಿಯವರು ಸುಮ್ಮನೆ ಇರ್ತಿದ್ರಾ” ಎಂದು ಪ್ರಶ್ನಿಸಿದರು.

ಸುವರ್ಣ ಸೌಧದಲ್ಲಿ ಬಿಗಿ ಭದ್ರತೆ

ಲೋಕಸಭೆಯಲ್ಲಿ ಭದ್ರತಾ ಲೋಪದ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣ ಸೌಧದಲ್ಲಿ ಭದ್ರತೆ ಬಿಗಿಗೊಳಿಸಲಾಗುತ್ತಿದೆ. ಸ್ಪೀಕರ್ ಯುಟಿ ಖಾದರ್ ಸೂಚನೆಯಂತೆ ಸುವರ್ಣ ಸೌಧದ ಒಳಭಾಗದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸುವ ಮೂಲಕ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...